AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ ಯೋಜನೆಗೆ ಭಾರಿ ಹಿನ್ನಡೆ: ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನಿರಾಕರಿಸಿದ ಕೇಂದ್ರ, ಇದೆ ಬಲವಾದ ಕಾರಣ

ಕೇಂದ್ರ ಸರ್ಕಾರವು ಎತ್ತಿನಹೊಳೆ ಯೋಜನೆಗೆ ಅಗತ್ಯವಾದ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗೆ ಅನುಮೋದನೆ ನೀಡಲು ನಿರಾಕರಿಸಿದೆ. ಇದರಿಂದ ಯೋಜನೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಅನುಮೋದನೆ ಪಡೆಯುವ ಮೊದಲೇ ಅರಣ್ಯ ಭೂಮಿಯ ಬಳಕೆ, ಈ ಹಿಂದೆ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡುವ ವೇಳೆ ವಿಧಿಸಿದ್ದ ಷರತ್ತುಗಳನ್ನು ಪಾಲಿಸದೇ ಇರುವುದು ಇದಕ್ಕೆ ಕಾರಣವಾಗಿದೆ.

ಎತ್ತಿನಹೊಳೆ ಯೋಜನೆಗೆ ಭಾರಿ ಹಿನ್ನಡೆ: ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನಿರಾಕರಿಸಿದ ಕೇಂದ್ರ, ಇದೆ ಬಲವಾದ ಕಾರಣ
ಎತ್ತಿನಹೊಳೆ ಯೋಜನೆ
ಮಹೇಶ್ ಇ, ಭೂಮನಹಳ್ಳಿ
| Updated By: Ganapathi Sharma|

Updated on: Jul 08, 2025 | 8:20 AM

Share

ನವದೆಹಲಿ, ಜುಲೈ 8: ಹಾಸನ ಜಿಲ್ಲೆಯ ಸಕಲೇಶಪುರ ಪರಿಸರದಿಂದ ಬಯಲು ಸೀಮೆಯ ಜಿಲ್ಲೆಗಳಿಗೆ ನೀರು ಹರಿಸುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ (Yettinahole Project) ಇದೀಗ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಯೋಜನೆಗೆ ಅಗತ್ಯವಿದ್ದ ಹೆಚ್ಚುವರಿ 423 ಎಕರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮೋದನೆ ನಿರಾಕರಿಸಿದೆ. ಇದರಿಂದ, ಯೋಜನೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಹಾಸನ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯ 432 ಎಕರೆ ಅರಣ್ಯ ಭೂಮಿಯನ್ನು ‘ಗುರುತ್ವಾಕರ್ಷಣೆ ಕಾಲುವೆ’ ನಿರ್ಮಾಣಕ್ಕೆ ಬಳಸುವ ನಿಟ್ಟಿನಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿಯ ಅಧೀನದಲ್ಲಿದ್ದ ಡಿಐಜಿಎಫ್ ಪ್ರಣಿತಾ ಪೌಲ್ ನೇತೃತ್ವದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು.

ಜೂನ್ 26ರಂದು ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಹೆಚ್ಚುವರಿ ಅರಣ್ಯ ಭೂಮಿ ಬಳಕೆ ಪ್ರಸ್ತಾವನೆ ಕುರಿತು ಚರ್ಚೆಯಾಗಿತ್ತು. ಅಂತಿಮವಾಗಿ ಕೇಂದ್ರ ಅರಣ್ಯ ಇಲಾಖೆಯು ಹೆಚ್ಚುವರಿ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡಿಲ್ಲ.

ಅನುಮೋದನೆಗೂ ಮೊದಲೇ ಅರಣ್ಯ ಭೂಮಿ ಬಳಕೆಯಿಂದ ಹಿನ್ನಡೆ

ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯದಿಂದ ಅನುಮೋದನೆ ಲಭ್ಯವಾಗುವ ಮೊದಲೇ ಅರಣ್ಯ ಭೂಮಿಯನ್ನು ಬಳಸಲಾಗಿದೆ ಎಂದು ಡಿಐಜಿಎಫ್ ಪ್ರಣಿತಾ ಪೌಲ್ ನೇತೃತ್ವದ ಅಧಿಕಾರಿಗಳ ತಂಡ ಕೇಂದ್ರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ತಿಳಿಸಿತ್ತು.

ಇದನ್ನೂ ಓದಿ
Image
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Image
ಹೈಟೆಕ್ ಆಗಲಿದೆ ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣ!
Image
250 ಕೋಟಿ ರೂ. ಬಾಕಿ ಕೊಡದ ಸರ್ಕಾರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್
Image
ಎತ್ತಿನಹೊಳೆ‌ ಡ್ಯಾಂ ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ಜನರಿಂದಲೂ ವಿರೋಧ!

ನಿಯಮ ಉಲ್ಲಂಘನೆ, ಶಿಸ್ತು ಕ್ರಮಕ್ಕೆ ಶಿಫಾರಸು

ಅನುಮೋದನೆ ಲಭ್ಯವಾಗುವ ಮೊದಲೇ ಅರಣ್ಯ ಭೂಮಿಯನ್ನು ಬಳಸಿ ಯೋಜನೆಯಲ್ಲಿ ಭಾಗಿಯಾದ ಸರ್ಕಾರಿ ಅಧಿಕಾರಿಗಳು ಅರಣ್ಯ ನಿಯಮ ಉಲ್ಲಂಘಿಸಿರುವುದಾಗಿ ಸಮಿತಿಯು ವರದಿ ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂಬ ಶಿಫಾರಸು ಮಾಡಿದೆ. ಜೊತೆಗೆ, ಲೋಪಗಳನ್ನು ಸರಿಪಡಿಸಿ ಸಮಜಾಯಿಷಿ ನೀಡಿದ ಬಳಿಕ ಮಾತ್ರ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಪರಿಗಣನೆಗೆ ಒಳಪಡಬಹುದೆಂದು ಸೂಚಿಸಿದೆ.

ಷರತ್ತುಗಳ ಉಲ್ಲಂಘನೆಯೂ ಕಾರಣ

ಎತ್ತಿನಹೊಳೆ ಯೋಜನೆಗೆ 2016 ರಲ್ಲೇ 13.93 ಹೆಕ್ಟೇರ್ ಅರಣ್ಯ ಭೂಮಿ ಬಳಕೆಗೆ ಕೇಂದ್ರವು ಅನುಮೋದನೆ ನೀಡಿದ್ದು, 33 ಷರತ್ತುಗಳನ್ನು ವಿಧಿಸಿತ್ತು. ಆದರೆ ಬಹುತೇಕ ಷರತ್ತುಗಳನ್ನು ಈವರೆಗೆ ಪಾಲನೆ ಮಾಡಲಾಗಿಲ್ಲ. ಕಾಮಗಾರಿಯ ವೇಳೆ ಭೂಕುಸಿತ, ಮಣ್ಣಿನ ಕೊರೆತ, ಮನೆಗಳ ಹಾನಿ ಮುಂತಾದ ಪರಿಸರ ಭೀತಿಗಳು ಉಂಟಾಗಿದ್ದು, ಯಾವುದೇ ಪರಿಹಾರ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂಬ ತೀವ್ರ ಆಕ್ಷೇಪಗಳನ್ನು ಎನ್‌ಜಿಟಿ ಮೇಲ್ವಿಚಾರಣಾ ತಂಡವು 2019ರ ವರದಿಯಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಏನಿದು ಎತ್ತಿನಹೊಳೆ ಯೋಜನೆ? ಇಲ್ಲಿದೆ ಕರ್ನಾಟಕದ ಬೃಹತ್​ ಯೋಜನೆಯ ಆಳ-ಅಗಲ

ಏನಿದು ಎತ್ತಿನಹೊಳೆ ಯೋಜನೆ?

ಎತ್ತಿನಹೊಳೆ ನದಿಯಿಂದ ಸುಮಾರು 24 ಟಿಎಂಸಿ ನೀರನ್ನು ಬಯಲುಸೀಮೆಯ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳತ್ತ ಪೂರ್ವಾಭಿಮುಖವಾಗಿ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಯೋಜನೆಯ ಮೊದಲ ಹಂತದ ಕಾಮಗಾರಿ 2024ರ ಸೆಪ್ಟೆಂಬರ್​​ನಲ್ಲಿ ಸಕಲೇಶಪುರದಲ್ಲಿ ಉದ್ಘಾಟನೆಯಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!