AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮುಂದೂಡಿ ಕೊರೊನಾ ಕರ್ತವ್ಯಕ್ಕೆ ಹಾಜರ್ ಆದ ಮಳವಳ್ಳಿ ಡಿವೈಎಸ್‌ಪಿ

ಮಂಡ್ಯ: ಕೊರೊನಾ ಅನ್ನೋ ಹೆಮ್ಮಾರಿ ಕಾಲಿಟಿದ್ದೇ ಇಟ್ಟಿದ್ದು. ಅದೆಷ್ಟೋ ಕನಸುಗಳನ್ನು ಸುಟ್ಟುಹಾಕಿದೆ. ಮಕ್ಕಳ ಮದುವೆ ಹೀಗ್ ಮಾಡ್ಬೇಕು ಹಾಗ್ ಮಾಡ್ಬೇಕು ಅನ್ನೋರ ಆಸೆಗೆ ಕಲ್ಲು ಹಾಕಿದೆ. ಮನೆಯವರನ್ನ ಒಪ್ಪಿಸಿ ಪ್ರೀತಿಸಿದವರನ್ನ ಮದುವೆ ಆಗ್ಬೇಕು ಅನ್ನೋರ ಸುಂದರ ಪ್ರೀತಿಗೆ ಕೊಳ್ಳಿ ಇಟ್ಟಿದೆ. ಸಾಲ ಆದ್ರೂ ಪರವಾಗಿಲ್ಲ ಧಾಮ್ ಧೂಮ್ ಆಗಿ ಮದುವೆ ಆಗ್ಬೇಕು ಅನ್ನೋರ ಕನಸುಗಳನ್ನು ಛಿದ್ರ ಛಿದ್ರ ಮಾಡಿದೆ. ಇದರ ನಡುವೆ ಸಕ್ಕರೆ ನಾಡಿನಲ್ಲಿ ಅಧಿಕಾರಿಯೊಬ್ಬರು ಜನರಿಗೆ ಮಾದರಿಯಾಗಿದ್ದಾರೆ. ಹೆಮ್ಮಾರಿಯಿಂದಾಗಿ ಮದುವೆ ಮುಂದೂಡಿದ ಡಿವೈಎಸ್‌ಪಿ! ರಾಜ್ಯದಲ್ಲಿ ಕ್ರೂರಿ […]

ಮದುವೆ ಮುಂದೂಡಿ ಕೊರೊನಾ ಕರ್ತವ್ಯಕ್ಕೆ ಹಾಜರ್ ಆದ ಮಳವಳ್ಳಿ ಡಿವೈಎಸ್‌ಪಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 22, 2020 | 8:09 AM

Share

ಮಂಡ್ಯ: ಕೊರೊನಾ ಅನ್ನೋ ಹೆಮ್ಮಾರಿ ಕಾಲಿಟಿದ್ದೇ ಇಟ್ಟಿದ್ದು. ಅದೆಷ್ಟೋ ಕನಸುಗಳನ್ನು ಸುಟ್ಟುಹಾಕಿದೆ. ಮಕ್ಕಳ ಮದುವೆ ಹೀಗ್ ಮಾಡ್ಬೇಕು ಹಾಗ್ ಮಾಡ್ಬೇಕು ಅನ್ನೋರ ಆಸೆಗೆ ಕಲ್ಲು ಹಾಕಿದೆ. ಮನೆಯವರನ್ನ ಒಪ್ಪಿಸಿ ಪ್ರೀತಿಸಿದವರನ್ನ ಮದುವೆ ಆಗ್ಬೇಕು ಅನ್ನೋರ ಸುಂದರ ಪ್ರೀತಿಗೆ ಕೊಳ್ಳಿ ಇಟ್ಟಿದೆ. ಸಾಲ ಆದ್ರೂ ಪರವಾಗಿಲ್ಲ ಧಾಮ್ ಧೂಮ್ ಆಗಿ ಮದುವೆ ಆಗ್ಬೇಕು ಅನ್ನೋರ ಕನಸುಗಳನ್ನು ಛಿದ್ರ ಛಿದ್ರ ಮಾಡಿದೆ. ಇದರ ನಡುವೆ ಸಕ್ಕರೆ ನಾಡಿನಲ್ಲಿ ಅಧಿಕಾರಿಯೊಬ್ಬರು ಜನರಿಗೆ ಮಾದರಿಯಾಗಿದ್ದಾರೆ.

ಹೆಮ್ಮಾರಿಯಿಂದಾಗಿ ಮದುವೆ ಮುಂದೂಡಿದ ಡಿವೈಎಸ್‌ಪಿ! ರಾಜ್ಯದಲ್ಲಿ ಕ್ರೂರಿ ಕೊರೊನಾ ನರ್ತಿಸುತ್ತಿದೆ. ಮಹಾಮಾರಿ ಕೊರೊನಾಗೆ ಜನರು ತತ್ತರಿಸಿ ಹೋಗಿದ್ದಾರೆ. ಹೆಮ್ಮಾರಿಯನ್ನ ಕಟ್ಟಿ ಹಾಕೋಕೆ ದೇಶಾದ್ಯಂತ ಲಾಕ್​ಡೌನ್ ಜಾರಿಯಾಗಿದೆ. ಈ ಲಾಕ್​ಡೌನ್ ನಡುವೆ ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಸೇರಿ ವಿವಿಧ ವರ್ಗಗಳ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಹಗಲಿರುಳು ಎನ್ನದೆ ಕುಟುಂಬಸ್ಥರಿಂದ ದೂರ ಉಳಿದು ದೇಶದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅದರಂತೆ ಸಕ್ಕರೆ ನಾಡು ಮಂಡ್ಯದ ದಕ್ಷ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯಕ್ಕಾಗಿ ತಮ್ಮ ಮದುವೆಯನ್ನೇ ಮುಂದೂಡಿ ಮಾದರಿಯಾಗಿದ್ದಾರೆ.

ಹೌದು, ಮಳವಳ್ಳಿಯಲ್ಲಿ ಡಿವೈಎಸ್‌ಪಿ ಎಂ.ಜೆ.ಪೃಥ್ವಿ ತಮ್ಮ ಮದುವೆಯನ್ನು ಮುಂದೂಡಿದ್ದಾರೆ. ಮಳವಳ್ಳಿಯಲ್ಲಿ ಕೊರೋನಾ ಸೋಂಕಿತರ ಹೆಚ್ಚಾಗಿದ್ದು, ಪೃಥ್ವಿ ಅವರು ಎದೆಗುಂದದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಾಕ್​ಡೌನ್​ ಕರ್ತವ್ಯ ನಿರ್ವಹಿಸಲು ಇದೇ ತಿಂಗಳು 5ನೇ ತಾರೀಖಿನಂದು ನಿಗದಿಯಾಗಿದ್ದ ಮದುವೆಯನ್ನು ಮುಂದೂಡಿದ್ದಾರೆ.

ಮದುವೆ ಮುಂದೂಡಿ ಕರ್ತವ್ಯ ನಿರ್ವಹಿಸುತ್ತಿರುವ ದಕ್ಷ ಅಧಿಕಾರಿಯ ಕಾರ್ಯಕ್ಕೆ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಜೆ.ಪೃಥ್ವಿ ಅವರು ಏಪ್ರಿಲ್​ 5ರಂದು ಹಸೆಮಣೆ ಏರಬೇಕಿತ್ತು.

ಆದರೆ ಕೊರೋನಾ ತಡೆಗಟ್ಟಲು ಲಾಕ್​ಡೌನ್​ ವಿಧಿಸಿರುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸಲುವಾಗಿ ತಮ್ಮ ಮದುವೆಯನ್ನು ಮುಂದೂಡಿದ್ದಾರೆ. ಇಂತಹ ಧೈರ್ಯವಂತ, ದಕ್ಷ, ಪ್ರಾಮಾಣಿಕ, ಮಾದರಿ ಮಹಿಳಾ ಅಧಿಕಾರಿ ಮಂಡ್ಯ ಜಿಲ್ಲೆಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ಸುಮಲತಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಒಟ್ನಲ್ಲಿ ಮದುವೆ ಅನ್ನೋದು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಘಟ್ಟ. ಅಂತಹ ಮಹತ್ವದ ಘಟ್ಟದಲ್ಲಿ ದಾಂಪತ್ಯ ಜೀವನ ಆರಂಭಿಸಬೇಕಿದ್ದ ಮಳವಳ್ಳಿಯ ಡಿವೈಎಸ್ ಪಿ ಪೃಥ್ವಿ ಅವರು ಕೊರೊನಾ ವಿರುದ್ಧ ಹೊರಾಡಲು ತಮ್ಮ ಮದುವೆಯನ್ನೇ ಮುಂದೂಡಿ ಜನರ ಮೆಚ್ಚುಗೆಗೆ ಪಾತ್ರ ಆಗಿದ್ದಾರೆ. ಮುಂದೆ ನಿಗದಿಯಾದ ದಿನಾಂಕದಲ್ಲಿ ಯಾವುದೇ ವಿಘ್ನ ಬರದೆ ಹೊಸ ಜೀವನಕ್ಕೆ ಕಾಲಿಟ್ಟು ಖುಷಿಯಾಗಿರಲಿ ಅನ್ನೋದೆ ಎಲ್ಲರ ಆಶಯ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು