AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟನಿಟ್ಟಿನ ನಿರ್ಬಂಧನೆಗಳನ್ನು ಹೇರಿ ಲಾಕ್ಡೌನ್ ಮಾಡಿದೆ. ಹೀಗಾಗಿ ಬೈಕ್‌ನಲ್ಲಿ ಬಂದರೆ ಪೊಲೀಸರು ಹೊಡೆಯುವ ಭಯಕ್ಕೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಪಡೆಯಲು 7 ಕಿ.ಮೀ ನಡೆದುಕೊಂಡೇ ಬೆಂಗಳೂರಿನ ಯಲಹಂಕದಲ್ಲಿರುವ ಲಸಿಕಾ ಕೇಂದ್ರಕ್ಕೆ ಬಂದಿದ್ದಾರೆ. ಆದರೆ ಕೊವ್ಯಾಕ್ಸಿನ್ ಲಸಿಕೆ ಇಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರಂತೆ.

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ
ವ್ಯಾಕ್ಸಿನ್ ಬಗ್ಗೆ ಮಾಹಿತಿ ನೀಡುತ್ತಿರುವ ಸಿಬ್ಬಂದಿ
ಆಯೇಷಾ ಬಾನು
ಆಯೇಷಾ ಬಾನು|

Updated on: May 13, 2021 | 12:08 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಹೆಚ್ಚಾಗಿದೆ. ಎಲ್ಲಿ ನೋಡಿದರೂ ನೋ ವ್ಯಾಕ್ಸಿನ್ ಬೋರ್ಡ್ ಕಂಡು ಬರುತ್ತಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ 18ರಿಂದ 45 ವರ್ಷದೊಳಗಿನವರ ಲಸಿಕಾ ಅಭಿಯಾನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದರೆ ಈ ಮೊದಲು ಮೊದಲ ಡೋಸ್ ಪಡೆದ 45 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆಯಲು ಪರದಾಡುತ್ತಿದ್ದಾರೆ. ಇದರ ನಡುವೆ ಕೊರೊನಾ ಲಸಿಕೆ ಪಡೆಯಲು ವ್ಯಕ್ತಿಯೊಬ್ಬ 7 ಕಿ.ಮೀ. ನಡೆದುಕೊಂಡು ಬಂದಿದ್ದು ಲಸಿಕೆ ಇಲ್ಲದೆ ಕಂಗಾಲಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟನಿಟ್ಟಿನ ನಿರ್ಬಂಧನೆಗಳನ್ನು ಹೇರಿ ಲಾಕ್ಡೌನ್ ಮಾಡಿದೆ. ಹೀಗಾಗಿ ಬೈಕ್‌ನಲ್ಲಿ ಬಂದರೆ ಪೊಲೀಸರು ಹೊಡೆಯುವ ಭಯಕ್ಕೆ ವ್ಯಕ್ತಿಯೊಬ್ಬರು ಕೊರೊನಾ ಲಸಿಕೆ ಪಡೆಯಲು 7 ಕಿ.ಮೀ ನಡೆದುಕೊಂಡೇ ಬೆಂಗಳೂರಿನ ಯಲಹಂಕದಲ್ಲಿರುವ ಲಸಿಕಾ ಕೇಂದ್ರಕ್ಕೆ ಬಂದಿದ್ದಾರೆ. ಆದರೆ ಕೊವ್ಯಾಕ್ಸಿನ್ ಲಸಿಕೆ ಇಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರಂತೆ. ಹೀಗಾಗಿ ಲಸಿಕೆ ಪಡೆಯದೆ ಈಗ ಮತ್ತೆ 7 ಕಿ.ಮೀ. ವಾಪಸಾಗಬೇಕು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವ್ಯಾಕ್ಸಿನ್ ಪಡೆದಿದ್ದರೆ ಮೆಸೇಜ್ ತೋರಿಸಿ ಬೈಕ್‌ನಲ್ಲಿ ಹೋಗಬಹುದಾಗಿತ್ತು. ಆದರೆ ಈಗ ನಾನು ನಡೆದುಕೊಂಡು ಹೋಗಬೇಕಾಗಿದೆ. ಈ ಅವಾಂತರಕ್ಕೆ ಸರ್ಕಾರವೇ ಕಾರಣ. ಕೊರೊನಾ ಮೂರನೇ ಅಲೆ ಬರ್ತಿದೆ, ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದ್ರೆ ಮತ್ತಷ್ಟು ಅನಾಹುತ ಆಗುತ್ತೆ. ಹಂತ ಹಂತವಾಗಿ ಲಸಿಕೆ ಪೂರೈಕೆ ಮಾಡುವಲ್ಲಿ ಸರ್ಕಾರ ಫೇಲ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಇಂದು ಶುರುವಾಗಿಲ್ಲ 3ನೇ ಹಂತದ ಕೊರೊನಾ ಲಸಿಕೆ ವಿತರಣೆ; ವ್ಯಾಕ್ಸಿನ್ ಇಲ್ಲ ಅಂದ್ರೂ ಕರ್ನಾಟಕದಲ್ಲಿ ಕ್ಯೂ ನಿಂತ ಜನ !

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.