AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಗಿನಲ್ಲಿ ನಿಂಬೆರಸ ಹಾಕಿಕೊಂಡ ಆರೋಗ್ಯವಾಗಿದ್ದ ವ್ಯಕ್ತಿ ಸಾವು

ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ಮನೆಯವರು ಹೇಳಿದ್ದಾರೆ. ಬೆಳಗ್ಗೆ ಇವರು ಆರೋಗ್ಯವಾಗಿಯೇ ಇದ್ದರು. ಆದರೆ ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಮೂಗಿನಲ್ಲಿ ನಿಂಬೆರಸ ಹಾಕಿಕೊಂಡ ಆರೋಗ್ಯವಾಗಿದ್ದ ವ್ಯಕ್ತಿ ಸಾವು
ಮೃತ ಶಿಕ್ಷಕ ಬಸವರಾಜ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 28, 2021 | 5:15 PM

ರಾಯಚೂರು: ಆರೋಗ್ಯವಾಗಿದ್ದ ವ್ಯಕ್ತಿಯೊಬ್ಬರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡು ಮೃತಪಟ್ಟ ಘಟನೆ ಸಿಂಧನೂರಿನ ನಟರಾಜ ಕಾಲೋನಿಯಲ್ಲಿ ಬುಧವಾರ ನಡೆದಿದೆ. ನಗರದ ಶರಣಬಸವೇಶ್ವರ ಕಾಲೋ‌ನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಸವರಾಜ (43) ಮೃತರು. ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ಮನೆಯವರು ಹೇಳಿದ್ದಾರೆ. ಬೆಳಗ್ಗೆ ಇವರು ಆರೋಗ್ಯವಾಗಿಯೇ ಇದ್ದರು. ಆದರೆ ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಯಿ ಕಳೆದುಕೊಂಡ ಮಗನ ಕಣ್ಣೀರು ಬೆಂಗಳೂರು: ಕೊರೊನಾ ಸೋಂಕಿನಿಂದ ಅಮ್ಮನನ್ನು ಕಳೆದುಕೊಂಡ ದುಃಖತಪ್ತ ಮಗನೊಬ್ಬನ ಕಣ್ಣೀರ ಎಲ್ಲರ ಕರ್ಣಣಾಲಿಗಳನ್ನು ಒದ್ದೆಯಾಗಿಸಿತು. ಬೆಂಗಳೂರಿನ ಸುಮನಹಳ್ಳಿ ಚಿತಾಗಾರ ಬಳಿ ಈ ಮನಕಲಕುವ ದೃಶ್ಯ ಕಂಡುಬಂತು. ಆಟೋ ಓಡಿಸಿಕೊಂಡು ಅಮ್ಮನನ್ನು ಸಾಕುತ್ತಿದ್ದ ಪುತ್ರ ಇದೀಗ ತನ್ನ ಏಕೈಕ ಆಸರೆಯನ್ನು ಕಳೆದುಕೊಂಡು ಮುಂದೇನು ಎಂದು ತೋಚದೇ ಕಣ್ಣೀರು ಹರಿಸುತ್ತಿದ್ದಾನೆ. ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿದಾಗ ಇವರ ತಾಯಿಗೆ ಕೊವಿಡ್ ಪತ್ತೆಯಾಗಿತ್ತು.

‘ನಮ್ಮ ತಾಯಿಗೆ ಯಾವ ಆಸ್ಪತ್ರೆಯಲ್ಲೂ ಬೆಡ್‌ ಸಿಗಲಿಲ್ಲ. ಉಸಿರಾಟದ ಸಮಸ್ಯೆ ಸಹ ಕಾಣಿಸಿತ್ತು. ಮನೆಗೆ ಕರೆತಂದ ನಂತರ ಒಂದೇ ಗಂಟೆಯಲ್ಲಿ ಮೃತಪಟ್ಟಿದ್ದಾರೆ. ಪರಿಚಯಸ್ಥರ ಮೂಲಕ ಚಿತಾಗಾರಕ್ಕೆ ತಾಯಿ ಶವ ತಂದಿದ್ದೇನೆ. ಸಂಬಂಧಿಕರೆಲ್ಲರೂ ಊರಿನಲ್ಲಿದ್ದಾರೆ. ಇಲ್ಲಿ ಯಾರೂ ಇಲ್ಲ. ತಾಯಿ ಕಳೆದುಕೊಂಡ ನಾನೀಗ ಒಂಟಿಯಾಗಿದ್ದೇನೆ’ ಎಂದು ಯುವಕ ಕಣ್ಣೀರಿಟ್ಟ.

ಕೊರೊನಾ ಸೋಂಕಿಗೆ ದಂಪತಿ ಸಾವು ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಕೆರೆಗೋಡಿ ಗ್ರಾಮದ ದಂಪತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಪತಿ ತಿಪಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ರವಾನಿಸುವಾಗ ಆ್ಯಂಬುಲೆನ್ಸ್​ನಲ್ಲಿಯೇ ಸೋಂಕಿತ ಪತ ಸಾವನ್ನಪ್ಪಿದ್ದಾರೆ. ಪತಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತ್ನಿಯೂ ಮೃತಪಟ್ಟರು. ಪತ್ನಿ ಮನೆಯಲ್ಲಿಯೇ ಐಸೋಲೇಟ್ ಆಗಿದ್ದರು.

ಸೂಕ್ತ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತ ಸಾವು: ಆರೋಪ ಧಾರವಾಡ: ಸೂಕ್ತ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತ ಸಾವನ್ನಪ್ಪಿದ್ದಾನೆ ಎಂದು ಧಾರವಾಡದಲ್ಲಿ ಎಐಸಿಸಿ ಸದಸ್ಯ ದೀಪಕ್ ಚಿಂಚೋರಿ ಆರೋಪ ಮಾಡಿದ್ದಾರೆ. ಜಿಲ್ಲಾಸ್ಪತ್ರೆ, ಹುಬ್ಬಳ್ಳಿ ಕಿಮ್ಸ್​ನಲ್ಲಿ ವೆಂಟಿಲೇಟರ್ ಸಿಗುತ್ತಿಲ್ಲ. ಆಕ್ಸಿಜನ್, ವೆಂಟಿಲೇಟರ್ ಸಿಗದೆ ಸೋಂಕಿತರು ಸಾಯುತ್ತಿದ್ದಾರೆ ಎಂದು ಧಾರವಾಡದಲ್ಲಿ ಎಐಸಿಸಿ ಸದಸ್ಯ ದೀಪಕ್ ಚಿಂಚೋರಿ ಆರೋಪ ಮಾಡಿದ್ದಾರೆ.

(Man dies After taking drops of lemon in nose)

Published On - 5:13 pm, Wed, 28 April 21

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್