Karnataka Dam Water Level: ಜು.18ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಜುಲೈ18ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.
![Karnataka Dam Water Level: ಜು.18ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ](https://images.tv9kannada.com/wp-content/uploads/2023/07/Bdra-dam.jpg?w=1280)
ಈ ಬಾರಿ ಕರ್ನಾಟಕದಲ್ಲಿ ಮುಂಗಾರು ಮಳೆ (Karnataka Rain) ಕಡಿಮೆಯಾಗಿದೆ. ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಸಾಧಾರಣ ಮಳೆಯಾಗುತ್ತಿದೆ. ಇನ್ನು ತುಂಗಭದ್ರ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದ ನದಿ ಪಾತ್ರದ ಜನರು ಮೀನುಗಾರಿಕೆಗೆ ಮುಂದಾಗಿದ್ದಾರೆ. ರಾಜ್ಯದ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರೊಂದಿಗೆ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬುವುದನ್ನು ನೋಡೋಣ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 25.41 | 86.72 | 12181 | 561 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 9.99 | 96.08 | 5814 | 252 |
ಮಲಪ್ರಭಾ ಜಲಾಶಯ (Malaprabha Dam) | 633.8 | 37.73 | 6.81 | 21.18 | 877 | 194 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 24.04 | 82.27 | 7827 | 2053 |
ಕಬಿನಿ ಜಲಾಶಯ (Kabini Dam) | 696.13 | 19.52 | 11.66 | 18.59 | 1921 | 800 |
ಭದ್ರಾ ಜಲಾಶಯ (Bhadra Dam) | 657.73 | 71.54 | 27.81 | 66.79 | 511 | 164 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51 | 6.33 | 27.57 | 5044 | 92 |
ಹೇಮಾವತಿ ಜಲಾಶಯ (Hemavathi Dam) | 890.58 | 37.1 | 16.17 | 35.46 | 1862 | 50 |
ವರಾಹಿ ಜಲಾಶಯ (Varahi Dam) | 594.36 | 31.1 | 4.78 | 12.68 | 1231 | 216 |
ಹಾರಂಗಿ ಜಲಾಶಯ (Harangi Dam) | 871.38 | 8.5 | 4.73 | 7.05 | 2239 | 50 |
ಸೂಫಾ (Supa Dam) | 564.33 | 145.33 | 34.96 | 59.66 | 8808 | 4775 |
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಸತಾರಾ, ಕರಾಡ, ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತುದೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಮಾಂಜರಿ – ಬಾವನಸೌದತ್ತಿ ಸಂಪರ್ಕಿಸುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತಗೊಂಡಿದೆ. ಇದರಿಂದ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮ ಮಧ್ಯೆ ಸಂಪರ್ಕ ಕಟ್ ಆಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:31 am, Tue, 18 July 23