AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಬಲಿಯಾದ ಅಮಾಯಕ: ವೈದ್ಯರ ನಿರ್ಲಕ್ಷ್ಯಕ್ಕೆ ಸಂಬಂಧಿಕರ ಆಕ್ರೋಶ

ಲಾಚನಕೇರಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಫಕೀರಪ್ಪನನ್ನು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಕೊಪ್ಪಳದ ಕೆ.ಎಸ್.ಆಸ್ಪತ್ರೆಗೆ ಕರೆತರಲಾಗಿತ್ತು. ನಿನ್ನೆ ರಾತ್ರಿಯಿಂದ ಮಧ್ಯಾಹ್ನ 12.30ರ ವರೆಗೆ ಚಿಕಿತ್ಸೆ ನೀಡಲಾಗಿದ್ದು,ನಂತರ ಡೆತ್ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಬಲಿಯಾದ ಅಮಾಯಕ: ವೈದ್ಯರ ನಿರ್ಲಕ್ಷ್ಯಕ್ಕೆ ಸಂಬಂಧಿಕರ ಆಕ್ರೋಶ
ಆಸ್ಪತ್ರೆಯ ದೃಶ್ಯ
preethi shettigar
| Edited By: |

Updated on:Feb 04, 2021 | 8:18 PM

Share

ಕೊಪ್ಪಳ:  ಜೀವ ಇರುವಾಗಲೇ ಮೃತಪಟ್ಟಿದ್ದಾನೆ ಎಂದು ದೃಢಪಡಿಸಿ ವೈದ್ಯರು ಎಡವಟ್ಟು ಮಾಡಿದ ಘಟನೆ ಕೊಪ್ಪಳದ ಕೆ.ಎಸ್.ಆಸ್ಪತ್ರೆಯಲ್ಲಿ ನಡೆದಿದೆ. ಲಾಚನಕೇರಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಫಕೀರಪ್ಪನನ್ನು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಕೊಪ್ಪಳದ ಕೆ.ಎಸ್.ಆಸ್ಪತ್ರೆಗೆ ಕರೆತರಲಾಗಿತ್ತು. ನಿನ್ನೆ ರಾತ್ರಿಯಿಂದ ಮಧ್ಯಾಹ್ನ 12.30ರ ವರೆಗೆ ಚಿಕಿತ್ಸೆ ನೀಡಲಾಗಿದ್ದು, ನಂತರ ಡಿಸ್‌ಚಾರ್ಜ್ ಸಾರಾಂಶದಲ್ಲಿ ಡೆತ್ ಎಂದು ಬರೆದಿದ್ದಾರೆ.

ಡೆತ್ ಎಂಬ ಪದ ನೋಡಿ ಮೃತದೇಹ ಕೊಡಿ ಎಂದು ಸಂಬಂಧಿಕರು ಕೇಳಿದಾಗ ಜೀವ ಇರುವುದು ಬೆಳಕಿಗೆ ಬಂದಿದ್ದು, ಫಕೀರಪ್ಪ ದೊಡ್ಡಮನಿ ಉಸಿರಾಡಿದ್ದಾನೆ. ತಕ್ಷಣವೇ ಆತನನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಸಂಬಂಧಿಕರು ಕರೆದುಕೊಂಡು ಹೊಗಿದ್ದು, ಆ್ಯಂಬುಲೆನ್ಸ್‌ನ್ನು ಕೂಡ ನೀಡದೇ ಕೆ.ಎಸ್‌.ಆಸ್ಪತ್ರೆ ಸಿಬ್ಬಂದಿಗಳು ಅಮಾನವೀಯತೆ ತೋರಿದ್ದಾರೆ. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಇದೀಗ ಫಕೀರಪ್ಪ ಮೃತಪಟ್ಟಿದ್ದಾನೆ. ಆಸ್ಪತ್ರೆಯವರ ಈ ಎಡವಟ್ಟಿಗೆ ಸದ್ಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡೆತ್ ಸಾರಾಂಶ ಹಿಡಿದಿರುವ ಕುಟುಂಬಸ್ಥರು

ಆಯುಷ್ ಆಸ್ಪತ್ರೆ ಕರ್ಮಕಾಂಡ.. ಲಕ್ಷಾಂತರ ರೂ ಸಂಬಳ ಪಡೆಯುವ ವೈದ್ಯರು ಆಸ್ಪತ್ರೆಗೆ ಬಾರದೇ ಚಕ್ಕರ್!

Published On - 7:31 pm, Thu, 4 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?