ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ

ಬೆಳ್ಳಂಬೆಳಗ್ಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕ್ಯಾತನಹಳ್ಳಿಯ ಪ್ರಧಾನ್​ ಕಾಡಾನೆ ದಾಳಿಗೆ ಬಲಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ
ಮೃತದೇಹದ ಎದುರು ಕಣ್ಣೀರು ಹಾಕುತ್ತಿರುವ ಕುಟುಂಬಸ್ಥರು
Edited By:

Updated on: Dec 19, 2020 | 10:48 AM

ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೋರ್ವ  ಬಲಿಯಾದ ಘಟನೆ  ಆಲೂರು ತಾಲೂಕಿನ ಭಕ್ತರವಳ್ಳಿ ಗ್ರಾಮದಲ್ಲಿ ನಡೆದಿದೆ.  ಕ್ಯಾತನಹಳ್ಳಿ ನಿವಾಸಿ ಪ್ರಧಾನ್​ (35) ಮೃತ.

ಎಂದಿನಂತೆ ಇಂದು ಮುಂಜಾನೆಯೇ ಪ್ರಧಾನ್​ ಜಮೀನಿಗೆ ತೆರಳಿ, ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ಮಾಡಿದೆ. ಇನ್ನು ಕಾಡಾನೆಗಳ ಹಾವಳಿಯ ಬಗ್ಗೆ ಈಗಾಗಲೇ ಹಲವು ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರೂ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ..ಈಗ ಒಂದು ಜೀವವೇ ಹೋಯ್ತು ಎಂದು ಕುಟುಂಬಸ್ಥರು ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಕಾಡಾನೆ ನೋಡಲು ಬಂದಿದ್ದಾತ ಸಲಗದ ದಾಳಿಗೆ ಬಲಿಯಾದ

Published On - 10:46 am, Sat, 19 December 20