AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಂತ್ಯಕ್ರಿಯೆಯಿಂದಲೂ‌ ದೂರ ಉಳಿದ ಕುಟುಂಬಸ್ಥರು; 3 ದಿನದಿಂದ ಆಸ್ಪತ್ರೆಯಲ್ಲೇ ಮೃತದೇಹ

ಕೊವಿಡ್​ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲೂ ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್​​ ಚಾಲಕ ಮೃತದೇಹದ ಅಂತ್ಯಕ್ರಿಯೆ ನಡೆಸಿದ್ದಾರೆ.

ಬೆಂಗಳೂರು: ಅಂತ್ಯಕ್ರಿಯೆಯಿಂದಲೂ‌ ದೂರ ಉಳಿದ ಕುಟುಂಬಸ್ಥರು; 3 ದಿನದಿಂದ ಆಸ್ಪತ್ರೆಯಲ್ಲೇ ಮೃತದೇಹ
ಸಾಂದರ್ಭಿಕ ಚಿತ್ರ
shruti hegde
|

Updated on: May 16, 2021 | 1:47 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದು ಜನರಿಗೆ ಆತಂಕ ಸೃಷ್ಟಿಸುತ್ತಿದೆ. ಕೊವಿಡ್​ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್​​ ಚಾಲಕ ಮೃತದೇಹದ ಅಂತ್ಯಕ್ರಿಯೆ ನಡೆಸಿದ್ದಾರೆ.

ರಾಜನ್ ಕುಮಾರ್ (28) ಎಂಬುವವರಿಗೆ ಕೊವಿಡ್​ ಸೋಂಕು ತಗುಲಿದ್ದ ಕಾರಣ ಯಲಹಂಕ ಚೈತನ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ರಾಜನ್​ ಕುಮಾರ್​ ಸಾವಿಗೀಡಾಗಿದ್ದಾರೆ. ವಿಷಯ ತಿಳಿಸಲು ಕುಟುಂಬಸ್ಥರಿಗೆ ಕರೆ ಮಾಡಿದರೆ ನಾಟ್​ ರೀಚೆಬಲ್​ ಬರುತ್ತಿದೆ. 3 ದಿನಗಳಾದರೂ ಕುಟುಂಬಸ್ಥರು ಮತ್ತು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಂಬ್ಯಲೆನ್ಸ್​ ಚಾಲಕ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಲಕ್ಷ್ಮೀಪುರದ ಮೇಡಿ ಅಗ್ರಹಾರ ಚಿತಾಗಾರದಲ್ಲಿ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿದೆ.

ಮೃತ ವ್ಯಕ್ತಿಯ ಕುಟುಂಬಸ್ಥರು ಯಾರು? ಎಲ್ಲಿಯವರು ಎಂಬ ಮಾಹಿತಿ ತಿಳಿದು ಬಂದಿಲ್ಲ. ಆಸ್ಪತ್ರೆಯ ಬಿಲ್ ಕಟ್ಟಲಾಗದೆಯೇ ಶವ ಬಿಟ್ಟು ಹೋದ್ರಾ ಅಥವಾ ಕೊರೊನಾ ಭಯಕ್ಕೆ ಅಂತ್ಯಸಂಸ್ಕಾರದಿಂದ ದೂರ ಉಳಿದ್ರಾ ಎನ್ನುವ ಪ್ರಶ್ನೆ ಎದುರಾಗಿದೆ.

10 ದಿನದಿಂದ ಕಾಲ್ ಮಾಡಿದ್ರೂ ಒಂದೇ ಒಂದು ಬೆಡ್ ಸಿಗಲಿಲ್ಲ ಕೊವಿಡ್​ನಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬೆಡ್​ ಸಮಸ್ಯೆ ಉಂಟಾಗುತ್ತಿದೆ. 10 ದಿನದಿಂದ ಕಾಲ್ ಮಾಡಿದ್ರೂ ಒಂದೇ ಒಂದು ಬೆಡ್ ಸಿಗಲಿಲ್ಲ. ಅಷ್ಟೂ ದಿನ ಖಾಸಗಿ ಆಸ್ಪತ್ರೆಯಲ್ಲೇ ಇರಬೇಕಾಯಿತು. ಆದರೂ ಜೀವ ಉಳಿಯಲಿಲ್ಲ ಎಂದು ಕೂಡ್ಲು ಚಿತಗಾರದಲ್ಲಿ ಮೃತ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ