AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಂತ್ಯಕ್ರಿಯೆಯಿಂದಲೂ‌ ದೂರ ಉಳಿದ ಕುಟುಂಬಸ್ಥರು; 3 ದಿನದಿಂದ ಆಸ್ಪತ್ರೆಯಲ್ಲೇ ಮೃತದೇಹ

ಕೊವಿಡ್​ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲೂ ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್​​ ಚಾಲಕ ಮೃತದೇಹದ ಅಂತ್ಯಕ್ರಿಯೆ ನಡೆಸಿದ್ದಾರೆ.

ಬೆಂಗಳೂರು: ಅಂತ್ಯಕ್ರಿಯೆಯಿಂದಲೂ‌ ದೂರ ಉಳಿದ ಕುಟುಂಬಸ್ಥರು; 3 ದಿನದಿಂದ ಆಸ್ಪತ್ರೆಯಲ್ಲೇ ಮೃತದೇಹ
ಸಾಂದರ್ಭಿಕ ಚಿತ್ರ
shruti hegde
|

Updated on: May 16, 2021 | 1:47 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದು ಜನರಿಗೆ ಆತಂಕ ಸೃಷ್ಟಿಸುತ್ತಿದೆ. ಕೊವಿಡ್​ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್​​ ಚಾಲಕ ಮೃತದೇಹದ ಅಂತ್ಯಕ್ರಿಯೆ ನಡೆಸಿದ್ದಾರೆ.

ರಾಜನ್ ಕುಮಾರ್ (28) ಎಂಬುವವರಿಗೆ ಕೊವಿಡ್​ ಸೋಂಕು ತಗುಲಿದ್ದ ಕಾರಣ ಯಲಹಂಕ ಚೈತನ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ರಾಜನ್​ ಕುಮಾರ್​ ಸಾವಿಗೀಡಾಗಿದ್ದಾರೆ. ವಿಷಯ ತಿಳಿಸಲು ಕುಟುಂಬಸ್ಥರಿಗೆ ಕರೆ ಮಾಡಿದರೆ ನಾಟ್​ ರೀಚೆಬಲ್​ ಬರುತ್ತಿದೆ. 3 ದಿನಗಳಾದರೂ ಕುಟುಂಬಸ್ಥರು ಮತ್ತು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಂಬ್ಯಲೆನ್ಸ್​ ಚಾಲಕ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಲಕ್ಷ್ಮೀಪುರದ ಮೇಡಿ ಅಗ್ರಹಾರ ಚಿತಾಗಾರದಲ್ಲಿ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿದೆ.

ಮೃತ ವ್ಯಕ್ತಿಯ ಕುಟುಂಬಸ್ಥರು ಯಾರು? ಎಲ್ಲಿಯವರು ಎಂಬ ಮಾಹಿತಿ ತಿಳಿದು ಬಂದಿಲ್ಲ. ಆಸ್ಪತ್ರೆಯ ಬಿಲ್ ಕಟ್ಟಲಾಗದೆಯೇ ಶವ ಬಿಟ್ಟು ಹೋದ್ರಾ ಅಥವಾ ಕೊರೊನಾ ಭಯಕ್ಕೆ ಅಂತ್ಯಸಂಸ್ಕಾರದಿಂದ ದೂರ ಉಳಿದ್ರಾ ಎನ್ನುವ ಪ್ರಶ್ನೆ ಎದುರಾಗಿದೆ.

10 ದಿನದಿಂದ ಕಾಲ್ ಮಾಡಿದ್ರೂ ಒಂದೇ ಒಂದು ಬೆಡ್ ಸಿಗಲಿಲ್ಲ ಕೊವಿಡ್​ನಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬೆಡ್​ ಸಮಸ್ಯೆ ಉಂಟಾಗುತ್ತಿದೆ. 10 ದಿನದಿಂದ ಕಾಲ್ ಮಾಡಿದ್ರೂ ಒಂದೇ ಒಂದು ಬೆಡ್ ಸಿಗಲಿಲ್ಲ. ಅಷ್ಟೂ ದಿನ ಖಾಸಗಿ ಆಸ್ಪತ್ರೆಯಲ್ಲೇ ಇರಬೇಕಾಯಿತು. ಆದರೂ ಜೀವ ಉಳಿಯಲಿಲ್ಲ ಎಂದು ಕೂಡ್ಲು ಚಿತಗಾರದಲ್ಲಿ ಮೃತ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ