ಪ್ರೀತಿಸಿ ಮದುವೆಯಾಗಿದ್ದ ಯುವತಿ ಕೈಕೊಟ್ಟ ಹಿನ್ನೆಲೆ ಮೊಬೈಲ್‌ ಟವರ್‌ ಏರಿದ ಪತಿರಾಯ

ಚಿಕ್ಕಬಳ್ಳಾಫುರ: ಪ್ರೀತಿಸಿ ಮದುವೆಯಾಗಿದ್ದ ಯುವತಿ ಕೈಕೊಟ್ಟ ಹಿನ್ನೆಲೆ ಮೊಬೈಲ್‌ ಟವರ್‌ ಏರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೋಡಪಲ್ಲಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನ ಹೆಸರು ಶ್ರೀಕಾಂತ್ ಈತ ಪಕ್ಕದ ಗ್ರಾಮದ ಶ್ರಾವಣಿಯನ್ನು ಪ್ರೀತಿಸಿದ್ದ, ಇತ್ತೀಚೆಗೆ ಇವರಿಬ್ಬರು ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ರು. ಇವರಿಬ್ಬರದ್ದು ಅಂತರ್ಜಾತಿ ವಿವಾಹ. ಆದರೆ ಶ್ರಾವಣಿ ಶ್ರೀಕಾಂತ್​ನ ಪ್ರೀತಿಗೆ ಎಳ್ಳು ನೀರು ಬಿಟ್ಟಿದ್ದಾಳೆ. ಹೀಗಾಗಿ ಮನನೊಂದ ಶ್ರೀಕಾಂತ್ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಬಾಗೇಪಲ್ಲಿ ಠಾಣೆ […]

ಪ್ರೀತಿಸಿ ಮದುವೆಯಾಗಿದ್ದ ಯುವತಿ ಕೈಕೊಟ್ಟ ಹಿನ್ನೆಲೆ ಮೊಬೈಲ್‌ ಟವರ್‌ ಏರಿದ ಪತಿರಾಯ
ಸಾಧು ಶ್ರೀನಾಥ್​

Updated on: Nov 24, 2019 | 9:49 AM

ಚಿಕ್ಕಬಳ್ಳಾಫುರ: ಪ್ರೀತಿಸಿ ಮದುವೆಯಾಗಿದ್ದ ಯುವತಿ ಕೈಕೊಟ್ಟ ಹಿನ್ನೆಲೆ ಮೊಬೈಲ್‌ ಟವರ್‌ ಏರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೋಡಪಲ್ಲಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನ ಹೆಸರು ಶ್ರೀಕಾಂತ್ ಈತ ಪಕ್ಕದ ಗ್ರಾಮದ ಶ್ರಾವಣಿಯನ್ನು ಪ್ರೀತಿಸಿದ್ದ, ಇತ್ತೀಚೆಗೆ ಇವರಿಬ್ಬರು ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ರು.

ಇವರಿಬ್ಬರದ್ದು ಅಂತರ್ಜಾತಿ ವಿವಾಹ. ಆದರೆ ಶ್ರಾವಣಿ ಶ್ರೀಕಾಂತ್​ನ ಪ್ರೀತಿಗೆ ಎಳ್ಳು ನೀರು ಬಿಟ್ಟಿದ್ದಾಳೆ. ಹೀಗಾಗಿ ಮನನೊಂದ ಶ್ರೀಕಾಂತ್ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಹಳ ಪ್ರಯತ್ನಗಳ ನಂತರ ಶ್ರೀಕಾಂತ್​ನ ಮನವೋಲಿಸಿ ಪೊಲೀಸರು ಕೆಳಗಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us