AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚಲಿಸುತ್ತಿದ್ದ ಕಾರಿ ಬೋನೆಟ್​ಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಜಿಗಿದ ಯುವಕ, ವಿಡಿಯೋ ವೈರಲ್

ಬೆಂಗಳೂರಿನ ಔಟರ್ ರಿಂಗ್ ರೋಡ್ ಬಳಿಯ ಟ್ರಾಫಿಕ್​ನಲ್ಲಿ ಅರೆಬೆತ್ತಲೆ ಅವಸ್ಥೆಯಲ್ಲಿ ಕಾರಿನ ಮೇಲೆ ಜಿಗಿದ ವ್ಯಕ್ತಿ ಬೋನಟ್​ ಮೇಲೆ ಕುಳಿತುಬಿಟ್ಟಿದ್ದಾನೆ. ವಾಹನ ಚಾಲಕ ಕಾರು ಚಲಾಯಿಸಲು ಮುಂದಾದರೂ ಅಟ್ಟಿಸಿಕೊಂಡು ಬಂದು ಮತ್ತೊಮ್ಮೆ ಕಾರಿನ ಮೇಲೆ ಜಿಗಿದಿದ್ದಾನೆ. ಈತನ ದುರ್ವರ್ತನೆ ನೆಟ್ಟಿಗರು ಹಲವಾರು ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಚಲಿಸುತ್ತಿದ್ದ ಕಾರಿ ಬೋನೆಟ್​ಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಜಿಗಿದ ಯುವಕ, ವಿಡಿಯೋ ವೈರಲ್
ಟ್ರಾಫಿಕ್ ಮಧ್ಯದಲ್ಲಿ ಕಾರಿನ ಮೇಲೆ ಜಿಗಿದ ವ್ಯಕ್ತಿ
ಭಾವನಾ ಹೆಗಡೆ
|

Updated on:Sep 26, 2025 | 10:54 AM

Share

ಬೆಂಗಳೂರು, ಸೆಪ್ಟೆಂಬರ್ 26: ಬೆಂಗಳೂರಿನ  ನೋವೋಟೆಲ್ ಹೋಟೆಲ್ ಬಳಿಯ  ಔಟರ್ ರಿಂಗ್ ರೋಡ್​ನಲ್ಲಿ ಆಶ್ಚರ್ಯಕರ ಘಟನೆಯೊಂದು ಬೆಳಕಿಗೆ ಬಂದಿದೆ.  ಹೆಚ್ಚಿನ ಟ್ರಾಫಿಕ್ ಸಮಯದಲ್ಲಿ ಓಡಾಡುತ್ತಿರುವ ವಾಹನಗಳನ್ನೂ ಲೆಕ್ಕಿಸದೆ ವ್ಯಕ್ತಿಯೊಬ್ಬ ಕಾರಿನ  ಮೇಲೆ ಹಠಾತ್ತನೆ ಜಿಗಿದಿದ್ದಾನೆ. ಅರೆಬೆತ್ತಲೆ ಅವಸ್ಥೆಯಲ್ಲಿದ್ದ ಈತ ವಾಹನದ ಬೋನೆಟ್ ಮೇಲೆ ಕುಳಿತಿದ್ದ. ವಾಹನ ಚಾಲಕ ಕಾರನ್ನು ಚಲಾಯಿಸಲು ಮುಂದಾದರೂ ಆತನ ಮೇಲೆ ಕಿರುಚಾಡಿ ಅಸಭ್ಯ ವರ್ತನೆ ತೋರಿದ್ದಾನೆ. ಈ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ವ್ಯಕ್ತಿಯ ಅಸಭ್ಯ ವರ್ತನೆಯ ವೈರಲ್ ವೀಡಿಯೋ ಇಲ್ಲಿದೆ.

ಈತ ಕೇವಲ ಆ ವಾಹನದ ಬೋನೆಟ್ ಮೇಲೆ ಕುಳಿತುಕೊಳ್ಳುವುದಷ್ಟೇ ಅಲ್ಲದೇ ಕಾರ್ ಚಾಲಕ ವಾಹನ ಚಲಾಯಿಸಲು ಮುಂದಾದಾಗ ಆತನ ಮೇಲೆ ಕಿರುಚಿ ಅಸಭ್ಯವಾಗಿ ವರ್ತಿಸಿದ್ದಾನೆ. ವಾಹನವನ್ನು ಅಟ್ಟಿಸಿಕೊಂಡು ಹೋಗಿ ಹಿಂದಿನಿಂದ ವಾಹನವನ್ನು ಮತ್ತೊಮ್ಮೆ ಹತ್ತಲು ಪ್ರಯತ್ನಿಸಿದಾಗ ಕೆಳಗೆ ಬಿದ್ದಿದ್ದಾನೆ.

ಇದನ್ನೂ ಓದಿ ಬೆಂಗಳೂರಿನ ಈ ಭಾಗದಲ್ಲೇ ಟ್ರಾಫಿಕ್​​ ಹೆಚ್ಚು, ವೈರಲ್ ಆಯ್ತು ಪೋಸ್ಟ್

ಈ ವೀಡಿಯೋಕ್ಕೆ ನೆಟ್ಟಿಗರ ರಿಯಾಕ್ಷನ್ ಏನು?

ಈತನ ಈ ದುರ್ವರ್ತನೆಗೆ ಉಳಿದವರೆಲ್ಲರೂ ದಿಗ್ಭ್ರಮೆಯಿಂದ ನೊಡುತ್ತಿದ್ದರೆ, ಹಲವರು ಈ ಸನ್ನಿವೇಶದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಅರೆ ಬೆತ್ತಲೆಯಾಗಿ ಹೀಗೆ ಅಸಭ್ಯ ವರ್ತನೆ ಮಾಡಿರುವ ಈ ವ್ಯಕ್ತಿ  ಯಾವುದಾದರೂ ಮಾದಕ ವಸ್ತುವಿನ ಪ್ರಭಾವದಲ್ಲಿದ್ದಿರಬಹುದು ಎಂದು ಊಹಿಸಿದ್ದಾರೆ. ಇನ್ನೂ ಕೆಲವರು ಆತ ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಊಹಾಪೋಹಗಳು ಏನೇ ಇದ್ದರೂ ಬೆಂಗಳೂರಿಗರು ರಸ್ತೆಯಲ್ಲಿ ಸುರಕ್ಷಿತವಾಗಿ ಓಡಾಡಬೇಕಿದ್ದಲ್ಲಿ ಮಯ್ಯೆಲ್ಲಾ ಕಣ್ಣಾಗಿದ್ದರೂ ಸಾಲದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 am, Fri, 26 September 25

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ