AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!

ವ್ಯಕ್ತಿಯೊಬ್ಬರು ವಿಧಾನಸೌಧದ ಪಡಸಾಲೆಯಲ್ಲಿ ಚಿನ್ನಾಭರಣ ಹಾಗೂ ನಗದು ಇದ್ದ ಕೈಚೀಲ ಬಿಟ್ಟು ಹೋದ ಘಟನೆ ವರದಿಯಾಗಿದ್ದು, ನಂತರ ಪೊಲೀಸರು ಅದನ್ನು ಪತ್ತೆಹಚ್ಚಿ ಅವರಿಗೆ ಮರಳಿಸಿದ್ದಾರೆ. ಇದರಿಂದಾಗಿ ಕೆಲ ವದಂತಿಗಳೂ ಹರಡುವಂತಾಯಿತು. ಕೊನೆಗೆ ವಿಧಾನಸೌಧದ ಠಾಣೆ ಪೊಲೀಸರ ಮಧ್ಯ ಪ್ರವೇಶದಿಂದ ಪ್ರಕರಣ ಸುಖಾಂತ್ಯವಾಯಿತು.

ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on:Feb 11, 2026 | 3:10 PM

Share

ಬೆಂಗಳೂರು, ಫೆಬ್ರವರಿ 10: ವಿಧಾನಸೌಧದ ಸಚಿವರ ಕಚೇರಿಯೊಂದರ ಬಳಿ ವ್ಯಕ್ತಿಯೊಬ್ಬರು 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಬಿಟ್ಟುಹೋದ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಸಚಿವರೊಬ್ಬರನ್ನು ಭೇಟಿಯಾಗಲು ಬಂದಾಗ ಕೈಚೀಲವನ್ನು ಮರೆತುಹೋಗಿದ್ದರು. ಮರುದಿನ ಬಂದಾಗ ಚೀಲ ಅಲ್ಲಿ ಇಲ್ಲದೇ ಇದ್ದುದು ಕಂಡು ಗಾಬರಿಯಾಗಿದ್ದಾರೆ. ನಂತರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ. ನಂತರ ಆತನನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಏತನ್ಮಧ್ಯೆ, ಸಚಿವರ ಕಚೇರಿಯಿಂದಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವಾಗಿದೆ ಎಂಬ ವದಂತಿ ಹರಡಿದೆ. ಈ ವಿಚಾರವಾಗಿ ಸಚಿವರ ಕಚೇರಿ ಸ್ಪಷ್ಟನೆ ನೀಡಿದ್ದು, ಕಚೇರಿಯಲ್ಲಿ ಎಲ್ಲೂ ಕಳ್ಳತನವಾಗಿಲ್ಲ ಎಂದು ದೃಢಪಡಿಸಿದೆ. ವ್ಯಕ್ತಿಯೊಬ್ಬರು ವಿಧಾನಸೌಧದ ಪಡಸಾಲೆಯಲ್ಲಿ ಬ್ಯಾಗ್ ಬಿಟ್ಟು ಹೋಗಿದ್ದರು. ಭದ್ರತಾ ಸಿಬ್ಬಂದಿ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕಚೇರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Tue, 10 February 26

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು