AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರೀನ್ ಟುಮಾರೋ ಎಂಎಂ ಹಿಲ್ಸ್​ಗೆ ಚಾಲನೆ: ಏನಿದು ಹೊಸ ಯೋಜನೆ?

ಮಲೆ ಮಹದೇಶ್ವರ ಬೆಟ್ಟದಲ್ಲಿ ಹೆಚ್ಚುತ್ತಿರುವ ತ್ಯಾಜ್ಯ ಸಮಸ್ಯೆಯನ್ನು ನಿಭಾಯಿಸಲು "ಗ್ರೀನ್ ಟುಮಾರೋ ಎಂಎಂ ಹಿಲ್ಸ್" ಯೋಜನೆ ಆರಂಭಿಸಲಾಗಿದೆ. ಈ ಯೋಜನೆಯು ಕಸ ವಿಲೇವಾರಿ, ಪ್ಲಾಸ್ಟಿಕ್ ಮತ್ತು ಕಾಗದದ ಪುನರ್ಬಳಕೆ ಹಾಗೂ ಪರಿಸರ ಸಂರಕ್ಷಣೆಗೆ ಒತ್ತು ನೀಡುತ್ತದೆ. ತ್ಯಾಜ್ಯ ಮುಕ್ತ ಮತ್ತು ಹಸಿರು ಬೆಟ್ಟವನ್ನು ನಿರ್ಮಿಸುವ ಗುರಿ ಹೊಂದಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರೀನ್ ಟುಮಾರೋ ಎಂಎಂ ಹಿಲ್ಸ್​ಗೆ ಚಾಲನೆ: ಏನಿದು ಹೊಸ ಯೋಜನೆ?
ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರೀನ್ ಟುಮಾರೋ ಎಂಎಂ ಹಿಲ್ಸ್​ಗೆ ಚಾಲನೆ: ಏನಿದು ಹೊಸ ಯೋಜನೆ?
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 15, 2024 | 8:52 PM

Share

ಚಾಮರಾಜನಗರ, ನವೆಂಬರ್​ 15: ರಾಜ್ಯ ಪ್ರವಾಸಿತಾಣಗಳ ಪೈಕಿ ಮಲೆ ಮಹದೇಶ್ವರ ಬೆಟ್ಟ (Male Mahadeshwara Betta) ಕೂಡ ಒಂದು. ಮಾದಪ್ಪನ ಸನ್ನಿಧಾನಕ್ಕೆ ಆಗಮಿಸುವ ಭಕ್ತವೃಂದದಿಂದ ಎದುರಾಗುತ್ತಿರುವ ತ್ಯಾಜ್ಯವನ್ನ ಸಮರ್ಪಕವಾಗಿ ನಿರ್ವಹಿಸಲು ಪ್ರಾಧಿಕಾರ ಮುಂದಾಗಿದ್ದು ಗ್ರೀನ್ ಟುಮಾರೋ ಎಂಎಂ ಹಿಲ್ಸ್​​ಗೆ ಚಾಲನೆ ನೀಡಲಾಗಿದೆ.

ಗ್ರೀನ್ ಟುಮಾರೋ ಎಂಎಂ ಹಿಲ್ಸ್ ಹೊಸ ಯೋಜನೆ

ಮಲೆ ಮಹದೇಶ್ವರ ಬೆಟ್ಟ ರಾಜ್ಯದ ಪ್ರಮುಖ ಪೂಜ್ಯ ಪ್ರೇಕ್ಷಣೀಯ ಸ್ಥಳಗಳ ಪೈಕಿಯೊಂದು. ವಿಶೇಷ ಜಾತ್ರಾ ಮಹೋತ್ಸವ ಸೇರಿದಂತೆ ಅಮವಾಸ್ಯೆ ದಿನಗಳಂದು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಬರುವಂತ ಭಕ್ತರು ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ಅನೇಕ ತ್ಯಾಜ್ಯಗಳನ್ನ ಅಲ್ಲಲ್ಲಿ ಎಸೆಯುತ್ತಾರೆ.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಗಿಫ್ಟ್; ಚಾಮರಾಜನಗರದ ನಾಗಮಲೆಗೆ ಉಚಿತ ಪ್ರವೇಶಕ್ಕೆ ಅನುಮತಿ

ಈ ಕಸವನ್ನ ಸಮರ್ಪಕವಾಗಿ ನಿರ್ವಹಣೆ ಮಾಡಲು ಈಗ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ಮುಂದಾಗಿದ್ದು ಗ್ರೀನ್ ಟುಮಾರೋ ಎಂಎಂ ಹಿಲ್ಸ್ ಎಂಬ ಶೀರ್ಷಿಕೆಯಲ್ಲಿ ಹೊಸ ಯೋಜನೆಗೆ ಮುಂದಾಗಿದ್ದು ಈಗ ಪ್ರಾಧಿಕಾರದ ಜತೆ ಈಗ ಮೈಸೂರಿನ ಮೈ ಕಾಪ್ಸ್ ಸಂಸ್ಥೆಯ ಸಹಭಾಗಿತ್ವದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಇನ್ನು ಈ ಗ್ರೀನ್ ಟುಮಾರೊ ಎಂಎಂ ಹಿಲ್ಸ್​​ನ ಕಾರ್ಯ ವೈಖರಿ ಏನೆಂದರೆ ತ್ಯಾಜ್ಯ ಮುಕ್ತ ಮಹದೇಶ್ವರ ಬೆಟ್ಟ ಎಂಬ ಶೀರ್ಷಿಕೆಯಡಿ ಮಲೆ ಮಹದೇಶ್ವರ ಬೆಟ್ಟವನ್ನ ಕಸ ಮುಕ್ತ ಬೆಟ್ಟವನ್ನಾಗಿಸೋದು. ಕಸ ಹಾಗೂ ತ್ಯಾಜ್ಯ ವಿಲೇವಾರಿಯನ್ನ ಸಮರ್ಪಕವಾಗಿ ಮಾಡೋದು. ಮಲೆ ಮಹದೇಶ್ವರ ಬೆಟ್ಟ ಸುತ್ತಾ ಕಾಡಿದ್ದು ಈ ತ್ಯಾಜ್ಯದಿಂದ ಪ್ರಕೃತಿಯ ಸೌಂದರ್ಯ ಹಾಳು ಮಾಡದೆ ಹಸಿರನ್ನಾಗಿ ಇರಿಸುವುದರ ಜತೆಗೆ ಕಾಡು ಪ್ರಾಣಿಗಳಿಗೆ ತ್ಯಾಜ್ಯದಿಂದ ಹಾನಿಯಾಗದಂತೆ ನೋಡಿಕೊಳ್ಳುವುದಾಗಿದೆ.

ಇದನ್ನೂ ಓದಿ: ಹೀಗೂ ಒಂದು ಹಬ್ಬವಿದೆ ನೋಡಿ: ಇಲ್ಲಿ ಸೆಗಣಿಯಲ್ಲಿ ಹೊರಳಾಡಿ, ಅದರಿಂದಲೇ ಹೊಡೆದಾಡಿಕೊಳ್ಳುತ್ತಾರೆ ಜನ!

ಶೇಖರಣೆಯಾದ ತಾಯಾಜ್ಯವನ್ನ ಹೊಸ ತಂತ್ರಜ್ಞಾನದ ಮೂಲಕ ತಾಯಾಜ್ಯವನ್ನ ಬೇರೆಡೆ ಸಮರ್ಪಕವಾಗಿ ನಿರ್ವಹಣೆ ಮಾಡುವುದರ ಜೊತೆಗೆ ಪ್ಲಾಸ್ಟಿಕ್ ಬಾಟಲ್ ಹಾಗೂ ವೇಸ್ಟ್ ಪೇಪರ್​ಗಳನ್ನ ಸಂಗ್ರಹಿಸಿ ರಿ ಸೈಕಲ್ ಮಾಡುವುದು ಸಹ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಕಾರ್ಯದರ್ಶಿ  ರಘು ಹೇಳಿದ್ದಾರೆ. ಪ್ರಕೃತಿಗೆ ಧಕ್ಕೆ ತರದೆ ಕಸ ಹಾಗೂ ತ್ಯಾಜ್ಯದಿಂದ ಮುಕ್ತಿ ನೀಡಲು ಪ್ರಾಧಿಕಾರ ಮುಂದಾಗಿದ್ದು ಈ ಯೋಜನೆ ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು