AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಹೂವಿನ ಗಿಡಗಳ ಜೊತೆ ಗಾಂಜಾ ಗಿಡ ಬೆಳೆದ ಆರೋಪಿ ಅರೆಸ್ಟ್​

ಹೂವಿನ ಗಿಡಗಳ ನಡುವೆ ಗಾಂಜಾ ಗಿಡಗಳನ್ನು ಬೆಳೆದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದರೆ, ಇತ್ತ ಬೆಂಗಳೂರು ಮತ್ತು ಚಿಕ್ಕಮಗಳೂರು ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರು: ಹೂವಿನ ಗಿಡಗಳ ಜೊತೆ ಗಾಂಜಾ ಗಿಡ ಬೆಳೆದ ಆರೋಪಿ ಅರೆಸ್ಟ್​
ಮನೆ ಆವರಣದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ ಮೈಸೂರು ಪೊಲೀಸರು
Follow us
ರಾಮ್​, ಮೈಸೂರು
| Updated By: Rakesh Nayak Manchi

Updated on: Aug 22, 2023 | 8:57 AM

ಮೈಸೂರು, ಆಗಸ್ಟ್ 22: ಮನೆಯ ಆವರಣದಲ್ಲೇ ಗಾಂಜಾ (Gaanja/Cannabis) ಗಿಡ ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್ ಬಂಧಿತ ಆರೋಪಿಯಾಗಿದ್ದಾನೆ. ಮನೆ ಆವರಣದಲ್ಲಿದ್ದ ಹೂವಿನ ಗಿಡಗಳ ನಡುವೆ ಎರಡು ಗಾಂಜಾ ಗಿಡಗಳನ್ನು ಬೆಳೆಸಿದ್ದನು.

ಆರೋಪಿ ವಿಶ್ವನಾಥ್ ತನ್ನ ಮನೆಯ ಆವರಣದಲ್ಲಿ ಹೂವಿನ ಗಿಡಗಳನ್ನು ನೆಟ್ಟಿದ್ದಲ್ಲದೆ, ಇದರ ನಡುವೆ ಎರಡು ಗಾಂಜಾ ಗಿಡಗಳನ್ನು ಕೂಡ ಬೆಳೆಸಿದ್ದನು. ಈ ಗಿಡಗಳು ಸುಮಾರು 5 ರಿಂದ 6 ಅಡಿ ಎತ್ತರ ಬೆಳೆದಿದ್ದವು. ಮಾಹಿತಿ ತಿಳಿದ ಹುಣಸೂರು ಗ್ರಾಮಾಂತರ ಠಾಣಾ ಪೊಲೀಸರು, ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 6 ಕೆಜಿಯಷ್ಟಿದ್ದ ಎರಡು ಗಾಂಜಾ ಹಸಿ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರ ಬಂಧನ

ಬೆಂಗಳೂರು: ಗಾಂಜಾ ಮಾರುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ನಗರದ ಮಹದೇವಪುರದ ಹೂಡಿ ಹೊಟೇಲ್ ಬಳಿ ನಡೆದಿದೆ. ಆರೋಪಿಗಳಾದ ಅರ್ಜುನ್ ಯಾದವ್, ಲಲಿತ ಮಹತೋ, ಮೊಹಮ್ಮದ್ ಎಂಬವರು ಹೊಟೇಲ್ ಬಳಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಗಾಂಜಾ ಮತ್ತಲ್ಲಿ ಯುವಕನ ದಾಂಧಲೆ: ಸಿನಿಮಿಯ ರೀತಿಯಲ್ಲಿ ಲಾಕ್ ಮಾಡಿದ ಮಂಗಳೂರು ಪೊಲೀಸ್​​​​; ವಿಡಿಯೋ ವೈರಲ್​​

ಅದರಂತೆ, ಮಾರಾಟ ಮಾಡಲು ಗಾಂಜಾ ಸಾಗಾಟ ಮಾಡುತ್ತಿದ್ದಾಗ ಮೂವರು ಆರೋಪಿಗಳನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ಆರೋಪಿಗಳಿಂದ 15 ಕೆಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸ್ಕೂಟಿಯಲ್ಲಿ ಗಾಂಜಾ ಸಾಗಾಟ

ಚಿಕ್ಕಮಗಳೂರು: ತಾಲೂಕಿನ ಬಾಳೆಹಳ್ಳಿ‌ ಬಳಿ ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೋಜ್ ಬಂಧಿತ ಆರೋಪಿಯಾಗಿದ್ದು, ಈತನಿಂದ 1 ಕೆಜಿ 175 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಸ್ಕೂಟಿಯನ್ನು ಜಪ್ತಿ ಮಾಡಲಾಗಿದೆ. ಬಾಳೆಹಳ್ಳಿಯಿಂದ ಚಿಕ್ಕಮಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಮನೋಜ್ ಅರೆಸ್ಟ್ ಆಗಿದ್ದು, ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ