AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಜಲಧಾರೆ: ಕನ್ಯೆ ನೋಡಲು ಹೋಗಿ, ವಾಪಸು ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ನಿನ್ನೆ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಟಿಪ್ಪು ಸುಲ್ತಾನ್ ಎಂಬ ಯುವಕ ಮರಳಿ ಮನೆಗೆ ಬರುವಾಗ ಹಳ್ಳ ದಾಟಲು ಹೋಗಿ ಹಳ್ಳದ ಪಾಲಾಗಿದ್ದಾನೆ. ಹಳ್ಳದ ದಂಡೆಯಲ್ಲಿರುವ ಮುಳ್ಳಿನ ಕಂಟಿಯಲ್ಲಿ ಸಿಲುಕಿದ್ದು ಮೃತ ದೇಹ ಪತ್ತೆಯಾಗಿದೆ.

ಮಳೆಯಿಂದ ಜಲಧಾರೆ: ಕನ್ಯೆ ನೋಡಲು ಹೋಗಿ, ವಾಪಸು ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
ಕನ್ಯೆ ನೋಡಲು ಹೋಗಿ, ವಾಪಸು ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
TV9 Web
| Updated By: ಆಯೇಷಾ ಬಾನು|

Updated on:May 20, 2022 | 5:26 PM

Share

ಗದಗ: ಕನ್ಯೆ ನೋಡಲು ಹೋಗಿ ಮರಳಿ ಬರುವಾಗ ಯುವಕ ಹಳ್ಳದ ಪಾಲಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕ್ಲಾಸಪುರ ಗ್ರಾಮದಲ್ಲಿ ನಡೆದಿದೆ. ಟಿಪ್ಪು ಸುಲ್ತಾನ್ (26) ಮೃತ ಯುವಕ. ನಿನ್ನೆ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಟಿಪ್ಪು ಸುಲ್ತಾನ್ ಎಂಬ ಯುವಕ ಮರಳಿ ಮನೆಗೆ ಬರುವಾಗ ಹಳ್ಳ ದಾಟಲು ಹೋಗಿ ಹಳ್ಳದ ಪಾಲಾಗಿದ್ದಾನೆ. ಹಳ್ಳದ ದಂಡೆಯಲ್ಲಿರುವ ಮುಳ್ಳಿನ ಕಂಟಿಯಲ್ಲಿ ಸಿಲುಕಿದ್ದು ಮೃತ ದೇಹ ಪತ್ತೆಯಾಗಿದೆ. ಸ್ಥಳೀಯರ ಸಹಾಯದಿಂದ ಪೊಲೀಸರು ಟಿಪ್ಪು ಸುಲ್ತಾನ್ ಮೃತ ದೇಹ ಹೊರಗಡೆ ತೆಗೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ವ್ಯತ್ಯಯ ಹಿನ್ನೆಲೆ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಿರೇಬೈಲಿನಲ್ಲಿ ವಿದ್ಯುತ್ ವ್ಯತ್ಯಯ ಹಿನ್ನೆಲೆ ಮೆಸ್ಕಾಂ ಸಿಬ್ಬಂದಿ ಹೇಮಂತ್ ಮೇಲೆ 6 ಜನರಿಂದ ಹಲ್ಲೆ ನಡೆದಿರುವ ಘಟನೆ ನಡೆದಿದೆ. ರಂಜನ್, ಆದರ್ಶ, ಸುಂದರೇಶ್ ಸೇರಿದಂತೆ 6 ಜನರಿಂದ ಹಲ್ಲೆ ನಡೆದಿದೆ. ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಠಾಣೆಗೆ ದೂರು ನೀಡಿದ್ದಕ್ಕೆ ಹಲ್ಲೆಗೊಳಗಾದ ಹೇಮಂತ್ಗೆ ಆರೋಪಿಗಳಿಂದ ಜೀವ ಬೆದರಿಕೆ ಹಾಕಲಾಗಿದೆಯಂತೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 2024ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮಂದಿರ ಮಸೀದಿ ವಿವಾದ ಹುಟ್ಟುಹಾಕಿದೆ: ಸಂಜಯ್ ರಾವುತ್

ರಸ್ತೆಗೆ ಉರುಳಿ ಬಿದ್ದ ಮರಗಳನ್ನು ತೆರವುಗೊಳಿಸಿದ ಪಿಎಸ್ಐ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಾಳಂಬೀಡ ಮತ್ತು ಹಾವಣಗಿ ಗ್ರಾಮದ ನಡುವಿನ ರಸ್ತೆಯಲ್ಲಿ ಬಿದ್ದಿದ್ದ ಮರಗಳನ್ನು ಆಡೂರು ಪೊಲೀಸ್ ಠಾಣೆ ಪಿಎಸ್ಐ ಗಡ್ಡೆಪ್ಪ ಗುಂಜಟಗಿ ಮರಗಳನ್ನು ತೆರವುಗೊಳಿಸಿದ್ದಾರೆ. ದಾರಿಯಲ್ಲಿ ಹೋಗುತ್ತಿದ್ದ ವೇಳೆ ಮರಗಳು ಬಿದ್ದಿದ್ದು ಗಮನಿಸಿ ಕೊಡಲಿ, ಮರ ಕತ್ತರಿಸುವ ಮಷೀನ್ ನಿಂದ ಮರಗಳ ಟೊಂಗೆ ಕಡಿದು ತೆರವು ಮಾಡಿದ್ದಾರೆ. ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದ್ದ ಮರಗಳನ್ನು ತೆರವುಗೊಳಿಸಿದ್ದಾರೆ. ಮರಗಳನ್ನು ತೆರವು ಮಾಡಲು ಪಿಎಸ್ಐ ಗಡ್ಡೆಪ್ಪಗೆ ಸ್ಥಳೀಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರು ಕಾಲೇಜಿನಲ್ಲಿ ಮಹಿಳಾ ಸಿಬ್ಬಂದಿಗಳ ಫೋನ್ ನಂಬರ್ ಲೀಕ್ ಆರೋಪ; ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ತಹಶೀಲ್ದಾರ್

ಸಿಡಿಲು ಬಡಿದು ಯುವಕ ಸಾವು ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮದನೂರು ಬಳಿ ಸಿಡಿಲು ಬಡಿದು ಯುವಕ ಆನಂದ ಬರಾಗಡೆ(21) ಮೃತಪಟ್ಟಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 3:43 pm, Fri, 20 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ