AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಜಲಧಾರೆ: ಕನ್ಯೆ ನೋಡಲು ಹೋಗಿ, ವಾಪಸು ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ನಿನ್ನೆ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಟಿಪ್ಪು ಸುಲ್ತಾನ್ ಎಂಬ ಯುವಕ ಮರಳಿ ಮನೆಗೆ ಬರುವಾಗ ಹಳ್ಳ ದಾಟಲು ಹೋಗಿ ಹಳ್ಳದ ಪಾಲಾಗಿದ್ದಾನೆ. ಹಳ್ಳದ ದಂಡೆಯಲ್ಲಿರುವ ಮುಳ್ಳಿನ ಕಂಟಿಯಲ್ಲಿ ಸಿಲುಕಿದ್ದು ಮೃತ ದೇಹ ಪತ್ತೆಯಾಗಿದೆ.

ಮಳೆಯಿಂದ ಜಲಧಾರೆ: ಕನ್ಯೆ ನೋಡಲು ಹೋಗಿ, ವಾಪಸು ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
ಕನ್ಯೆ ನೋಡಲು ಹೋಗಿ, ವಾಪಸು ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
TV9 Web
| Edited By: |

Updated on:May 20, 2022 | 5:26 PM

Share

ಗದಗ: ಕನ್ಯೆ ನೋಡಲು ಹೋಗಿ ಮರಳಿ ಬರುವಾಗ ಯುವಕ ಹಳ್ಳದ ಪಾಲಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕ್ಲಾಸಪುರ ಗ್ರಾಮದಲ್ಲಿ ನಡೆದಿದೆ. ಟಿಪ್ಪು ಸುಲ್ತಾನ್ (26) ಮೃತ ಯುವಕ. ನಿನ್ನೆ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಟಿಪ್ಪು ಸುಲ್ತಾನ್ ಎಂಬ ಯುವಕ ಮರಳಿ ಮನೆಗೆ ಬರುವಾಗ ಹಳ್ಳ ದಾಟಲು ಹೋಗಿ ಹಳ್ಳದ ಪಾಲಾಗಿದ್ದಾನೆ. ಹಳ್ಳದ ದಂಡೆಯಲ್ಲಿರುವ ಮುಳ್ಳಿನ ಕಂಟಿಯಲ್ಲಿ ಸಿಲುಕಿದ್ದು ಮೃತ ದೇಹ ಪತ್ತೆಯಾಗಿದೆ. ಸ್ಥಳೀಯರ ಸಹಾಯದಿಂದ ಪೊಲೀಸರು ಟಿಪ್ಪು ಸುಲ್ತಾನ್ ಮೃತ ದೇಹ ಹೊರಗಡೆ ತೆಗೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ವ್ಯತ್ಯಯ ಹಿನ್ನೆಲೆ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಿರೇಬೈಲಿನಲ್ಲಿ ವಿದ್ಯುತ್ ವ್ಯತ್ಯಯ ಹಿನ್ನೆಲೆ ಮೆಸ್ಕಾಂ ಸಿಬ್ಬಂದಿ ಹೇಮಂತ್ ಮೇಲೆ 6 ಜನರಿಂದ ಹಲ್ಲೆ ನಡೆದಿರುವ ಘಟನೆ ನಡೆದಿದೆ. ರಂಜನ್, ಆದರ್ಶ, ಸುಂದರೇಶ್ ಸೇರಿದಂತೆ 6 ಜನರಿಂದ ಹಲ್ಲೆ ನಡೆದಿದೆ. ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಠಾಣೆಗೆ ದೂರು ನೀಡಿದ್ದಕ್ಕೆ ಹಲ್ಲೆಗೊಳಗಾದ ಹೇಮಂತ್ಗೆ ಆರೋಪಿಗಳಿಂದ ಜೀವ ಬೆದರಿಕೆ ಹಾಕಲಾಗಿದೆಯಂತೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 2024ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮಂದಿರ ಮಸೀದಿ ವಿವಾದ ಹುಟ್ಟುಹಾಕಿದೆ: ಸಂಜಯ್ ರಾವುತ್

ರಸ್ತೆಗೆ ಉರುಳಿ ಬಿದ್ದ ಮರಗಳನ್ನು ತೆರವುಗೊಳಿಸಿದ ಪಿಎಸ್ಐ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಾಳಂಬೀಡ ಮತ್ತು ಹಾವಣಗಿ ಗ್ರಾಮದ ನಡುವಿನ ರಸ್ತೆಯಲ್ಲಿ ಬಿದ್ದಿದ್ದ ಮರಗಳನ್ನು ಆಡೂರು ಪೊಲೀಸ್ ಠಾಣೆ ಪಿಎಸ್ಐ ಗಡ್ಡೆಪ್ಪ ಗುಂಜಟಗಿ ಮರಗಳನ್ನು ತೆರವುಗೊಳಿಸಿದ್ದಾರೆ. ದಾರಿಯಲ್ಲಿ ಹೋಗುತ್ತಿದ್ದ ವೇಳೆ ಮರಗಳು ಬಿದ್ದಿದ್ದು ಗಮನಿಸಿ ಕೊಡಲಿ, ಮರ ಕತ್ತರಿಸುವ ಮಷೀನ್ ನಿಂದ ಮರಗಳ ಟೊಂಗೆ ಕಡಿದು ತೆರವು ಮಾಡಿದ್ದಾರೆ. ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದ್ದ ಮರಗಳನ್ನು ತೆರವುಗೊಳಿಸಿದ್ದಾರೆ. ಮರಗಳನ್ನು ತೆರವು ಮಾಡಲು ಪಿಎಸ್ಐ ಗಡ್ಡೆಪ್ಪಗೆ ಸ್ಥಳೀಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರು ಕಾಲೇಜಿನಲ್ಲಿ ಮಹಿಳಾ ಸಿಬ್ಬಂದಿಗಳ ಫೋನ್ ನಂಬರ್ ಲೀಕ್ ಆರೋಪ; ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ತಹಶೀಲ್ದಾರ್

ಸಿಡಿಲು ಬಡಿದು ಯುವಕ ಸಾವು ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮದನೂರು ಬಳಿ ಸಿಡಿಲು ಬಡಿದು ಯುವಕ ಆನಂದ ಬರಾಗಡೆ(21) ಮೃತಪಟ್ಟಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 3:43 pm, Fri, 20 May 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್