AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ಪ್ರಾಣಿಗಳೊಂದಿಗೆ ನಾಮಪತ್ರ ಸಲ್ಲಿಸಲು ಬಂದ ಭೂಪ; ಚಿನ್ನದ ನಾಡಲ್ಲಿ ಎಲ್ಲರ ಗಮನ ಸೆಳೆದ ಗಿಡ್ಡಪ್ಪ

ಈ ಅಭ್ಯರ್ಥಿ ಕಾವಿಧಾರಿಯಾಗಿ ಕೈಯಲ್ಲಿ ಕಮಂಡಲ, ತಂಬೂರಿ ಹಿಡಿದುಕೊಂಡು, ಕತ್ತಿಗೆ ಹಾರ ಹಾಕಿಕೊಂಡಿದ್ದರು. ಒಂದು ಕಡೆ ತಮಟೆ ವಾದ್ಯ, ಮತ್ತೊಂದೆಡೆ ನೃತ್ಯ ಮಾಡುತ್ತಾ ಬಂದಿದ್ದಾರೆ. ಅವರ ಜೊತೆಗೆ ಸಾಕು ಪ್ರಾಣಿ ಕತ್ತೆ, ಕುರಿ, ಮೇಕೆ, ಎಮ್ಮೆ ಸೇರಿಂದತೆ ಹಲವು ಪ್ರಾಣಿಗಳು ಇವರ ಜೊತೆ ಬಂದಿದ್ದು ವಿಶೇಷವಾಗಿತ್ತು.

ಸಾಕು ಪ್ರಾಣಿಗಳೊಂದಿಗೆ ನಾಮಪತ್ರ ಸಲ್ಲಿಸಲು ಬಂದ ಭೂಪ; ಚಿನ್ನದ ನಾಡಲ್ಲಿ ಎಲ್ಲರ ಗಮನ ಸೆಳೆದ ಗಿಡ್ಡಪ್ಪ
ನಾಮಪತ್ರ ಸಲ್ಲಿಸಲು ವಿಭಿನ್ನವಾಗಿ ಆಗಮಿಸಿದ ಗಿಡ್ಡಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on:Dec 12, 2020 | 7:05 AM

Share

ಕೋಲಾರ: ಗ್ರಾಮ ಪಂಚಾಯಿತಿ ಚುನಾವಣೆ ಅಖಾಡ ಸಿದ್ಧವಾಗಿದ್ದು, ನಾಮಪತ್ರ ಸಲ್ಲಿಕೆ ಕಾರ್ಯ ಶುರುವಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ತನ್ನ ಬೆಂಬಲಿಗರನ್ನು ಕರೆದುಕೊಂಡು ಬರೋದು ಸರ್ವೇಸಾಮಾನ್ಯ. ಆದರೆ, ಜಿಲ್ಲೆಯಲ್ಲಿ ಅಭ್ಯರ್ಥಿಯೋರ್ವ ವಿಭಿನ್ನವಾಗಿ ನಾಮಪತ್ರ ಸಲ್ಲಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಈ ಅಭ್ಯರ್ಥಿ ಕಾವಿಧಾರಿಯಾಗಿ ಕೈಯಲ್ಲಿ ಕಮಂಡಲ, ತಂಬೂರಿ ಹಿಡಿದುಕೊಂಡು, ಕತ್ತಿಗೆ ಹಾರ ಹಾಕಿಕೊಂಡಿದ್ದರು. ಒಂದು ಕಡೆ ತಮಟೆ ವಾದ್ಯ, ಮತ್ತೊಂದೆಡೆ ನೃತ್ಯ ಮಾಡುತ್ತಾ ಬಂದಿದ್ದಾರೆ. ಅವರ ಜೊತೆಗೆ ಸಾಕು ಪ್ರಾಣಿ ಕತ್ತೆ, ಕುರಿ, ಮೇಕೆ, ಎಮ್ಮೆ ಸೇರಿಂದತೆ ಹಲವು ಪ್ರಾಣಿಗಳು ಇವರ ಜೊತೆ ಬಂದಿದ್ದು ವಿಶೇಷವಾಗಿತ್ತು.

ಇಂಥದ್ದೊಂದು ವಿಭಿನ್ನ ಸನ್ನಿವೇಶ ಕಂಡು ಬಂದಿದ್ದು ಜಿಲ್ಲೆಯ ಮಾಲೂರು ತಾಲ್ಲೂಕಿನ ಕುಡಿಯನೂರು ಗ್ರಾಮದಲ್ಲಿ. ಪಂಚಾಯಿತಿ ಸದಸ್ಯ ಗಿಡ್ಡಪ್ಪ ಹೀಗೆ ಭಿನ್ನವಾಗಿ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದವರು. ಈ ಫೋಟೋ ಹಾಗೂ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಅವರು ಈ ರೀತಿ ಭಿನ್ನವಾಗಿ ನಾಮಪತ್ರ ಸಲ್ಲಿಕೆ ಮಾಡಿರೋದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

Published On - 6:44 am, Sat, 12 December 20

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ