AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜೋಡಿ ಕೊಲೆ: ಆರೋಪಿ ಬಂಧನ, ಮತ್ತೋರ್ವನಿಗಾಗಿ ಶೋಧ

Mysore Double Murder Case | ನಿವೇಶನ ವಿಚಾರ ಹಾಗೂ ಹಳೇ ದ್ವೇಷ ಹಿನ್ನೆಲೆ ಫೆಬ್ರವರಿ7ರಂದು ಕಿಶನ್ ಮತ್ತು ಕಿರಣ್ ಎಂಬುವವರನ್ನು ಸ್ವಾಮಿ, ದಿಲೀಪ್, ಮಧು, ರಘು ಸೇರಿ ಬರ್ಬರವಾಗಿ ಹತ್ಯೆಗೈದಿದ್ದರು. ಘಟನೆ ಬಳಿಕ ದಿಲೀಪ್, ಮಧು ಪೊಲೀಸರಿಗೆ ಶರಣಾಗಿದ್ದರು. ಸದ್ಯ ಈಗ ಆರೋಪಿ ಮೀಸೆ ಸ್ವಾಮಿಯನ್ನ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜೋಡಿ ಕೊಲೆ: ಆರೋಪಿ ಬಂಧನ, ಮತ್ತೋರ್ವನಿಗಾಗಿ ಶೋಧ
ಸಾಂದರ್ಭೀಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 10, 2021 | 11:50 AM

Share

ಮೈಸೂರು: ನಗರದ ಎಲೆತೋಟ ರಸ್ತೆಯಲ್ಲಿ ಜೋಡಿ ಕೊಲೆ ಕೇಸ್​ಗೆ ಸಂಬಂಧಿಸಿ ಆರೋಪಿ ಸ್ವಾಮಿ ಅಲಿಯಾಸ್ ಮೀಸೆ ಸ್ವಾಮಿ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿ ರಘುಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.

ನಿವೇಶನ ವಿಚಾರ ಹಾಗೂ ಹಳೇ ದ್ವೇಷ ಹಿನ್ನೆಲೆ ಫೆಬ್ರವರಿ 7ರಂದು ಕಿಶನ್ ಮತ್ತು ಕಿರಣ್ ಎಂಬುವವರನ್ನು ಸ್ವಾಮಿ, ದಿಲೀಪ್, ಮಧು, ರಘು ಸೇರಿ ಬರ್ಬರವಾಗಿ ಹತ್ಯೆಗೈದಿದ್ದರು. ಘಟನೆ ಬಳಿಕ ದಿಲೀಪ್, ಮಧು ಪೊಲೀಸರಿಗೆ ಶರಣಾಗಿದ್ದರು. ಸದ್ಯ ಈಗ ಆರೋಪಿ ಮೀಸೆ ಸ್ವಾಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿರಣ್(29) ಮತ್ತು ಕಿಶನ್(29) ಈ ಕೃತ್ಯದಲ್ಲಿ ಮೃತಪಟ್ಟಿದ್ದು, ಮೃತರಿಬ್ಬರೂ ಗೌರಿಶಂಕರ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ಮಧು ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತ್ಯ ನಡೆಸಿದ ನಾಲ್ವರ ಪೈಕಿ ಮೂವರು ಬಂಧನದಲ್ಲಿದ್ದು ಮತ್ತೋರ್ವ ಆರೋಪಿ ರಘುಗಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಜೋಡಿ ಕೊಲೆ: ಮೈಸೂರಿನಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಇಬ್ಬರ ಹತ್ಯೆ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ