ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್ ವೇಯಲ್ಲಿ ತಪ್ಪಿತು ಭಾರೀ ದುರಂತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

ಕಂಟೇನರ್ ಟ್ರಕ್ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನ ಲೇನ್ ಪ್ರವೇಶಿಸಿದೆ. ಮತ್ತೂ ಮುಂದುವರಿದು ಹೆದ್ದಾರಿ ಮತ್ತು ಸರ್ವಿಸ್ ರಸ್ತೆಯನ್ನು ಬೇರ್ಪಡಿಸುವ ತಡೆಗೋಡೆ ಮೇಲೆ ನಿಂತಿತ್ತು.

Follow us
| Updated By: ಗಣಪತಿ ಶರ್ಮ

Updated on:Jul 14, 2023 | 3:16 PM

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​​​​ಪ್ರೆಸ್​ ವೇಯಲ್ಲಿ (Bengaluru Mysuru Expressway) ಭಾರಿ ಗಾತ್ರದ ಕಂಟೇನರ್ ಟ್ರಕ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯವುದೇ ಸಾವು-ನೋವು ಸಂಭವಿಸಿಲ್ಲ. ಆದರೆ, ಅಪಘಾತದ ತೀವ್ರತೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವೇಗವಾಗಿ ಸಾಗುತ್ತಿದ್ದ ಭಾರಿ ಕಂಟೇನರ್ ಟ್ರಕ್ ಚಾಲಕನ ನಿಯಂತ್ರಣ ತಪ್ಪಿದ ಡಿವೈಡರ್ ಅನ್ನು ದಾಟಿ ಎದುರಿನ ಲೇನ್ ಪ್ರವೇಶಿಸಿತು. ನಂತರ ತಡೆಗೋಡೆಗೆ ಗುದ್ದಿ ಸರ್ವೀಸ್​ ರಸ್ತೆಗೆ ವಾಲಿದೆ. ರಾಮನಗರ ಜಿಲ್ಲೆಯಲ್ಲಿ ಜುಲೈ 12 ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿ ಈಗ ಬಿಡುಗಡೆಗೊಂಡಿದೆ.

ಹೆದ್ದಾರಿ ಪಕ್ಕದ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿತ್ತು.

ಕಂಟೇನರ್ ಟ್ರಕ್ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನ ಲೇನ್ ಪ್ರವೇಶಿಸಿದೆ. ಮತ್ತೂ ಮುಂದುವರಿದು ಹೆದ್ದಾರಿ ಮತ್ತು ಸರ್ವಿಸ್ ರಸ್ತೆಯನ್ನು ಬೇರ್ಪಡಿಸುವ ತಡೆಗೋಡೆ ಮೇಲೆ ನಿಂತಿತ್ತು.

ಅದೃಷ್ಟವಶಾತ್ ಎದುರಿನ ಲೇನ್​​ನಲ್ಲಿ ರಸ್ತೆಯಲ್ಲಿ ಆ ಕ್ಷಣ ಯಾವುದೇ ವಾಹನ ಬಾರದ ಕಾರಣ ಭಾರಿ ಅನಾಹುತ ತಪ್ಪಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸಣಕಲಗೆರೆ ಗ್ರಾಮದಲ್ಲಿ ಜುಲೈ 12 ರಂದು ಮಧ್ಯಾಹ್ನ 1:06 ಕ್ಕೆ ಈ ಘಟನೆ ನಡೆದಿದೆ. ಚಾಲಕನ ವಿರುದ್ಧ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru-Mysuru Expressway: ಉದ್ಘಾಟನೆಯಾದಗಿನಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತಗಳೆಷ್ಟು? ಇಲ್ಲಿದೆ ಅಂಕಿ-ಅಂಶ

ಬೆಂಗಳೂರು ಮತ್ತು ಮೈಸೂರನ್ನು ಸಂಪರ್ಕಿಸುವ ಆರು ಪಥಗಳ ಎತ್ತರವನ್ನು ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.

ಆ ಬಳಿಕ ಈ ಹೆದ್ದಾರಿ ಹಲವಾರು ಅಪಘಾತಗಳಿಗೆ ಸಾಕ್ಷಿಯಾಗಿದ್ದು, ಸೋಮವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ ಈ ವಿಷಯವನ್ನು ಪ್ರಸ್ತಾಪಿಸಿದೆ. ಹೆದ್ದಾರಿಯಲ್ಲಿ ಜೂನ್ 30 ರವರೆಗೆ 100 ಜನರು ಸಾವನ್ನಪ್ಪಿದ್ದಾರೆ ಮತ್ತು 335 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತನ್ನ ಉತ್ತರದಲ್ಲಿ ತಿಳಿಸಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (ಎನ್‌ಎಚ್‌ಎಐ) ಸುರಕ್ಷತಾ ಲೆಕ್ಕಪರಿಶೋಧನಾ ವರದಿಯನ್ನು ಕೇಳಲಾಗಿದೆ ಎಂದು ಸರ್ಕಾರ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Thu, 13 July 23

ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ