AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಹೆಸರಿನಲ್ಲಿ ಅಶ್ಲೀಲ ಫೋಟೋ ಹಂಚಿಕೊಳ್ಳುತ್ತಿದ್ದ ವ್ಯಕ್ತಿಗೆ ಮಹಿಳೆಯಿಂದಲೇ ಕಪಾಳಮೋಕ್ಷ

ಕೇವಲ ಸಂದೇಶವೊಂದೇ ಅಲ್ಲದೇ ಅಶ್ಲೀಲ ಫೋಟೋ, ವೀಡಿಯೋಗಳನ್ನು ಕಳುಹಿಸುತ್ತಿದ್ದ. ಈ ಮಧ್ಯೆ, ನಿಮ್ಮನ್ನ ಭೇಟಿಯಾಗಬೇಕು ಅಂತ ಹೇಳಿದ್ದ. ಇದೇ ಸರಿಯಾದ ಸಮಯ ಎಂದು ಮಹಿಳೆ ಮಡಿಕೇರಿ ಬಸ್​ಸ್ಟಾಪ್ಗೆ​ ಕರೆಸಿ ಮಹಿಳೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಮಹಿಳೆಯರ ಹೆಸರಿನಲ್ಲಿ ಅಶ್ಲೀಲ ಫೋಟೋ ಹಂಚಿಕೊಳ್ಳುತ್ತಿದ್ದ ವ್ಯಕ್ತಿಗೆ ಮಹಿಳೆಯಿಂದಲೇ ಕಪಾಳಮೋಕ್ಷ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 21, 2021 | 4:17 PM

Share

ಮಡಿಕೇರಿ: ಫೇಸ್​ಬುಕ್​ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದಕ್ಕಾಗಿ ಬಸ್​ಸ್ಟ್ಯಾಂಡ್​ಗೆ ಕರೆಸಿಕೊಂಡು ಮಹಿಳೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಯುವತಿಯರ ಹೆಸರಿನಲ್ಲಿ ಯುವಕ ಅಶ್ಲೀಲ ಮೆಸೇಜ್​ ಕಳುಹಿಸುತ್ತಿದ್ದ, ಈ ವಿಷಯ ತಿಳಿದ ಯುವತಿ ಮಡಿಕೇರಿ ಬಸ್​ಸ್ಟ್ಯಾಂಡಿಗೆ ಆತನನ್ನು ಕರೆಸಿಕೊಂಡು ಏಟು ನೀಡಿದ್ದಾಳೆ. ಇದೀಗ ಯುವಕ ಪೊಲೀಸರ ವಶದಲ್ಲಿದ್ದಾನೆ.

ಮಡಿಕೇರಿ ಸಮೀಪದ ಹಾಕತ್ತೂರಿನ ಅಶ್ರಪ್ ಎಂಬ ಯುವಕ ಎಂಬುದು ತಿಳಿದು ಬಂದಿದೆ. ಯುವತಿಯ ಹೆಸರಲ್ಲಿ ಕಳೆದ 15 ದಿನಗಳಿಂದ‌ ಚಾಟಿಂಗ್ ಮಾಡುತ್ತಿದ್ದ. ನಂತರ ನನ್ನ ಹೆಸರು ಅರುಣ ಎಂದು ಹೇಳಿದ್ದ. ಇದೀಗ ಸಿಕ್ಕಿಬಿದ್ದಾಕ್ಷಣ ನನ್ನೊಟ್ಟಿಗೆ ಮತ್ತಿಬ್ಬರು ಇದ್ದಾರೆ ಎಂಬ ಮಾಹಿತಿ ಹೇಳಿದ್ದಾನೆ.

ಈತ ಫೇಸ್‍ಬುಕ್‍ನಲ್ಲಿ ಫೇಕ್ ಅಕೌಂಟ್ ಮಾಡಿಕೊಂಡು ಸ್ನೇಹ ಸಂಪಾದನೆ ಮಾಡುತ್ತಿದ್ದ. ರಶ್ಮಿ ಅಂತ ಅಕೌಂಟ್ ಹೊಂದಿದ್ದ ಈತ ಮಹಿಳೆಯೊಬ್ಬರನ್ನ ಪರಿಚಯ ಮಾಡಿಕೊಂಡಿದ್ದ. ನಂತರ ಹೇಗೋ ಮನವೊಲಿಸಿ ಫೋನ್​ ನಂಬರ್ ಪಡೆದುಕೊಂಡು ಪರಸ್ಪರ ಚಾಟ್ ಮಾಡೋಕೆ ಶುರುಮಾಡಿದ. ದಿನಕಳೆದಂತೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ನೀವಂದ್ರೆ ನನ್ನ ಸ್ನೇಹಿತರಿಗೆ ತುಂಬಾ ಇಷ್ಟ ಎಂದೆಲ್ಲಾ ಸಂದೇಶ ಕಳುಹಿಸುತ್ತಿದ್ದ. ಜತೆಗೆ ಬೇರೊಂದು ನಂಬರ್​ನಿಂದ ನಾನು ಅರುಣ್, ಪವನ್ ಅಂತೆಲ್ಲ ಮೆಸೇಜ್ ಮಾಡೋಕೆ ಪ್ರಾರಂಭಿಸಿದ.

ಕೇವಲ ಸಂದೇಶವೊಂದೇ ಅಲ್ಲದೇ ಅಶ್ಲೀಲ ಫೋಟೋ, ವೀಡಿಯೋಗಳನ್ನು ಕಳುಹಿಸುತ್ತಿದ್ದ. ಈ ಮಧ್ಯೆ, ನಿಮ್ಮನ್ನ ಭೇಟಿಯಾಗಬೇಕು ಅಂತ ಹೇಳಿದ್ದ. ಇದೇ ಸರಿಯಾದ ಸಮಯ ಎಂದು ಮಹಿಳೆ ಮಡಿಕೇರಿ ಬಸ್​ಸ್ಟಾಪ್ಗೆ​ ಕರೆಸಿ ಮಹಿಳೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ:

ಅಶ್ಲೀಲ‌ವಾಗಿ ಎಡಿಟ್ ಮಾಡಿದ್ದ ಫೋಟೋ ತೋರಿಸಿ ಗಣ್ಯರಿಗೆ ಬ್ಲ್ಯಾಕ್​ಮೇಲ್: ಕೋಳಿ ಫಾರ್ಮ್​ ಓನರ್​ ಅರೆಸ್ಟ್​​

ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರು ಅರೆಸ್ಟ್

Published On - 4:16 pm, Mon, 21 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!