AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಂತ್ಯಕ್ರಿಯೆಯಿಂದಲೂ‌ ದೂರ ಉಳಿದ ಕುಟುಂಬಸ್ಥರು; 3 ದಿನದಿಂದ ಆಸ್ಪತ್ರೆಯಲ್ಲೇ ಮೃತದೇಹ

ಕೊವಿಡ್​ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲೂ ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್​​ ಚಾಲಕ ಮೃತದೇಹದ ಅಂತ್ಯಕ್ರಿಯೆ ನಡೆಸಿದ್ದಾರೆ.

ಬೆಂಗಳೂರು: ಅಂತ್ಯಕ್ರಿಯೆಯಿಂದಲೂ‌ ದೂರ ಉಳಿದ ಕುಟುಂಬಸ್ಥರು; 3 ದಿನದಿಂದ ಆಸ್ಪತ್ರೆಯಲ್ಲೇ ಮೃತದೇಹ
ಸಾಂದರ್ಭಿಕ ಚಿತ್ರ
shruti hegde
|

Updated on: May 16, 2021 | 1:47 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದು ಜನರಿಗೆ ಆತಂಕ ಸೃಷ್ಟಿಸುತ್ತಿದೆ. ಕೊವಿಡ್​ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್​​ ಚಾಲಕ ಮೃತದೇಹದ ಅಂತ್ಯಕ್ರಿಯೆ ನಡೆಸಿದ್ದಾರೆ.

ರಾಜನ್ ಕುಮಾರ್ (28) ಎಂಬುವವರಿಗೆ ಕೊವಿಡ್​ ಸೋಂಕು ತಗುಲಿದ್ದ ಕಾರಣ ಯಲಹಂಕ ಚೈತನ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ರಾಜನ್​ ಕುಮಾರ್​ ಸಾವಿಗೀಡಾಗಿದ್ದಾರೆ. ವಿಷಯ ತಿಳಿಸಲು ಕುಟುಂಬಸ್ಥರಿಗೆ ಕರೆ ಮಾಡಿದರೆ ನಾಟ್​ ರೀಚೆಬಲ್​ ಬರುತ್ತಿದೆ. 3 ದಿನಗಳಾದರೂ ಕುಟುಂಬಸ್ಥರು ಮತ್ತು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಂಬ್ಯಲೆನ್ಸ್​ ಚಾಲಕ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಲಕ್ಷ್ಮೀಪುರದ ಮೇಡಿ ಅಗ್ರಹಾರ ಚಿತಾಗಾರದಲ್ಲಿ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿದೆ.

ಮೃತ ವ್ಯಕ್ತಿಯ ಕುಟುಂಬಸ್ಥರು ಯಾರು? ಎಲ್ಲಿಯವರು ಎಂಬ ಮಾಹಿತಿ ತಿಳಿದು ಬಂದಿಲ್ಲ. ಆಸ್ಪತ್ರೆಯ ಬಿಲ್ ಕಟ್ಟಲಾಗದೆಯೇ ಶವ ಬಿಟ್ಟು ಹೋದ್ರಾ ಅಥವಾ ಕೊರೊನಾ ಭಯಕ್ಕೆ ಅಂತ್ಯಸಂಸ್ಕಾರದಿಂದ ದೂರ ಉಳಿದ್ರಾ ಎನ್ನುವ ಪ್ರಶ್ನೆ ಎದುರಾಗಿದೆ.

10 ದಿನದಿಂದ ಕಾಲ್ ಮಾಡಿದ್ರೂ ಒಂದೇ ಒಂದು ಬೆಡ್ ಸಿಗಲಿಲ್ಲ ಕೊವಿಡ್​ನಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬೆಡ್​ ಸಮಸ್ಯೆ ಉಂಟಾಗುತ್ತಿದೆ. 10 ದಿನದಿಂದ ಕಾಲ್ ಮಾಡಿದ್ರೂ ಒಂದೇ ಒಂದು ಬೆಡ್ ಸಿಗಲಿಲ್ಲ. ಅಷ್ಟೂ ದಿನ ಖಾಸಗಿ ಆಸ್ಪತ್ರೆಯಲ್ಲೇ ಇರಬೇಕಾಯಿತು. ಆದರೂ ಜೀವ ಉಳಿಯಲಿಲ್ಲ ಎಂದು ಕೂಡ್ಲು ಚಿತಗಾರದಲ್ಲಿ ಮೃತ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ