AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕು ದೃಢಪಡುತ್ತಿದ್ದಂತೆ ಡಯಾಲಿಸಿಸ್​ಗಾಗಿ ಬಂದಿದ್ದ ಮಹಿಳೆಯನ್ನೇ ಹೊರದಬ್ಬಿದ ಮಲ್ಯ ಆಸ್ಪತ್ರೆ ಸಿಬ್ಬಂದಿ

ಕೊರೊನಾ ಸೋಂಕಿತ ಮಹಿಳೆ ಮಲ್ಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ತಿದ್ದರು. ವಾರಕ್ಕೆರಡು ಬಾರಿ ಆಸ್ಪತ್ರೆಗೆ ಡಯಾಲಿಸಿಸ್​ಗಾಗಿಯೇ ಬರುತ್ತಿದ್ರು. ಈ ಬಾರಿ ಕೊರೊನಾ ಹಿನ್ನೆಲೆ ಮಲ್ಯ ಆಸ್ಪತ್ರೆ ವೈದ್ಯರು ಮಹಿಳೆಗೆ ಮೊನ್ನೆ ಕೊವಿಡ್ ಟೆಸ್ಟ್ ಮಾಡಿದ್ದಾರೆ. ನಿನ್ನೆ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಸೋಂಕು ದೃಢಪಡುತ್ತಿದ್ದಂತೆ ಡಯಾಲಿಸಿಸ್​ಗಾಗಿ ಬಂದಿದ್ದ ಮಹಿಳೆಯನ್ನೇ ಹೊರದಬ್ಬಿದ ಮಲ್ಯ ಆಸ್ಪತ್ರೆ ಸಿಬ್ಬಂದಿ
ಮಲ್ಯ ಆಸ್ಪತ್ರೆ ಮುಂದೆ ನರಳುತ್ತಿರುವ ಸೋಂಕಿತೆ
ಆಯೇಷಾ ಬಾನು
| Edited By: |

Updated on: Apr 13, 2021 | 1:52 PM

Share

ಬೆಂಗಳೂರು: ಕೊರೊನಾ ಸೋಂಕಿತ ಮಹಿಳೆಗೆ ಬೆಡ್‌ ನೀಡದೆ ಆಸ್ಪತ್ರೆಯಿಂದ ಹೊರ ಹಾಕಿರುವ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಬೆಂಗಳೂರಿನ ಪ್ರತಿಷ್ಠಿತ ಮಲ್ಯ ಆಸ್ಪತ್ರೆಯ ಸಿಬ್ಬಂದಿ ಮಹಿಳೆಯನ್ನು ಹೊರ ಹಾಕಿ ಅಮಾನವೀಯವಾಗಿ ವರ್ತಿಸಿದ್ದಾರಂತೆ. ಚಿಕಿತ್ಸೆ ಸಿಗದೆ ಉರಿ ಬಿಸಿಲಿನಲ್ಲಿ ಇಡೀ ದಿನ ಫುಟ್ ಪಾತ್ ಮೇಲೆಯೇ 58 ವರ್ಷದ ಸೋಂಕಿತ ಮಹಿಳೆ ನರಳಾಡಿದ್ದಾರೆ.

ಕೊರೊನಾ ಸೋಂಕಿತ ಮಹಿಳೆ ಮಲ್ಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ವಾರಕ್ಕೆರಡು ಬಾರಿ ಆಸ್ಪತ್ರೆಗೆ ಡಯಾಲಿಸಿಸ್​ಗಾಗಿಯೇ ಬರುತ್ತಿದ್ರು. ಈ ಬಾರಿ ಕೊರೊನಾ ಹಿನ್ನೆಲೆ ಮಲ್ಯ ಆಸ್ಪತ್ರೆ ವೈದ್ಯರು ಮಹಿಳೆಗೆ ಮೊನ್ನೆ ಕೊವಿಡ್ ಟೆಸ್ಟ್ ಮಾಡಿದ್ದಾರೆ. ನಿನ್ನೆ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಸೋಂಕು ದೃಢವಾಗುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನ ಆಸ್ಪತ್ರೆಯೊಳಗೇ ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾರೆ. ನಾನ್ ಕೊವಿಡ್ ಆಸ್ಪತ್ರೆಯೆಂದು ಒಳಗೆ ಸೇರಿಸದೆ ಹೊರಹಾಕಿದ್ದಾರೆ. ಇಷ್ಟೆಲ್ಲಾ ಆಗಿ ಮಹಿಳೆ ಆಸ್ಪತ್ರೆ ಮುಂದೆ ಫುಟ್‌ಪಾತ್‌ ಮೇಲೆ ಇಡೀ ದಿನ ಪರದಾಡಿದ್ದಾರೆ ಹಾಗೂ ಮಹಿಳೆಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಮಹಿಳೆಗೆ ಕನಿಷ್ಠ ಚಿಕಿತ್ಸೆ ಸಹ ಮಲ್ಯ ಆಸ್ಪತ್ರೆ ವೈದ್ಯರು ನೀಡಿಲ್ಲ. ಡಯಾಲಿಸಿಸ್ ಕೂಡಾ ಮಾಡದೇ ಹೊರಹಾಕಿದ್ದಾರೆ.

ಊಟ, ನೀರು ಇಲ್ಲದೆ ಏಕಾಂಗಿಯಾಗಿ ಮಹಿಳೆ ಪರದಾಡುತ್ತಿದ್ದಾರೆ. ನಮ್ದು ನಾನ್ ಕೊವಿಡ್ ಆಸ್ಪತ್ರೆಯೆಂದು ಹೊರ ಹಾಕಿದ್ರು. ತೀವ್ರ ಜ್ವರವಿದೆ. ಡಯಾಲಿಸಿಸ್ ಕೂಡಾ ಮಾಡಿಲ್ಲ. ಬಿಬಿಎಂಪಿ ಸಿಬ್ಬಂದಿ, 108 ಸಿಬ್ಬಂದಿಗೆ ಕರೆ ಮಾಡಿದ್ರೂ ನಿರ್ಲಕ್ಷ್ಯ ತೋರಿದ್ದಾರೆ. ಕಾಲಿಗೆ ಪೆಟ್ಟಾಗಿದ ಕಾರಣ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ಉರಿ ಬಿಸಿಲಲ್ಲಿ ಫುಟ್​ಪಾತ್ ಮೇಲೆ ಇಡೀ ದಿನ ಕಳೆದ ಮಹಿಳೆ ಕಣ್ಣೀರಿಡುತ್ತ ಬೇಸರ ವ್ಯಕ್ತಡಿಸಿದ್ದಾರೆ.

Mallya Hospital

ಮಲ್ಯ ಆಸ್ಪತ್ರೆ ಮುಂದೆ ನರಳುತ್ತಿರುವ ಸೋಂಕಿತೆ

ಇದನ್ನೂ ಓದಿ: 15 ಆಸ್ಪತ್ರೆ ಸುತ್ತಿದರೂ ಸಿಗ್ಲಿಲ್ಲ ಚಿಕಿತ್ಸೆ, ಆಸ್ಪತ್ರೆಗಳ ಅಮಾನವೀಯ ನಡೆಗೆ ವೃದ್ಧೆ ಬಲಿ

(Mallya Hospital Staff Sent Corona Positive Patient Out and Behaved like Inhumanity in Bengaluru)

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?