AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು: ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ ಪರಿಹಾರ ತಿರಸ್ಕಾರ

ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ ತಿರಸ್ಕರಿಸಿದೆ ಎಂದು ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬಿಜೆಪಿ ವಿರೋಧ ಮಾಡಿದ್ದಕ್ಕೆ ನಮಗೆ ಪರಿಹಾರ ಬೇಕಿಲ್ಲ ಅಂತಾ ಕೇರಳದ ಸಂತ್ರಸ್ತನ ಕುಟುಂಬ ತಿರಸ್ಕರಿಸಿದೆ ಎಂದಿದ್ದಾರೆ. 

ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು: ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ ಪರಿಹಾರ ತಿರಸ್ಕಾರ
ಸಚಿವ ಈಶ್ವರ್ ಖಂಡ್ರೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Mar 10, 2024 | 4:25 PM

Share

ಚಾಮರಾಜನಗರ, ಮಾರ್ಚ್​​ 10: ಕರ್ನಾಟಕದ ಕಾಡಾನೆ (elephant) ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ ತಿರಸ್ಕರಿಸಿದೆ ಎಂದು ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮಾನವೀಯತೆ ದೃಷ್ಟಿಯಿಂದ ಪರಿಹಾರ ಘೋಷಣೆ ಮಾಡಿದ್ದೆವು. ಆದರೆ ಪರಿಹಾರ ನೀಡಲು ಬಿಜೆಪಿ ವಿರೋಧ ಮಾಡಿತ್ತು. ಬಿಜೆಪಿ ವಿರೋಧ ಮಾಡಿದ್ದಕ್ಕೆ ನಮಗೆ ಪರಿಹಾರ ಬೇಕಿಲ್ಲ ಅಂತಾ ಕೇರಳದ ಸಂತ್ರಸ್ತನ ಕುಟುಂಬ ತಿರಸ್ಕರಿಸಿದೆ ಎಂದಿದ್ದಾರೆ.

ಕಾಡಾನೆ ದಾಳಿ ಇಬ್ಬರು ಮಹಿಳೆಯರು ಸೇರಿದಂತೆ ಮೂರು ಹಸುಗಳ ದಾರುಣ ಸಾವು

ಆನೇಕಲ್​​: ಗ್ರಾಮಕ್ಕೆ ಲಗ್ಗೆಯಿಟ್ಟ ಕಾಡಾನೆಯೊಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನ ಬಲಿ ಪಡೆದ ದಾರುಣ ಘಟನೆ ಇತ್ತೀಚೆಗೆ ರಾಜ್ಯ ಗಡಿಭಾಗ ಆನೇಕಲ್​​ಗೆ ಹೊಂದಿಕೊಂಡಿರುವ ತಮಿಳುನಾಡಿನ ಅಣ್ಣಿಯಾಳ ಗ್ರಾಮದಲ್ಲಿ ನಡೆದಿತ್ತು. ಅಣ್ಣಿಯಾಳ ಗ್ರಾಮದ ಆಶಾ ಕಾರ್ಯಕರ್ತೆ ವಸಂತ(37), ದಾಸರಪಲ್ಲಿ ವಾಸಿ ಅಶ್ವಥಮ್ಮ(40) ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿಗಳಾಗಿದ್ದಾರೆ.

ಇದನ್ನೂ ಓದಿ: ಆನೆ ಬಂತೊಂದ್ ಆನೆ; ರಸ್ತೆ ಮಧ್ಯೆ ಓಡಾಡುತ್ತ ವಾಹನಗಳ ತಪಾಸಣೆ ನಡೆಸಿದ ಒಂಟಿ ಸಲಗ, ಉಸಿರು ಬಿಗಿ ಹಿಡಿಯುವ ದೃಶ್ಯ

ಕಳೆದ ಎರಡು ಮೂರು ದಿನಗಳಿಂದ ಗುಮ್ಮಳಾಪುರ, ಅಣ್ಣಿಯಾಳು, ತಳಿ ಸುತ್ತ ಮುತ್ತ ಬೀಡು ಬಿಟ್ಟಿದ್ದ ಕಾಡಾನೆಯು ಬೆಳಿಗ್ಗೆ ಅಣ್ಣಿಯಾಳು ಗ್ರಾಮಕ್ಕೆ ನುಗ್ಗಿತ್ತು. ಗ್ರಾಮಕ್ಕೆ ಬಂದ ಆನೆಯನ್ನು ಓಡಿಸಲು ಗ್ರಾಮಸ್ಥರು ಮುಂದಾಗಿದ್ದ ವೇಳೆ, ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಮೂರು ಹಸುಗಳ ಮೇಲೆ ಕಾಡಾನೆ ದಾಳಿ ಮಾಡಿತ್ತು.

ಪದೇ ಪದೇ ಹಳ್ಳಿಗಳ ಸಮೀಪದ ರೈತರ ಹೊಲ ಗದ್ದೆಗಳಿಗೆ ಕಾಡಾನೆಗಳು ನುಗ್ಗಿ ದಾಂದಲೆ ನಡೆಸುತ್ತಿದೆ. ಕಾಡಾನೆಗಳಿಂದ ಬೆಳೆ ಹಾನಿ ಜೊತೆಗೆ ಪ್ರಾಣ ಹಾನಿಯಾಗುತ್ತಿದ್ದು, ಇಬ್ಬರು ಮಹಿಳೆಯರು ಮತ್ತು ಮೂರು ಹಸುಗಳು ಕಾಡಾನೆ ಹಾವಳಿಗೆ ಬಲಿಯಾಗಿದ್ದವು. ಕಾಡಾನೆ ದಾಳಿಗೆ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಹಿನ್ನೆಲೆ ಅರಣ್ಯ ಇಲಾಖೆ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಆನೆ ಬಂಡೀಪುರದ ರಾಮಾಪುರ ಬಿಡಾರದಲ್ಲಿ ಸಾವು

ತಳಿ ಶಾಸಕ ರಾಮಚಂದ್ರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೃತ ಮಹಿಳೆಯರ ಸಾವಿಗೆ ತಲಾ 20 ಲಕ್ಷ ಪರಿಹಾರದ ಜೊತೆಗೆ ಮೃತರ ಕುಟುಂಬದವರಿಗೆ ಸರ್ಕಾರಿ ಉದ್ಯೋಗಕ್ಕೆ ಒತ್ತಾಯಿಸಿದರು. ರಸ್ತೆ ತಡೆ ಹಿನ್ನೆಲೆ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರ ಮನವೊಲಿಕೆ ಬಳಿಕೆ ಪ್ರತಿಭಟನೆ ವಾಪಸ್ ಪಡೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು