AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜೋಡಿ ಕೊಲೆ: ಆರೋಪಿ ಬಂಧನ, ಮತ್ತೋರ್ವನಿಗಾಗಿ ಶೋಧ

Mysore Double Murder Case | ನಿವೇಶನ ವಿಚಾರ ಹಾಗೂ ಹಳೇ ದ್ವೇಷ ಹಿನ್ನೆಲೆ ಫೆಬ್ರವರಿ7ರಂದು ಕಿಶನ್ ಮತ್ತು ಕಿರಣ್ ಎಂಬುವವರನ್ನು ಸ್ವಾಮಿ, ದಿಲೀಪ್, ಮಧು, ರಘು ಸೇರಿ ಬರ್ಬರವಾಗಿ ಹತ್ಯೆಗೈದಿದ್ದರು. ಘಟನೆ ಬಳಿಕ ದಿಲೀಪ್, ಮಧು ಪೊಲೀಸರಿಗೆ ಶರಣಾಗಿದ್ದರು. ಸದ್ಯ ಈಗ ಆರೋಪಿ ಮೀಸೆ ಸ್ವಾಮಿಯನ್ನ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜೋಡಿ ಕೊಲೆ: ಆರೋಪಿ ಬಂಧನ, ಮತ್ತೋರ್ವನಿಗಾಗಿ ಶೋಧ
ಸಾಂದರ್ಭೀಕ ಚಿತ್ರ
ಆಯೇಷಾ ಬಾನು
|

Updated on: Feb 10, 2021 | 11:50 AM

Share

ಮೈಸೂರು: ನಗರದ ಎಲೆತೋಟ ರಸ್ತೆಯಲ್ಲಿ ಜೋಡಿ ಕೊಲೆ ಕೇಸ್​ಗೆ ಸಂಬಂಧಿಸಿ ಆರೋಪಿ ಸ್ವಾಮಿ ಅಲಿಯಾಸ್ ಮೀಸೆ ಸ್ವಾಮಿ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿ ರಘುಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.

ನಿವೇಶನ ವಿಚಾರ ಹಾಗೂ ಹಳೇ ದ್ವೇಷ ಹಿನ್ನೆಲೆ ಫೆಬ್ರವರಿ 7ರಂದು ಕಿಶನ್ ಮತ್ತು ಕಿರಣ್ ಎಂಬುವವರನ್ನು ಸ್ವಾಮಿ, ದಿಲೀಪ್, ಮಧು, ರಘು ಸೇರಿ ಬರ್ಬರವಾಗಿ ಹತ್ಯೆಗೈದಿದ್ದರು. ಘಟನೆ ಬಳಿಕ ದಿಲೀಪ್, ಮಧು ಪೊಲೀಸರಿಗೆ ಶರಣಾಗಿದ್ದರು. ಸದ್ಯ ಈಗ ಆರೋಪಿ ಮೀಸೆ ಸ್ವಾಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿರಣ್(29) ಮತ್ತು ಕಿಶನ್(29) ಈ ಕೃತ್ಯದಲ್ಲಿ ಮೃತಪಟ್ಟಿದ್ದು, ಮೃತರಿಬ್ಬರೂ ಗೌರಿಶಂಕರ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ಮಧು ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತ್ಯ ನಡೆಸಿದ ನಾಲ್ವರ ಪೈಕಿ ಮೂವರು ಬಂಧನದಲ್ಲಿದ್ದು ಮತ್ತೋರ್ವ ಆರೋಪಿ ರಘುಗಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಜೋಡಿ ಕೊಲೆ: ಮೈಸೂರಿನಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಇಬ್ಬರ ಹತ್ಯೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?