AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ಮೇಲೆ ಅಪಘಾತ; ಸೇತುವೆಯಿಂದ ನದಿಗೆ ಬಿದ್ದ ಬೈಕ್ ಸವಾರನ ಮೃತ ದೇಹ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಬಳಿ ಕಾರು, ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಅಕ್ಷಯ್ (26), ಸುನಿಲ್ (27) ಇಬ್ಬರೂ ನದಿಗೆ ಬಿದ್ದಿದ್ದರು. ಓರ್ವ ಸವಾರ ಈಜುತ್ತಾ ದಡ ಸೇರಿದ್ದ.

ಸೇತುವೆ ಮೇಲೆ ಅಪಘಾತ; ಸೇತುವೆಯಿಂದ ನದಿಗೆ ಬಿದ್ದ ಬೈಕ್ ಸವಾರನ ಮೃತ ದೇಹ ಪತ್ತೆ
ಸೇತುವೆಯಿಂದ ನದಿಗೆ ಬಿದ್ದ ಸಾವರನ ಮೃತ ದೇಹ ಪತ್ತೆ
TV9 Web
| Edited By: |

Updated on:Mar 08, 2022 | 7:31 PM

Share

ಉತ್ತರ ಕನ್ನಡ: ಸೇತುವೆ ಮೇಲೆ ಅಪಘಾತವಾಗಿ ಸೇತುವೆಯಿಂದ ಶರಾವತಿ ನದಿಗೆ ಬಿದ್ದಿದ್ದ ಬೈಕ್ ಸವಾರನ ಶವ ಪತ್ತೆಯಾಗಿದೆ. ಬೈಕ್ ಸವಾರ ಅಕ್ಷಯ್(26) ಮೃತ ದೇಹ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಬಳಿ ಕಾರು, ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಅಕ್ಷಯ್ (26), ಸುನಿಲ್ (27) ಇಬ್ಬರೂ ನದಿಗೆ ಬಿದ್ದಿದ್ದರು. ಓರ್ವ ಸವಾರ ಈಜುತ್ತಾ ದಡ ಸೇರಿದ್ದ. ಆದ್ರೆ ಅಕ್ಷಯ್ಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿದ್ದು ಮೃತ ದೇಹ ಪತ್ತೆಯಾಗಿದೆ. ಹೊನ್ನಾವರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಲಿನ ವಾಹನ ಡಿಕ್ಕಿ ಹೊಡೆದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಹಿಳೆ ಪಾರು ಉಡುಪಿ: ಜಿಲ್ಲೆಯ ಪೆರಂಪಳ್ಳಿ ಮಣಿಪಾಲ ಮುಖ್ಯ ರಸ್ತೆಯಲ್ಲಿ ಸ್ಕೂಟರ್ ಮೂಲಕ ರಸ್ತೆ ದಾಟುತ್ತಿದ್ದ ಮಹಿಳೆಗೆ ಹಾಲಿನ ವಾಹನ ಡಿಕ್ಕಿಯಾಗಿದ್ದು ಅದೃಷ್ಟವಶಾತ್ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಲಿನ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ರಸ್ತೆಯ ಮೇಲೆ ಬಿದ್ದಿದ್ದು ಯಾವುದೇ ರೀತಿಯ ಗಾಯಗಳಾಗಿಲ್ಲ. ರಸ್ತೆಗೆ ಮಹಿಳೆ ಬೀಳುತ್ತಿದ್ದಂತೆ ಬಸ್ ಸಿಬ್ಬಂದಿ, ಸಾರ್ವಜನಿಕರು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ್ರು.

ಬೀಗ ಒಡೆದು ದುಷ್ಕರ್ಮಿಗಳಿಂದ ಸರಣಿ ಕಳ್ಳತನ ಚಿಕ್ಕಮಗಳೂರು: ಬೀಗ ಒಡೆದು ದುಷ್ಕರ್ಮಿಗಳು ಸರಣಿ ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಕೊಟ್ಟಿಗೆಹಾರದಲ್ಲಿ ಕೋಳಿ ಅಂಗಡಿ, ಗ್ಯಾರೇಜ್ನಲ್ಲಿ ಕಳ್ಳತನ ನಡೆದಿದೆ. ಪ್ರಾಥಮಿಕ ಶಾಲೆಯಲ್ಲಿ 50 ಸಾವಿರ ರೂಪಾಯಿ ಮೌಲ್ಯದ ಪ್ರೊಜೆಕ್ಟರ್ ಕೂಡ ಕಳ್ಳತನವಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಕುಡಿತ ಬಿಡಲು ಪತಿ ಒಪ್ಪದ ಹಿನ್ನೆಲೆ ಪತ್ನಿ ನೇಣಿಗೆ ಶರಣು ವಿಜಯನಗರ: ಕುಡಿತ ಬಿಡಲು ಪತಿ ಶಶಿಧರ್ ಒಪ್ಪದ ಹಿನ್ನೆಲೆ ಪತ್ನಿ ನೇಣಿಗೆ ಶರಣಾದ ಘಟನೆ ಕೂಡ್ಲಗಿ ತಾಲೂಕಿನ ಬೆಳಗಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರುತಿ(22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಗೆ ಕುಡಿತ ಬಿಡುವಂತೆ ಹೇಳಿದಕ್ಕೆ ಪತಿ ಒಪ್ಪದ ಕಾರಣ ಮನನೊಂದ ಮಹಿಳೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಟಾಪ್ ಮಾತ್ರ ಧರಿಸಿ ಫೋಟೋ ಹಂಚಿಕೊಂಡ ಮಲ್ಲಿಕಾ ಶೆರಾವತ್

ಅಪ್ಪು ಸಮಾಧಿಗೆ ಆಮಂತ್ರಣ ಪತ್ರವಿಟ್ಟು ಕಾರ್ಯಕ್ರಮಕ್ಕೆ ಆಹ್ವಾನಿಸಿದ ‘ಬಿಗ್ ಬಾಸ್’ ಖ್ಯಾತಿಯ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ

Published On - 7:09 pm, Tue, 8 March 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ