AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಯ ಶುಭಾಶಯಗಳು: ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

Makar Sankranti 2024: ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದ ವಿವಿಧ ದೇಗುಲಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ.

ಸಂಕ್ರಾಂತಿಯ ಶುಭಾಶಯಗಳು: ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್
ಸಂಕ್ರಾಂತಿಯ ಶುಭಾಶಯಗಳು: ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್
ಗಣಪತಿ ಶರ್ಮಾ
|

Updated on:Jan 15, 2024 | 10:42 AM

Share

ಬೆಂಗಳೂರು, ಜನವರಿ 15: ಮಕರ ಸಂಕ್ರಾಂತಿ (Makar Sankranti 2024) ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸಿರುವ ಮೋದಿ, ‘ಸಂಕ್ರಾಂತಿಯ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ’ ಎಂದು ಉಲ್ಲೇಖಿಸಿದ್ದಾರೆ.

ಸಾಧನೆ, ಧ್ಯಾನ ಮತ್ತು ದಾನದ ಪವಿತ್ರ ಸಂಪ್ರದಾಯದೊಂದಿಗೆ ಸಂಬಂಧ ಹೊಂದಿರುವ ಪವಿತ್ರ ಹಬ್ಬವಾದ ಮಕರ ಸಂಕ್ರಾಂತಿಯ ಶುಭಾಶಯಗಳು. ಈ ಪ್ರಕೃತಿಯ ಹಬ್ಬದಂದು, ಉತ್ತರಾಯಣ ಪರ್ವ ಕಾಲದಲ್ಲಿ ಸೂರ್ಯ ದೇವರು ನನ್ನ ದೇಶದ ಎಲ್ಲಾ ಕುಟುಂಬ ಸದಸ್ಯರಿಗೆ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಶುಭ ಹಾರೈಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿ ಶಾಂತಿ,‌ ಸೌಹಾರ್ದತೆ, ಸಮೃದ್ಧಿಯ ಕಡೆಗೆ ನಾಡನ್ನು ಮುನ್ನಡೆಸಲಿ. ನಾಡು ಸಮೃದ್ಧ ಮಳೆ, ಬೆಳೆ ಕಂಡು ಕೃಷಿಕ – ಶ್ರಮಿಕರ ಬದುಕಿನಲ್ಲಿ ಸುಖ-ಶಾಂತಿಯ ಫಸಲು ಹುಲುಸಾಗಿ ಬೆಳೆಯಲಿ, ಅವರ ಬಾಳು ಬಂಗಾರವಾಗಲಿ. ನಾಡ ಬಾಂಧವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದ ವಿವಿಧ ದೇಗುಲಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ಸಮಯದಲ್ಲಿ ಅರ್ಥಪೂರ್ಣ ವಸ್ತು ಪ್ರದರ್ಶನ ನಡೆಸಿಕೊಟ್ಟ ಶಿಡ್ಲಘಟ್ಟ ಸಿಟಿಜನ್ ಶಾಲೆಯ ಮಕ್ಕಳು, ವೀಡಿಯೊ ನೋಡಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ದೇಶದ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:42 am, Mon, 15 January 24

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್