AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಸಂಸ್ಕೃತಿ ಎತ್ತಿ ತೋರಿಸುವ ಪವಿತ್ರ ಹಬ್ಬ ಎಳ್ಳು ಅಮಾವಾಸ್ಯೆ.. ಹೊಲಗಳಲ್ಲಿ ರೈತರ ಸಂಭ್ರಮ

ರೈತರ ಪವಿತ್ರ ಹಬ್ಬ ಎಳ್ಳು ಅಮಾವಾಸ್ಯೆಯನ್ನು ಸಡಗರ ಸಂಭ್ರಮದಿಂದ ಜನರು ಆಚರಿಸಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಕುಟುಂಬ ಸಮೇತರಾಗಿ ಹೊಲಕ್ಕೆ ಹೋಗಿ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದಾರೆ.

ಆಹಾರ ಸಂಸ್ಕೃತಿ ಎತ್ತಿ ತೋರಿಸುವ ಪವಿತ್ರ ಹಬ್ಬ ಎಳ್ಳು ಅಮಾವಾಸ್ಯೆ.. ಹೊಲಗಳಲ್ಲಿ ರೈತರ ಸಂಭ್ರಮ
ಎಳ್ಳು ಅಮಾವಾಸ್ಯೆ ಹಬ್ಬದ ಸಡಗರ
shruti hegde
| Edited By: |

Updated on: Jan 13, 2021 | 10:20 PM

Share

ಬೀದರ್: ಪವಿತ್ರ ಹಬ್ಬ ಎಳ್ಳು ಅಮಾವಾಸ್ಯೆಯನ್ನು ರೈತರು ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಕುಟುಂಬ ಸಮೇತರಾಗಿ ಹೊಲಕ್ಕೆ ಹೋಗಿ ಹಬ್ಬದ ಸಂಭ್ರಮದಲ್ಲಿ ಜನರು ತೊಡಗಿದ್ದಾರೆ.

ನಗರವಾಸಿಗಳು ಹಬ್ಬದಲ್ಲಿ ಭಾಗಿ: ಹಳ್ಳಿಯ ಜನರು ಹೊಲದಲ್ಲಿ ಕೂತು ಕಾಳಿನ ಬಜ್ಜಿ, ರೊಟ್ಟಿ ಸೇರಿದಂತೆ ದೇಶಿ ಊಟದ ರುಚಿಯನ್ನು ಸವಿದು ಹಬ್ಬ ಸಂಭ್ರಮಿಸಿರುವುದರ ಜೊತೆಗೆ, ನಗರ ನಿವಾಸಿಗಳು ಒಂದು ದಿನದ ದೇಶಿ ಹಬ್ಬಕ್ಕೆ ಸಾಕ್ಷಿಯಾಗಿದ್ದರು. ಹೊಲದಲ್ಲಿ ಖಡಕ್ ರೊಟ್ಟಿ, ಕೆನೆ ಮೊಸರು, ಕಡುಬು, ಎಣ್ಣೆಗಾಯಿ ಬದನೆಕಾಯಿ ಪಲ್ಯ, ಹಸಿ ಟೊಮೊಟೊ, ಹಸಿ ಮೆಣಸಿನಕಾಯಿ ಮತ್ತು ಹಸಿ ಈರುಳ್ಳಿ ಚಟ್ನಿ, ಅಗಸೆ, ಶೇಂಗಾ ಚಟ್ನಿಪುಡಿ, ಅವರೆಕಾಳು, ಹೆಸರು, ಶೇಂಗಾ ಹೋಳಿಗೆ, ಸಜ್ಜಕ ಹೋಳಿಗೆ , ಬೇಳೆ ಹೋಳಿಗೆ ಹೀಗೆ ವಿವಿಧ ರೀತಿಯ ಅಡುಗೆ ಸಿದ್ಧಗೊಂಡಿತ್ತು.

ಸಾಂಪ್ರದಾಯಿಕ ಹಬ್ಬ: ಜೋಳದ ಕಿಚಡಿಗೆ ಎಲ್ಲ ಅಡುಗೆ ಮಿಶ್ರಣ ಮಾಡಿ ‘ಹರಿಗೋ ಮುರಿಗೋ’ ಎಂದೆನ್ನುತ್ತಾ (ಚರಗ ಚೆಲ್ಲುವರು) ಹೊಲದ ನಾಲ್ಕು ದಿಕ್ಕಿಗೆ ಸಿಂಪಡಿಸುತ್ತಾರೆ. ಆ ದಿನ ಹೊಲದಲ್ಲಿಯ ಗ್ರಾಮದೇವತೆ ಲಕ್ಷ್ಮಿಗೆ ಹೊಸ ಹೊದಿಕೆ ತೊಡಿಸಿ ಉಡಿ ತುಂಬುತ್ತಾರೆ. ನಮ್ಮನ್ನು ಸಲಹು ತಾಯಿ, ಹಗಲಿರುಳು ನಿನ್ನ ಹೊಲದಲ್ಲಿ ದುಡಿಯುವ ಮಕ್ಕಳನ್ನು ಕಾಪಾಡು ಎಂದು ಪ್ರಾರ್ಥಿಸುತ್ತಾರೆ.

ಒಂದು ಸಮುದಾಯಕ್ಕೆಂದು ಸೀಮಿತವಲ್ಲ: ಈ ಹಬ್ಬ ಯಾವುದೇ ಒಂದು ಸಮುದಾಯಕ್ಕೆಂದು ಸೀಮಿತವಾಗಿಲ್ಲ. ಈ ದಿನ ಹೊಲದಲ್ಲಿ ಬಂದು ಹಬ್ಬ ಮಾಡುವುದರಿಂದ ಲಕ್ಷ್ಮಿ ಆಶೀರ್ವದಿಸುತ್ತಾಳೆ ಎಂಬ ನಂಬಿಕೆ ರೈತರದ್ದು. ಡಿಸೆಂಬರ್ ಜನವರಿ ತಿಂಗಳಲ್ಲಿ ರೈತನ ಮುಂಗಾರು ಬೆಳೆಯ ಕಟಾವು ಸಂದರ್ಭ. ಹಿಂಗಾರು ಬೆಳೆಗೆ ಮೊಳಕೆ ಸಂದರ್ಭ ಈ ಹಬ್ಬ ರೈತನಲ್ಲಿ ಸಂತಸ, ಹೊಸ ಹುಮ್ಮಸ್ಸು ಮೂಡಿಸುತ್ತದೆ.

ಸಂಕ್ರಾಂತಿಯಂದು ಎಳ್ಳು-ಬೆಲ್ಲ ಬೀರಲು ಪರಿಸರ ಸ್ನೇಹಿ ಮಣ್ಣಿನ ಮಡಿಕೆ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ