AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕು ದೃಢಪಡುತ್ತಿದ್ದಂತೆ ಡಯಾಲಿಸಿಸ್​ಗಾಗಿ ಬಂದಿದ್ದ ಮಹಿಳೆಯನ್ನೇ ಹೊರದಬ್ಬಿದ ಮಲ್ಯ ಆಸ್ಪತ್ರೆ ಸಿಬ್ಬಂದಿ

ಕೊರೊನಾ ಸೋಂಕಿತ ಮಹಿಳೆ ಮಲ್ಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ತಿದ್ದರು. ವಾರಕ್ಕೆರಡು ಬಾರಿ ಆಸ್ಪತ್ರೆಗೆ ಡಯಾಲಿಸಿಸ್​ಗಾಗಿಯೇ ಬರುತ್ತಿದ್ರು. ಈ ಬಾರಿ ಕೊರೊನಾ ಹಿನ್ನೆಲೆ ಮಲ್ಯ ಆಸ್ಪತ್ರೆ ವೈದ್ಯರು ಮಹಿಳೆಗೆ ಮೊನ್ನೆ ಕೊವಿಡ್ ಟೆಸ್ಟ್ ಮಾಡಿದ್ದಾರೆ. ನಿನ್ನೆ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಸೋಂಕು ದೃಢಪಡುತ್ತಿದ್ದಂತೆ ಡಯಾಲಿಸಿಸ್​ಗಾಗಿ ಬಂದಿದ್ದ ಮಹಿಳೆಯನ್ನೇ ಹೊರದಬ್ಬಿದ ಮಲ್ಯ ಆಸ್ಪತ್ರೆ ಸಿಬ್ಬಂದಿ
ಮಲ್ಯ ಆಸ್ಪತ್ರೆ ಮುಂದೆ ನರಳುತ್ತಿರುವ ಸೋಂಕಿತೆ
ಆಯೇಷಾ ಬಾನು
| Updated By: Skanda|

Updated on: Apr 13, 2021 | 1:52 PM

Share

ಬೆಂಗಳೂರು: ಕೊರೊನಾ ಸೋಂಕಿತ ಮಹಿಳೆಗೆ ಬೆಡ್‌ ನೀಡದೆ ಆಸ್ಪತ್ರೆಯಿಂದ ಹೊರ ಹಾಕಿರುವ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಬೆಂಗಳೂರಿನ ಪ್ರತಿಷ್ಠಿತ ಮಲ್ಯ ಆಸ್ಪತ್ರೆಯ ಸಿಬ್ಬಂದಿ ಮಹಿಳೆಯನ್ನು ಹೊರ ಹಾಕಿ ಅಮಾನವೀಯವಾಗಿ ವರ್ತಿಸಿದ್ದಾರಂತೆ. ಚಿಕಿತ್ಸೆ ಸಿಗದೆ ಉರಿ ಬಿಸಿಲಿನಲ್ಲಿ ಇಡೀ ದಿನ ಫುಟ್ ಪಾತ್ ಮೇಲೆಯೇ 58 ವರ್ಷದ ಸೋಂಕಿತ ಮಹಿಳೆ ನರಳಾಡಿದ್ದಾರೆ.

ಕೊರೊನಾ ಸೋಂಕಿತ ಮಹಿಳೆ ಮಲ್ಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ವಾರಕ್ಕೆರಡು ಬಾರಿ ಆಸ್ಪತ್ರೆಗೆ ಡಯಾಲಿಸಿಸ್​ಗಾಗಿಯೇ ಬರುತ್ತಿದ್ರು. ಈ ಬಾರಿ ಕೊರೊನಾ ಹಿನ್ನೆಲೆ ಮಲ್ಯ ಆಸ್ಪತ್ರೆ ವೈದ್ಯರು ಮಹಿಳೆಗೆ ಮೊನ್ನೆ ಕೊವಿಡ್ ಟೆಸ್ಟ್ ಮಾಡಿದ್ದಾರೆ. ನಿನ್ನೆ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಸೋಂಕು ದೃಢವಾಗುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನ ಆಸ್ಪತ್ರೆಯೊಳಗೇ ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾರೆ. ನಾನ್ ಕೊವಿಡ್ ಆಸ್ಪತ್ರೆಯೆಂದು ಒಳಗೆ ಸೇರಿಸದೆ ಹೊರಹಾಕಿದ್ದಾರೆ. ಇಷ್ಟೆಲ್ಲಾ ಆಗಿ ಮಹಿಳೆ ಆಸ್ಪತ್ರೆ ಮುಂದೆ ಫುಟ್‌ಪಾತ್‌ ಮೇಲೆ ಇಡೀ ದಿನ ಪರದಾಡಿದ್ದಾರೆ ಹಾಗೂ ಮಹಿಳೆಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಮಹಿಳೆಗೆ ಕನಿಷ್ಠ ಚಿಕಿತ್ಸೆ ಸಹ ಮಲ್ಯ ಆಸ್ಪತ್ರೆ ವೈದ್ಯರು ನೀಡಿಲ್ಲ. ಡಯಾಲಿಸಿಸ್ ಕೂಡಾ ಮಾಡದೇ ಹೊರಹಾಕಿದ್ದಾರೆ.

ಊಟ, ನೀರು ಇಲ್ಲದೆ ಏಕಾಂಗಿಯಾಗಿ ಮಹಿಳೆ ಪರದಾಡುತ್ತಿದ್ದಾರೆ. ನಮ್ದು ನಾನ್ ಕೊವಿಡ್ ಆಸ್ಪತ್ರೆಯೆಂದು ಹೊರ ಹಾಕಿದ್ರು. ತೀವ್ರ ಜ್ವರವಿದೆ. ಡಯಾಲಿಸಿಸ್ ಕೂಡಾ ಮಾಡಿಲ್ಲ. ಬಿಬಿಎಂಪಿ ಸಿಬ್ಬಂದಿ, 108 ಸಿಬ್ಬಂದಿಗೆ ಕರೆ ಮಾಡಿದ್ರೂ ನಿರ್ಲಕ್ಷ್ಯ ತೋರಿದ್ದಾರೆ. ಕಾಲಿಗೆ ಪೆಟ್ಟಾಗಿದ ಕಾರಣ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ಉರಿ ಬಿಸಿಲಲ್ಲಿ ಫುಟ್​ಪಾತ್ ಮೇಲೆ ಇಡೀ ದಿನ ಕಳೆದ ಮಹಿಳೆ ಕಣ್ಣೀರಿಡುತ್ತ ಬೇಸರ ವ್ಯಕ್ತಡಿಸಿದ್ದಾರೆ.

Mallya Hospital

ಮಲ್ಯ ಆಸ್ಪತ್ರೆ ಮುಂದೆ ನರಳುತ್ತಿರುವ ಸೋಂಕಿತೆ

ಇದನ್ನೂ ಓದಿ: 15 ಆಸ್ಪತ್ರೆ ಸುತ್ತಿದರೂ ಸಿಗ್ಲಿಲ್ಲ ಚಿಕಿತ್ಸೆ, ಆಸ್ಪತ್ರೆಗಳ ಅಮಾನವೀಯ ನಡೆಗೆ ವೃದ್ಧೆ ಬಲಿ

(Mallya Hospital Staff Sent Corona Positive Patient Out and Behaved like Inhumanity in Bengaluru)

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?