AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ: ನೂತನ ಐವರು ಕಾರ್ಯಾಧ್ಯಕ್ಷರ ನೇಮಕ

ಲೋಕಸಭಾ ಚುನಾವಣೆ ಹೊತ್ತಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹೊಸದಾಗಿ ಐವರನ್ನು ಎಐಸಿಸಿ ನೇಮಿಸಿದೆ. ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್​​ ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ನೇಮಕ ಮಾಡಲಾಗಿದೆ. 

ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ: ನೂತನ ಐವರು ಕಾರ್ಯಾಧ್ಯಕ್ಷರ ನೇಮಕ
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on:Mar 23, 2024 | 6:22 PM

Share

ಬೆಂಗಳೂರು, ಮಾರ್ಚ್​ 23: ಲೋಕಸಭೆ ಚುನಾವಣೆಗೆ ಕೌಂಟ್​​ಡೌನ್​ ಶುರುವಾಗಿದೆ. ಈಗಾಗಲೇ ಮತದಾನದ ದಿನಾಂಕವನ್ನು ಸಹ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದಲ್ಲಿ ಚುನಾವಣಾ ಕಾವು ಜಾಸ್ತಿ ಆಗುತ್ತಿದ್ದು, ಇದರ ಮಧ್ಯೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ (KPCC) ಯಲ್ಲಿ ಮೇಜರ್‌ ಸರ್ಜರಿ ಮಾಡಲಾಗಿದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಐವರು ನೂತನ ಕಾರ್ಯಾಧ್ಯಕ್ಷರನ್ನು ಆಲ್​ ಇಂಡಿಯಾ ಕಾಂಗ್ರೆಸ್​ ಕಮಿಟಿ (ಎಐಸಿಸಿ) ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಯಾರೆಲ್ಲ ನೇಮಕ

  • ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್​, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ನೇಮಕ.
  • ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ನೇಮಕ.
  • ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್‌.ಹನುಮಂತಯ್ಯ ನೇಮಕ.
  • ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ನೇಮಕ

ಸಿದ್ದರಾಮಯ್ಯ, ಶಿವಕುಮಾರ್ ನೇತೃತ್ವದಲ್ಲಿ ಸಭೆ​​: 14 ಕ್ಷೇತ್ರಗಳ ಬಗ್ಗೆ ತಂತ್ರಗಾರಿಕೆ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮೀಟಿಂಗ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಸಚಿವರಾದ ಕೆ.ಜೆ.ಜಾರ್ಜ್‌, ಕೆ.ಹೆಚ್‌.ಮುನಿಯಪ್ಪ, ದಿನೇಶ್ ಗುಂಡೂರಾವ್​, ಕೃಷ್ಣ ಭೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಚಂದ್ರಪ್ಪ, ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್‌, ವಿಧಾನಪರಿಷತ್‌ ಸದಸ್ಯರು.

ಇದನ್ನೂ ಓದಿ: ಸೋನಿಯಾ ಗಾಂಧಿಯ ತೇಜೋವಧೆ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ವ್ಯಾಪ್ತಿಯ ಶಾಸಕರು, ಮಾಜಿ ಶಾಸಕರು, 14 ಕ್ಷೇತ್ರಗಳ ವ್ಯಾಪ್ತಿಯ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದು, ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ಬಗ್ಗೆ ತಂತ್ರಗಾರಿಕೆ ರೂಪಿಸಲಾಗಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:56 pm, Sat, 23 March 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More