AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನ ಕೊಲೆ, ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಶವ ಪತ್ತೆ

5 ದಿನದ ಹಿಂದೆ ಆಟೋ ಸಮೇತ ಮನೆಯಿಂದ ಹೊರ ಹೋಗಿದ್ದ ಆಟೋ ಚಾಲಕ ನೊಹಾನ್ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ತಡರಾತ್ರಿ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಆಟೋ ಪತ್ತೆಯಾಗಿದ್ದು ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಚಾಲಕನ ಶವ ಸಿಕ್ಕಿದೆ.

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನ ಕೊಲೆ, ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಶವ ಪತ್ತೆ
ನೊಹಾನ್ ಧಾರವಾಡಕರ್
TV9 Web
| Edited By: ಆಯೇಷಾ ಬಾನು|

Updated on: Jan 10, 2022 | 8:33 AM

Share

ಬೆಳಗಾವಿ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನ ಕೊಲೆ ಮಾಡಿರುವ ಘಟನೆ ಬೆಳಗಾವಿ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಆಟೋ ಚಾಲಕ ನೊಹಾನ್ ಧಾರವಾಡಕರ್(23) ಬರ್ಬರ ಹತ್ಯೆಯಾಗಿದೆ.

5 ದಿನದ ಹಿಂದೆ ಆಟೋ ಸಮೇತ ಮನೆಯಿಂದ ಹೊರ ಹೋಗಿದ್ದ ಆಟೋ ಚಾಲಕ ನೊಹಾನ್ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ತಡರಾತ್ರಿ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಆಟೋ ಪತ್ತೆಯಾಗಿದ್ದು ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಚಾಲಕನ ಶವ ಸಿಕ್ಕಿದೆ. ಸ್ನೇಹಿತರೇ ನೊಹಾನ್‌ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತಿಯೇ ಪತ್ನಿಯ ಕೊಂದು ಹೂತಿಟ್ಟ ಇನ್ನು ಮತ್ತೊಂದೆಡೆ ಚಿತ್ರದುರ್ಗದ ಕೋಣನೂರು ಗ್ರಾಮದಲ್ಲಿ ಪತ್ನಿ ಸುಮಾ(26) ಹತ್ಯೆಗೈದು ಶವ ಹೂತಿಟ್ಟಿದ್ದ ಆರೋಪಿ ಪತಿ ನಾರಪ್ಪ(40)ನನ್ನು ಪೊಲೀಸರು ಬಂಧಿಸಿದ್ದಾರೆ. ಭರಮಸಾಗರ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ.

ಮದ್ಯ ಸೇವನೆ ಬಿಟ್ಟು ಮನೆಗೆ ಹಣ ನೀಡುವಂತೆ ಕೇಳಿದ ಪತ್ನಿಯನ್ನು ಒನಕೆಯಿಂದ ಹೊಡೆದು ಹತ್ಯೆಗೈದು, ಶವವನ್ನು ಆರೋಪಿ ನಾರಪ್ಪ ಮನೆಯಲ್ಲೇ ಹೂತಿಟ್ಟಿದ್ದ. ಡಿಸೆಂಬರ್ 25ರ ರಾತ್ರಿ ಘಟನೆ ನಡೆದಿದ್ದು ಶವ ಮನೆಯಲ್ಲೇ ಹೂತಿಟ್ಟು ನಾಪತ್ತೆ ಆಗಿದ್ದಾಳೆಂದು ಬಿಂಬಿಸಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಇಂದಿನಿಂದ ದೇಶದಲ್ಲಿ ಕೊವಿಡ್ 19 ಲಸಿಕೆ ಬೂಸ್ಟರ್ ಡೋಸ್ ನೀಡಿಕೆ ಅಭಿಯಾನ; ಮತ್ತೆ ನೋಂದಣಿ ಬೇಕಾ? ಯಾವ ಲಸಿಕೆ? ಇಲ್ಲಿದೆ ಮಾಹಿತಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ