AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ಮೇಲೆ ಅಪಘಾತ; ಸೇತುವೆಯಿಂದ ನದಿಗೆ ಬಿದ್ದ ಬೈಕ್ ಸವಾರನ ಮೃತ ದೇಹ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಬಳಿ ಕಾರು, ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಅಕ್ಷಯ್ (26), ಸುನಿಲ್ (27) ಇಬ್ಬರೂ ನದಿಗೆ ಬಿದ್ದಿದ್ದರು. ಓರ್ವ ಸವಾರ ಈಜುತ್ತಾ ದಡ ಸೇರಿದ್ದ.

ಸೇತುವೆ ಮೇಲೆ ಅಪಘಾತ; ಸೇತುವೆಯಿಂದ ನದಿಗೆ ಬಿದ್ದ ಬೈಕ್ ಸವಾರನ ಮೃತ ದೇಹ ಪತ್ತೆ
ಸೇತುವೆಯಿಂದ ನದಿಗೆ ಬಿದ್ದ ಸಾವರನ ಮೃತ ದೇಹ ಪತ್ತೆ
TV9 Web
| Edited By: |

Updated on:Mar 08, 2022 | 7:31 PM

Share

ಉತ್ತರ ಕನ್ನಡ: ಸೇತುವೆ ಮೇಲೆ ಅಪಘಾತವಾಗಿ ಸೇತುವೆಯಿಂದ ಶರಾವತಿ ನದಿಗೆ ಬಿದ್ದಿದ್ದ ಬೈಕ್ ಸವಾರನ ಶವ ಪತ್ತೆಯಾಗಿದೆ. ಬೈಕ್ ಸವಾರ ಅಕ್ಷಯ್(26) ಮೃತ ದೇಹ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಬಳಿ ಕಾರು, ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಅಕ್ಷಯ್ (26), ಸುನಿಲ್ (27) ಇಬ್ಬರೂ ನದಿಗೆ ಬಿದ್ದಿದ್ದರು. ಓರ್ವ ಸವಾರ ಈಜುತ್ತಾ ದಡ ಸೇರಿದ್ದ. ಆದ್ರೆ ಅಕ್ಷಯ್ಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿದ್ದು ಮೃತ ದೇಹ ಪತ್ತೆಯಾಗಿದೆ. ಹೊನ್ನಾವರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಲಿನ ವಾಹನ ಡಿಕ್ಕಿ ಹೊಡೆದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಹಿಳೆ ಪಾರು ಉಡುಪಿ: ಜಿಲ್ಲೆಯ ಪೆರಂಪಳ್ಳಿ ಮಣಿಪಾಲ ಮುಖ್ಯ ರಸ್ತೆಯಲ್ಲಿ ಸ್ಕೂಟರ್ ಮೂಲಕ ರಸ್ತೆ ದಾಟುತ್ತಿದ್ದ ಮಹಿಳೆಗೆ ಹಾಲಿನ ವಾಹನ ಡಿಕ್ಕಿಯಾಗಿದ್ದು ಅದೃಷ್ಟವಶಾತ್ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಲಿನ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ರಸ್ತೆಯ ಮೇಲೆ ಬಿದ್ದಿದ್ದು ಯಾವುದೇ ರೀತಿಯ ಗಾಯಗಳಾಗಿಲ್ಲ. ರಸ್ತೆಗೆ ಮಹಿಳೆ ಬೀಳುತ್ತಿದ್ದಂತೆ ಬಸ್ ಸಿಬ್ಬಂದಿ, ಸಾರ್ವಜನಿಕರು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ್ರು.

ಬೀಗ ಒಡೆದು ದುಷ್ಕರ್ಮಿಗಳಿಂದ ಸರಣಿ ಕಳ್ಳತನ ಚಿಕ್ಕಮಗಳೂರು: ಬೀಗ ಒಡೆದು ದುಷ್ಕರ್ಮಿಗಳು ಸರಣಿ ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಕೊಟ್ಟಿಗೆಹಾರದಲ್ಲಿ ಕೋಳಿ ಅಂಗಡಿ, ಗ್ಯಾರೇಜ್ನಲ್ಲಿ ಕಳ್ಳತನ ನಡೆದಿದೆ. ಪ್ರಾಥಮಿಕ ಶಾಲೆಯಲ್ಲಿ 50 ಸಾವಿರ ರೂಪಾಯಿ ಮೌಲ್ಯದ ಪ್ರೊಜೆಕ್ಟರ್ ಕೂಡ ಕಳ್ಳತನವಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಕುಡಿತ ಬಿಡಲು ಪತಿ ಒಪ್ಪದ ಹಿನ್ನೆಲೆ ಪತ್ನಿ ನೇಣಿಗೆ ಶರಣು ವಿಜಯನಗರ: ಕುಡಿತ ಬಿಡಲು ಪತಿ ಶಶಿಧರ್ ಒಪ್ಪದ ಹಿನ್ನೆಲೆ ಪತ್ನಿ ನೇಣಿಗೆ ಶರಣಾದ ಘಟನೆ ಕೂಡ್ಲಗಿ ತಾಲೂಕಿನ ಬೆಳಗಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರುತಿ(22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಗೆ ಕುಡಿತ ಬಿಡುವಂತೆ ಹೇಳಿದಕ್ಕೆ ಪತಿ ಒಪ್ಪದ ಕಾರಣ ಮನನೊಂದ ಮಹಿಳೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಟಾಪ್ ಮಾತ್ರ ಧರಿಸಿ ಫೋಟೋ ಹಂಚಿಕೊಂಡ ಮಲ್ಲಿಕಾ ಶೆರಾವತ್

ಅಪ್ಪು ಸಮಾಧಿಗೆ ಆಮಂತ್ರಣ ಪತ್ರವಿಟ್ಟು ಕಾರ್ಯಕ್ರಮಕ್ಕೆ ಆಹ್ವಾನಿಸಿದ ‘ಬಿಗ್ ಬಾಸ್’ ಖ್ಯಾತಿಯ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ

Published On - 7:09 pm, Tue, 8 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್