AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿ ಆಪರೇಷನ್: ಮಹಾ ಸಿಎಂ ಏಕನಾಥ್ ಶಿಂಧೆ ಶಾಕಿಂಗ್ ಹೇಳಿಕೆ

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯಲಿದೆ ಎಂಬ ಬಗ್ಗೆ ಇದೀಗ ಮತ್ತೊಂದು ಸುಳಿವು ದೊರೆತಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮಾತನಾಡಿರುವುದು ಈಗ ಸದ್ದು ಮಾಡುತ್ತಿದೆ. ಕರ್ನಾಟಕದಲ್ಲಿ ಆಪರೇಷನ್ ಕಮಲದ ಬಗ್ಗೆ ಶಿಂಧೆ ಏನಂದರು ಎಂಬ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿ ಆಪರೇಷನ್: ಮಹಾ ಸಿಎಂ ಏಕನಾಥ್ ಶಿಂಧೆ ಶಾಕಿಂಗ್ ಹೇಳಿಕೆ
ಏಕನಾಥ್ ಶಿಂಧೆ
ಗಣಪತಿ ಶರ್ಮಾ
|

Updated on:May 13, 2024 | 1:05 PM

Share

ಬೆಂಗಳೂರು, ಮೇ 13: ಲೋಕಸಭೆ ಚುನಾವಣೆ (Lok Sabha Polls) ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಪತನವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಸುಳಿವು ನೀಡಿದ್ದಾರೆ. ತೆರೆಯ ಮರೆಯಲ್ಲಿ ಕರ್ನಾಟಕದ ಬಿಜೆಪಿ ನಾಯಕರಿಂದಲೇ ತಮಗೆ ಆಪರೇಷನ್​​ ಮಾಡಲು (Operation Kamala) ಆಹ್ವಾನವಿದೆ ಎಂದಿರುವ ಅವರು, ‘ನಾಥ್’ ಮಾದರಿ ಆಪರೇಷನ್ ಮಹಾರಾಷ್ಟ್ರದಲ್ಲಿ ಖ್ಯಾತಿ ಗಳಿಸಿದೆ. ಅದೇ ಮಾದರಿಯ ಆಪರೇಷನ್​​ಗೆ ಕರ್ನಾಟಕದಿಂದಲೂ ಆಹ್ವಾನವಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಸತರಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮೇ 9 ರಂದು ಏಕನಾಥ್ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆಗ ಮಾತನಾಡಿದ್ದ ಶಿಂಧೆ, ಲೋಕಸಭೆಯ ನಂತರ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರು.

ಚುನಾವಣಾ ಪ್ರಚಾರದ ನಿಮಿತ್ತ ಬೆಳಗಾವಿಗೆ ಹೋಗಿದ್ದಾಗ ಅಲ್ಲಿನ ಬಿಜೆಪಿ ಪದಾಧಿಕಾರಿಗಳು ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ನನ್ನನ್ನು ಭೇಟಿಯಾಗಲು ಉತ್ಸುಕತೆಯಿಂದ ಬಂದಿದ್ದರು. ಈ ‘ನಾಥ’ ಯಾರೆಂದು ನೋಡಲು ಬಯಸಿದ್ದರು. ಆಗ, ಲೋಕಸಭೆ ಚುನಾವಣೆ ನಂತರ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ‘ನಾಥ್’ ಮಾದರಿ ಆಪರೇಷನ್​ಗೆ ಮನವಿ ಮಾಡಿದ್ದರು ಎಂದು ಶಿಂಧೆ ಹೇಳಿದ್ದಾರೆ.

ಆದರೆ, ಕರ್ನಾಟಕ ಸರ್ಕಾರ ಚುನಾವಣೆ ನಂತರ ಪತನವಾಗಲಿದೆಯೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಲು ಶಿಂಧೆ ನಿರಾಕರಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಆ ಬಗ್ಗೆ ಕೇಳಿದಾಗ ಸುಮ್ಮನೆ ನಕ್ಕು ಅಲ್ಲಿಂದ ತೆರಳಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್​ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತ

ಶಿಂಧೆ ಹೇಳಿಕೆಗೆ ಕರ್ನಾಟಕದ ಬಿಜೆಪಿ ನಾಯಕರು ಈವರೆಗೆ ಪ್ರತಿಕ್ರಿಯೆ ನೀಡಿಲ್ಲ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ನಂತರ ಆಪರೇಷನ್ ಕಮಲ ನಡೆಯಲಿದೆ ಎಂಬ ಬಗ್ಗೆ ಈ ಹಿಂದೆಯೂ ಹಲವು ಬಾರಿ ವದಂತಿಗಳು ಹರಿದಾಡಿವೆ. ಅದಕ್ಕೆ ಕಾಂಗ್ರೆಸ್ ನಾಯಕರೂ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Mon, 13 May 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ