AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
TV9 Web
| Edited By: |

Updated on:Jul 14, 2021 | 12:30 PM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಶೈಕ್ಷಣಿಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗದ ಕನಿಷ್ಠ ಶೇ. 80ರಷ್ಟು ವಿದ್ಯಾರ್ಥಿಗಳಿಗಾದರೂ ಕೊವಿಡ್ ಲಸಿಕೆ ನೀಡಿ ಹಾಗೂ ಬಾಕಿ ಇರುವ ವಿವಿಧ ಸೆಮಿಸ್ಟರ್ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕು ಎಂಬ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಚಿಂತಿಸಿದೆ. ಆದ್ರೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಧರಣಿಗೆ ಮುಂದಾಗಿದ್ದಾರೆ.

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ. ಕೂಡಲೇ ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿಯ ಮುಂಭಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೂ ಆಫ್ ಲೈನ್ ಪರೀಕ್ಷೆ ರದ್ದತಿಗೆ ಒತ್ತಾಯಿಸಿದ್ದಾರೆ.

ಅನೇಕ ಕಾಲೇಜುಗಳಲ್ಲಿ ಲಸಿಕೆ ಕಾರ್ಯಕ್ರಮ ಪೂರ್ಣವಾಗಿಲ್ಲ. ಹೀಗಿರುವಾಗ ಆಫ್ ಲೈನ್ ತರಗತಿ, ಪರೀಕ್ಷೆ ನಡೆಸಬಾರದೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಒಂದೇ ಬಾರಿ 2 ಸೆಮಿಸ್ಟರ್ ಪರೀಕ್ಷೆ ಕೈಬಿಡುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ನಡೆಸುತ್ತಿರುವ ಧರಣಿಗೆ AIDSO ವಿದ್ಯಾರ್ಥಿ ಸಂಘಟನೆ ಸಾಥ್ ಕೊಟ್ಟಿದೆ. Maharani cluster university

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

Published On - 12:14 pm, Wed, 14 July 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ