AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರುಗಳ ಮುಖಾಮುಖಿ ಡಿಕ್ಕಿ, ಮೂವರ ಸಾವು.. ಅಪಘಾತದ ತೀವ್ರತೆಗೆ ಡಿವೈಡರ್​ ಏರಿದ ಕಾರು!

ಅಪಘಾತದ ತೀವ್ರತೆಗೆ ಎರಡು ಕಾರುಗಳು ನಜ್ಜುಗುಜ್ಜಾಗಿದ್ದು, ಅದರಲೊಂದು ಕಾರು ರಸ್ತೆ ವಿಭಜಕದ ಮೇಲೆ ಹೋಗಿ ಕುಳಿತಿದೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾರುಗಳ ಮುಖಾಮುಖಿ ಡಿಕ್ಕಿ, ಮೂವರ ಸಾವು.. ಅಪಘಾತದ ತೀವ್ರತೆಗೆ ಡಿವೈಡರ್​ ಏರಿದ ಕಾರು!
ಮುಖಾಮುಖಿ ಡಿಕ್ಕಿಯಾದ ಕಾರುಗಳು
ಪೃಥ್ವಿಶಂಕರ
| Updated By: ಆಯೇಷಾ ಬಾನು|

Updated on:Jan 10, 2021 | 10:22 AM

Share

ಚಿಕ್ಕಮಗಳೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ರಂಗೇನಹಳ್ಳಿ ಬಳಿ ನಡೆದಿದೆ.

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದು ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಅಪಘಾತದ ತೀವ್ರತೆಗೆ ಎರಡು ಕಾರುಗಳು ನಜ್ಜುಗುಜ್ಜಾಗಿದ್ದು, ಅದರಲೊಂದು ಕಾರು ರಸ್ತೆ ವಿಭಜಕದ ಮೇಲೆ ಹೋಗಿ ನಿಂತಿದೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 2:33 pm, Sat, 9 January 21