AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ತಾರಸಿಯಲ್ಲಿ ಜೀವಿಗಳಿಗೆ ಆಶ್ರಯ ನೀಡಿ ಮಾದರಿಯಾದ ಹುಬ್ಬಳ್ಳಿಯ ದೇವಾನಂದ್ ಜಗಾಪೂರ

ಇಲ್ಲೊಬ್ಬರು ತನ್ನ ಮನೆಯ ಟೆರೇಸ್ ವಿನೂತನವಾಗಿ ಬಳಕೆ ಮಾಡಿಕೊಂಡಿದ್ದು, ಹಲವಾರು ಜೀವಿಗಳಿಗೆ ಆಶ್ರಯದಾತನಾಗುವ ಮೂಲಕ ತನ್ನ ಜೀವನದ ಸಾರ್ಥಕತೆಯನ್ನು ಕಂಡುಕೊಳ್ಳುತ್ತಿದ್ದಾರೆ. ಯಾರವರು ಎನ್ನುವುದರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

ಮನೆಯ ತಾರಸಿಯಲ್ಲಿ ಜೀವಿಗಳಿಗೆ ಆಶ್ರಯ ನೀಡಿ ಮಾದರಿಯಾದ ಹುಬ್ಬಳ್ಳಿಯ ದೇವಾನಂದ್ ಜಗಾಪೂರ
shruti hegde
| Edited By: |

Updated on: Jan 07, 2021 | 4:29 PM

Share

ಹುಬ್ಬಳ್ಳಿ: ಮನೆ ತಾರಸಿ ಮೇಲೆ ತರಕಾರಿ ಬೆಳೆದು ಕೃಷಿ ಮಾಡಿರೋದನ್ನು ನೋಡುತ್ತಲೇ ಇರುತ್ತೇವೆ. ಆದರೆ, ಇಲ್ಲೊಬ್ಬರು ತನ್ನ ಮನೆಯ ಟೆರೇಸ್ ವಿನೂತನವಾಗಿ ಬಳಕೆ ಮಾಡಿಕೊಂಡಿದ್ದು, ಹಲವಾರು ಜೀವಿಗಳಿಗೆ ಆಶ್ರಯದಾತನಾಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಪಕ್ಷಿಗಳ ಬಗ್ಗೆ ಪ್ರೇಮವನ್ನು ಮೆರೆಯುವ ಮೂಲಕ ಹುಬ್ಬಳ್ಳಿಯಲ್ಲೊಬ್ಬರು ತನ್ನ ಮನೆಯ ಟೆರೇಸ್ ಮೇಲೆ ಪಕ್ಷಿಗಳಿಗೆ ಆಶ್ರಯವನ್ನು ನೀಡುವ ಮೂಲಕ ಐವತ್ತಕ್ಕೂ ಹೆಚ್ಚು ಲವ್ ಬರ್ಡ್ಸ್ ಸಾಕಿದ್ದಾರೆ. ಅವರೇ, ಹುಬ್ಬಳ್ಳಿಯ ಬೆಂಗೇರಿಯ ವೆಂಕಟೇಶ್ವರ ಕಾಲೋನಿಯ ನಿವಾಸಿ ದೇವಾನಂದ್ ಜಗಾಪೂರ.

ಮೊದಲು ಹವ್ಯಾಸದಿಂದ ನಾಯಿ, ಪಾರಿವಾಳ ಸಾಕುತ್ತಿದ್ದ ದೇವಾನಂದ್ ಈಗ ಐವತ್ತಕ್ಕೂ ಹೆಚ್ಚು ಲವ್ ಬರ್ಡ್ಸ್ ಸಾಕಿದ್ದಾರೆ. ಮನೆಯ ಮೇಲ್ಛಾವಣಿಯಲ್ಲಿ ಒಂದು ಶೆಡ್ ನಿರ್ಮಾಣ ಮಾಡಿ ಅವುಗಳಿಗೆ ಅರಣ್ಯದ ಸೊಬಗನ್ನು ಕೂಡ ಅವರೇ ನಿರ್ಮಾಣ ಮಾಡಿದ್ದಾರೆ.

ಈ ಕುರಿತಂತೆ tv9 ಡಿಜಿಟಲ್ ಜೊತೆ ಮಾತನಾಡಿದ ದೇವಾನಂದ್, ಮನೆಗೆ ಬಂದ ಅತಿಥಿಗಳು ಲವ್ ಬರ್ಡ್ಸ್ ನೋಡಿ ಆನಂದಿಸುತ್ತಾರೆ. ಇಂತಹ ಹವ್ಯಾಸದಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಆರೋಗ್ಯ ವೃದ್ಧಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮನೆ ಮಂದಿಯೂ ಸಾಥ್: ಇನ್ನೂ ದೇವಾನಂದ್ ಜಗಾಪೂರ ಅವರು ಮಾತ್ರವಲ್ಲದೆ ಮನೆಯ ಮಂದಿ ಕೂಡ ಇವರಿಗೆ ಸಾಥ್ ನೀಡಿತ್ತ ಬಂದಿದ್ದಾರೆ. ಮಕ್ಕಳು ಮೊಮ್ಮಕ್ಕಳು ಕೂಡ ಈ ಲವ್ ಬರ್ಡ್ಸ್ ಪೋಷಣೆಗೆ ಕೈ ಜೋಡಿಸಿರುವುದು ವಿಶೇಷವಾಗಿದೆ. ಮಕ್ಕಳಿಗೆ ಲವ್ ಬರ್ಡ್ಸ್ ಅಂದ್ರೇ ತುಂಬಾ ಅಚ್ಚು ಮೆಚ್ಚು ಅಜ್ಜನ ಕಾರ್ಯಕ್ಕೆ ಮೊಮ್ಮಕ್ಕಳು ಕೂಡ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್