AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟನಿಟ್ಟಿನ ನಿರ್ಬಂಧನೆಗಳನ್ನು ಹೇರಿ ಲಾಕ್ಡೌನ್ ಮಾಡಿದೆ. ಹೀಗಾಗಿ ಬೈಕ್‌ನಲ್ಲಿ ಬಂದರೆ ಪೊಲೀಸರು ಹೊಡೆಯುವ ಭಯಕ್ಕೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಪಡೆಯಲು 7 ಕಿ.ಮೀ ನಡೆದುಕೊಂಡೇ ಬೆಂಗಳೂರಿನ ಯಲಹಂಕದಲ್ಲಿರುವ ಲಸಿಕಾ ಕೇಂದ್ರಕ್ಕೆ ಬಂದಿದ್ದಾರೆ. ಆದರೆ ಕೊವ್ಯಾಕ್ಸಿನ್ ಲಸಿಕೆ ಇಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರಂತೆ.

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ
ವ್ಯಾಕ್ಸಿನ್ ಬಗ್ಗೆ ಮಾಹಿತಿ ನೀಡುತ್ತಿರುವ ಸಿಬ್ಬಂದಿ
ಆಯೇಷಾ ಬಾನು
ಆಯೇಷಾ ಬಾನು|

Updated on: May 13, 2021 | 12:08 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಹೆಚ್ಚಾಗಿದೆ. ಎಲ್ಲಿ ನೋಡಿದರೂ ನೋ ವ್ಯಾಕ್ಸಿನ್ ಬೋರ್ಡ್ ಕಂಡು ಬರುತ್ತಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ 18ರಿಂದ 45 ವರ್ಷದೊಳಗಿನವರ ಲಸಿಕಾ ಅಭಿಯಾನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದರೆ ಈ ಮೊದಲು ಮೊದಲ ಡೋಸ್ ಪಡೆದ 45 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆಯಲು ಪರದಾಡುತ್ತಿದ್ದಾರೆ. ಇದರ ನಡುವೆ ಕೊರೊನಾ ಲಸಿಕೆ ಪಡೆಯಲು ವ್ಯಕ್ತಿಯೊಬ್ಬ 7 ಕಿ.ಮೀ. ನಡೆದುಕೊಂಡು ಬಂದಿದ್ದು ಲಸಿಕೆ ಇಲ್ಲದೆ ಕಂಗಾಲಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟನಿಟ್ಟಿನ ನಿರ್ಬಂಧನೆಗಳನ್ನು ಹೇರಿ ಲಾಕ್ಡೌನ್ ಮಾಡಿದೆ. ಹೀಗಾಗಿ ಬೈಕ್‌ನಲ್ಲಿ ಬಂದರೆ ಪೊಲೀಸರು ಹೊಡೆಯುವ ಭಯಕ್ಕೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಪಡೆಯಲು 7 ಕಿ.ಮೀ ನಡೆದುಕೊಂಡೇ ಬೆಂಗಳೂರಿನ ಯಲಹಂಕದಲ್ಲಿರುವ ಲಸಿಕಾ ಕೇಂದ್ರಕ್ಕೆ ಬಂದಿದ್ದಾರೆ. ಆದರೆ ಕೊವ್ಯಾಕ್ಸಿನ್ ಲಸಿಕೆ ಇಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರಂತೆ. ಹೀಗಾಗಿ ಲಸಿಕೆ ಪಡೆಯದೆ ಈಗ ಮತ್ತೆ 7 ಕಿ.ಮೀ. ವಾಪಸಾಗಬೇಕು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವ್ಯಾಕ್ಸಿನ್ ಪಡೆದಿದ್ದರೆ ಮೆಸೇಜ್ ತೋರಿಸಿ ಬೈಕ್‌ನಲ್ಲಿ ಹೋಗಬಹುದಾಗಿತ್ತು. ಆದರೆ ಈಗ ನಾನು ನಡೆದುಕೊಂಡು ಹೋಗಬೇಕಾಗಿದೆ. ಈ ಅವಾಂತರಕ್ಕೆ ಸರ್ಕಾರವೇ ಕಾರಣ. ಕೊರೊನಾ ಮೂರನೇ ಅಲೆ ಬರ್ತಿದೆ, ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದ್ರೆ ಮತ್ತಷ್ಟು ಅನಾಹುತ ಆಗುತ್ತೆ. ಹಂತ ಹಂತವಾಗಿ ಲಸಿಕೆ ಪೂರೈಕೆ ಮಾಡುವಲ್ಲಿ ಸರ್ಕಾರ ಫೇಲ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಇಂದು ಶುರುವಾಗಿಲ್ಲ 3ನೇ ಹಂತದ ಕೊರೊನಾ ಲಸಿಕೆ ವಿತರಣೆ; ವ್ಯಾಕ್ಸಿನ್ ಇಲ್ಲ ಅಂದ್ರೂ ಕರ್ನಾಟಕದಲ್ಲಿ ಕ್ಯೂ ನಿಂತ ಜನ !

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ