AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿ ಆಪರೇಷನ್: ಮಹಾ ಸಿಎಂ ಏಕನಾಥ್ ಶಿಂಧೆ ಶಾಕಿಂಗ್ ಹೇಳಿಕೆ

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯಲಿದೆ ಎಂಬ ಬಗ್ಗೆ ಇದೀಗ ಮತ್ತೊಂದು ಸುಳಿವು ದೊರೆತಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮಾತನಾಡಿರುವುದು ಈಗ ಸದ್ದು ಮಾಡುತ್ತಿದೆ. ಕರ್ನಾಟಕದಲ್ಲಿ ಆಪರೇಷನ್ ಕಮಲದ ಬಗ್ಗೆ ಶಿಂಧೆ ಏನಂದರು ಎಂಬ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿ ಆಪರೇಷನ್: ಮಹಾ ಸಿಎಂ ಏಕನಾಥ್ ಶಿಂಧೆ ಶಾಕಿಂಗ್ ಹೇಳಿಕೆ
ಏಕನಾಥ್ ಶಿಂಧೆ
Ganapathi Sharma
|

Updated on:May 13, 2024 | 1:05 PM

Share

ಬೆಂಗಳೂರು, ಮೇ 13: ಲೋಕಸಭೆ ಚುನಾವಣೆ (Lok Sabha Polls) ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಪತನವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಸುಳಿವು ನೀಡಿದ್ದಾರೆ. ತೆರೆಯ ಮರೆಯಲ್ಲಿ ಕರ್ನಾಟಕದ ಬಿಜೆಪಿ ನಾಯಕರಿಂದಲೇ ತಮಗೆ ಆಪರೇಷನ್​​ ಮಾಡಲು (Operation Kamala) ಆಹ್ವಾನವಿದೆ ಎಂದಿರುವ ಅವರು, ‘ನಾಥ್’ ಮಾದರಿ ಆಪರೇಷನ್ ಮಹಾರಾಷ್ಟ್ರದಲ್ಲಿ ಖ್ಯಾತಿ ಗಳಿಸಿದೆ. ಅದೇ ಮಾದರಿಯ ಆಪರೇಷನ್​​ಗೆ ಕರ್ನಾಟಕದಿಂದಲೂ ಆಹ್ವಾನವಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಸತರಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮೇ 9 ರಂದು ಏಕನಾಥ್ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆಗ ಮಾತನಾಡಿದ್ದ ಶಿಂಧೆ, ಲೋಕಸಭೆಯ ನಂತರ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರು.

ಚುನಾವಣಾ ಪ್ರಚಾರದ ನಿಮಿತ್ತ ಬೆಳಗಾವಿಗೆ ಹೋಗಿದ್ದಾಗ ಅಲ್ಲಿನ ಬಿಜೆಪಿ ಪದಾಧಿಕಾರಿಗಳು ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ನನ್ನನ್ನು ಭೇಟಿಯಾಗಲು ಉತ್ಸುಕತೆಯಿಂದ ಬಂದಿದ್ದರು. ಈ ‘ನಾಥ’ ಯಾರೆಂದು ನೋಡಲು ಬಯಸಿದ್ದರು. ಆಗ, ಲೋಕಸಭೆ ಚುನಾವಣೆ ನಂತರ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ‘ನಾಥ್’ ಮಾದರಿ ಆಪರೇಷನ್​ಗೆ ಮನವಿ ಮಾಡಿದ್ದರು ಎಂದು ಶಿಂಧೆ ಹೇಳಿದ್ದಾರೆ.

ಆದರೆ, ಕರ್ನಾಟಕ ಸರ್ಕಾರ ಚುನಾವಣೆ ನಂತರ ಪತನವಾಗಲಿದೆಯೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಲು ಶಿಂಧೆ ನಿರಾಕರಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಆ ಬಗ್ಗೆ ಕೇಳಿದಾಗ ಸುಮ್ಮನೆ ನಕ್ಕು ಅಲ್ಲಿಂದ ತೆರಳಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್​ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತ

ಶಿಂಧೆ ಹೇಳಿಕೆಗೆ ಕರ್ನಾಟಕದ ಬಿಜೆಪಿ ನಾಯಕರು ಈವರೆಗೆ ಪ್ರತಿಕ್ರಿಯೆ ನೀಡಿಲ್ಲ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ನಂತರ ಆಪರೇಷನ್ ಕಮಲ ನಡೆಯಲಿದೆ ಎಂಬ ಬಗ್ಗೆ ಈ ಹಿಂದೆಯೂ ಹಲವು ಬಾರಿ ವದಂತಿಗಳು ಹರಿದಾಡಿವೆ. ಅದಕ್ಕೆ ಕಾಂಗ್ರೆಸ್ ನಾಯಕರೂ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Mon, 13 May 24

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​