AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಇನ್ನೂ ಆರದ ನಾಡದ್ರೋಹಿ ಘೋಷಣೆ ಕಿಚ್ಚು, ಮಹಾರಾಷ್ಟ್ರ ಸಚಿವನಿಂದ ಗುಪ್ತ್ ಗುಪ್ತ್ ಸಭೆ

ಬೆಳಗಾವಿ: ಕುಂದಾನಗರಿ ಬೆಳಗಾವಿ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ. ಯಾವಾಗ ಏನು ಬೇಕಾದರೂ ಆಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಹೀಗಿರುವಾಗಲೇ ನಮ್ಮ ನೆಲಕ್ಕೆ ಬಂದೂ ನಾಡದ್ರೋಹಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಪುಂಡರಿಗೆ ಬ್ರೇಕ್ ಹಾಕೋರೆ ಇಲ್ಲದಂತಾಗಿದೆ. ಕುಂದಾನಗರಿ ಈಗ ಕೊತ ಕೊತ ಅಂತಿದೆ. ಎಂಇಎಸ್ ಪುಂಡರ ಹಾವಳಿಯಿಂದ ಹೊತ್ತಿ ಉರಿಯುತ್ತಿದೆ. ಎಲ್ಲೆಲ್ಲೂ ಆಕ್ರೋಶ ಭುಗಿಲೆದ್ದಿದೆ.. ಕಿಚ್ಚು ಜ್ವಾಲೆಯಂತೆ ಸ್ಫೋಟಗೊಂಡಿದೆ. ಇಂಥಾ ಹೊತ್ತಲ್ಲೇ ನಾಡದ್ರೋಹಿ ಘೋಷಣೆ ಕೂಗಿದ್ದ ಮಹಾರಾಷ್ಟ್ರ ಸಚಿವನೊಬ್ಬ ಬೆಳಗಾವಿಯಲ್ಲಿದ್ದೇ ನರಿಬುದ್ಧಿ ತೋರಿಸಿದ್ದಾನೆ. ನಾಡದ್ರೋಹಿ ಘೋಷಣೆ ಕೂಗಿದ್ದ […]

ಬೆಳಗಾವಿಯಲ್ಲಿ ಇನ್ನೂ ಆರದ ನಾಡದ್ರೋಹಿ ಘೋಷಣೆ ಕಿಚ್ಚು, ಮಹಾರಾಷ್ಟ್ರ ಸಚಿವನಿಂದ ಗುಪ್ತ್ ಗುಪ್ತ್ ಸಭೆ
ಸಾಧು ಶ್ರೀನಾಥ್​
|

Updated on:Jan 02, 2020 | 10:45 AM

Share

ಬೆಳಗಾವಿ: ಕುಂದಾನಗರಿ ಬೆಳಗಾವಿ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ. ಯಾವಾಗ ಏನು ಬೇಕಾದರೂ ಆಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಹೀಗಿರುವಾಗಲೇ ನಮ್ಮ ನೆಲಕ್ಕೆ ಬಂದೂ ನಾಡದ್ರೋಹಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಪುಂಡರಿಗೆ ಬ್ರೇಕ್ ಹಾಕೋರೆ ಇಲ್ಲದಂತಾಗಿದೆ.

ಕುಂದಾನಗರಿ ಈಗ ಕೊತ ಕೊತ ಅಂತಿದೆ. ಎಂಇಎಸ್ ಪುಂಡರ ಹಾವಳಿಯಿಂದ ಹೊತ್ತಿ ಉರಿಯುತ್ತಿದೆ. ಎಲ್ಲೆಲ್ಲೂ ಆಕ್ರೋಶ ಭುಗಿಲೆದ್ದಿದೆ.. ಕಿಚ್ಚು ಜ್ವಾಲೆಯಂತೆ ಸ್ಫೋಟಗೊಂಡಿದೆ. ಇಂಥಾ ಹೊತ್ತಲ್ಲೇ ನಾಡದ್ರೋಹಿ ಘೋಷಣೆ ಕೂಗಿದ್ದ ಮಹಾರಾಷ್ಟ್ರ ಸಚಿವನೊಬ್ಬ ಬೆಳಗಾವಿಯಲ್ಲಿದ್ದೇ ನರಿಬುದ್ಧಿ ತೋರಿಸಿದ್ದಾನೆ.

ನಾಡದ್ರೋಹಿ ಘೋಷಣೆ ಕೂಗಿದ್ದ ಸಚಿವನ ಕಳ್ಳಾಟ..! ಗಡಿವಿವಾದ ಭುಗಿಲೆದ್ದಿರುವಾಗಲೇ ಮಹಾರಾಷ್ಟ್ರ ಸಚಿವ ಹಸನ್ ಮುಶ್ರಿಪ್ ಬೆಳಗಾವಿಗೆ ಕಾಲಿಟ್ಟಿದ್ದಾರೆ. ಇದೇ ಹಸನ್ ಮುಶ್ರಿಪ್ ಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವಾಗ ನಾಡದ್ರೋಹಿ ಘೋಷಣೆ ಕೂಗಿದ್ರು. ಜೈ ಸೀಮಾಭಾಗ್ ಸಂಯುಕ್ತ ಮಹಾರಾಷ್ಟ್ರ ಅಂತಾ ಘೋಷಣೆ ಕೂಗಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ರು.

ಆದ್ರೀಗ ಇದೇ ಮುಶ್ರಿಪ್, ಬೆಳಗಾವಿಯಲ್ಲಿ ಗುಪ್ತಸಭೆ ನಡೆಸಿದ್ದಾರೆ. ಕೊಲ್ಹಾಪುರ ಜಿ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಜಿ.ಪಂ.ಸದಸ್ಯರ ಜೊತೆ ಸಭೆ ನಡೆಸಿದ್ದಾರೆ. ಇದಕ್ಕೂ ಮೊದಲು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದ ಮುಶ್ರಿಪ್​ಗೆ ಶಿವಸೇನೆ ಮುಖಂಡರು ಅದ್ಧೂರಿ ಸ್ವಾಗತ ಕೋರಿದ್ರು. ಇದು ಕೂಡ ಕನ್ನಡಿಗರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ನಾಡದ್ರೋಹಿಗಳಿಗೆ ಬೆಳಗಾವಿ ಪ್ರವೇಶಿಸದಂತೆ ನಿಷೇಧ ಹೇರಲು ಒತ್ತಾಯಿಸಿದ್ದಾರೆ.

ಶರದ್ ಪವಾರ್ ಕರೆತರಲು ಎಂಇಎಸ್ ತಯಾರಿ: ಇನ್ನು, ಬೆಳಗ್ಗೆ ಎಂಇಎಸ್ ಮುಖಂಡರ ಜತೆಗೆ ಹಸನ್ ಮಾತುಕತೆ ಮಾಡಲಿದ್ದಾರೆ. ಬಳಿಕ ಎಲ್ಲ ಜಿ.ಪಂ ಸದಸ್ಯರನ್ನ ಕರೆದುಕೊಂಡು ಕೊಲ್ಹಾಪುರಕ್ಕೆ ತೆರಳಲಿದ್ದಾರೆ ಎನ್ನಲಾಗ್ತಿದೆ. ಮತ್ತೊಂದ್ಕಡೆ, ಜನವರಿ 22 ರಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್​ರನ್ನ ಬೆಳಗಾವಿಗೆ ಕರೆದುಕೊಂಡು ಬರಲು ಎಂಇಎಸ್ ಪ್ಲ್ಯಾನ್ ಮಾಡಿದೆ. ಎಂಇಎಸ್ ಮುಖಂಡರು, ಈ ಕುರಿತು ಕೂಡ ಚರ್ಚೆ ನಡೆಸಲಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಿಸಿ ಭೇಟಿಯಾಗಿ ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ವೇಳೆ, ಶರದ್​ರನ್ನು ಕರೆದುಕೊಂಡು ಸಭೆ ಮಾಡುತ್ತಿದ್ದೇವೆ. ಅನುಮತಿ ನೀಡಿ ಅಂತಾ ಮನವಿ ಸಲ್ಲಿಸಲಿದ್ದಾರೆ..

ಇನ್ನು, ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಎಚ್ಚೆತ್ತುಕೊಂಡು ನಾಡದ್ರೋಹಿಗಳಿಗೆ ನಿರ್ಬಂಧ ಹೇರಬೇಕು ಅಂತಾ ಕನ್ನಡಿಗರು ಒತ್ತಾಯಿಸಿದ್ದಾರೆ. ಇಲ್ಲವಾದರೆ ಮತ್ತೆ ಕುಂದಾನಗರಿಯಲ್ಲಿ ಎಂಇಎಸ್ ಕ್ಯಾತೆ ತೆಗೆದು ಕನ್ನಡಿಗರ ನೆಮ್ಮದಿ ಹಾಳು ಮಾಡುವ ಯತ್ನ ಮಾಡುತ್ತೆ. ಇತ್ತ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕಿದೆ ಅಂತಾ ಆಗ್ರಹಿಸಿದ್ದಾರೆ.

Published On - 6:12 am, Thu, 2 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್