AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ

ಈ ಕೂಲಿ ಕಾರ್ಮಿಕ ಶುಂಠಿ ಕೃಷಿಗಾಗಿ ಅರಸೀಕೆರೆ ತಾಲ್ಲೂಕಿನಿಂದ ಆಲೂರಿಗೆ ಬಂದಿದ್ದನಂತೆ. ಲಾಕ್ಡೌನ್ ಕಾರಣದಿಂದಾಗಿ ಕೆಲಸ ಇಲ್ಲದೆ ಊಟಕ್ಕೆ ಪರದಾಡಿದ್ದಾನೆ. ಹಸಿವು ತಾಳಲಾರದೆ ಕಸದ ರಾಶಿ ತಡಕಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಆತನಿಗೆ ಊಟ ನೀಡಿ ಆಸರೆಯಾಗಿದ್ದಾರೆ.

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ
ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಡಿದ ಕಾರ್ಮಿಕ
ಆಯೇಷಾ ಬಾನು
ಆಯೇಷಾ ಬಾನು|

Updated on: May 02, 2021 | 8:45 AM

Share

ಹಾಸನ: ಮಹಾಮಾರಿ ಕೊರೊನಾ 2ನೇ ಅಲೆ ಇಡೀ ದೇಶವನ್ನು ಆತಂಕಕ್ಕೆ ತಳ್ಳಿದೆ. ಕೊರೊನಾ ಕರ್ಫ್ಯೂನಿಂದಾಗಿ ಕರ್ನಾಟಕ ಲಾಕ್ ಆಗಿದ್ದು ತುತ್ತು ಅನ್ನಕ್ಕೂ ಜನ ಪರಿತಪಿಸುವಂತಾಗಿದೆ. ಕೆಲಸವಿಲ್ಲದೆ, ಹಣವಿಲ್ಲದೆ ಜನ ಪರದಾಡಿತ್ತಿದ್ದಾರೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೋನಪೇಟೆ ಗ್ರಾಮದಲ್ಲಿ ಊಟಕ್ಕಾಗಿ ಕಾರ್ಮಿಕ ರಾಜು ಪರದಾಡಿದ ಘಟನೆ ನಡೆದಿದೆ. ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕಾಗಿ ಕಾರ್ಮಿಕ ತಡಕಾಡಿದ್ದಾನೆ. ಹಸಿವಿಗಾಗಿ ಕಣ್ಣೀರು ಹಾಕಿದಂತಹ ಮನಕಲಕುವ ಘಟನೆ ನಡೆದಿದೆ. ಸದ್ಯ ಕೂಲಿ ಕಾರ್ಮಿಕನಿಗೆ ಸ್ಥಳೀಯ ನಿವಾಸಿಗಳು ನೆರವಾಗಿದ್ದು ಆತನ ಹಸಿವು ನೀಗಿಸಿದ್ದಾರೆ.

ಈ ಕೂಲಿ ಕಾರ್ಮಿಕ ಶುಂಠಿ ಕೃಷಿಗಾಗಿ ಅರಸೀಕೆರೆ ತಾಲ್ಲೂಕಿನಿಂದ ಆಲೂರಿಗೆ ಬಂದಿದ್ದನಂತೆ. ಲಾಕ್ಡೌನ್ ಕಾರಣದಿಂದಾಗಿ ಕೆಲಸ ಇಲ್ಲದೆ ಊಟಕ್ಕೆ ಪರದಾಡಿದ್ದಾನೆ. ಹಸಿವು ತಾಳಲಾರದೆ ಕಸದ ರಾಶಿ ತಡಕಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಆತನಿಗೆ ಊಟ ನೀಡಿ ಆಸರೆಯಾಗಿದ್ದಾರೆ. ಬಳಿಕ ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಕೊರೊನಾ ಕರ್ಫ್ಯೂನಿಂದಾಗಿ ಜನ ಹಣವಿಲ್ಲದೆ ಊಟಕ್ಕಾಗಿ ಪರಿತಪಿಸುವ ಸ್ಥಿತಿ ನಿರ್ಮಾಣವಾಗುತ್ತಿದೆ. ಕೊರೊನಾದ ಮೊದಲ ಅಲೆಯಲ್ಲಿ ಅನುಭವಿಸಿದ ಕಷ್ಟಗಳು ಮತ್ತೆ ಬರುತ್ತಿವೆ. ಎಷ್ಟೋ ಮಂದಿ ಊಟವಿಲ್ಲದೆ ಬೀದಿ ಬೀದಿಗಳಲ್ಲಿ ನರಳುತ್ತಿದ್ದಾರೆ. ಅವರ ಈ ಕಷ್ಟಕ್ಕೆ ಅನೇಕ ಸ್ವಯಂ ಸೇವಾ ಸಂಘಗಳು ಮುಂದೆ ಬಂದು ಹಸಿವು ನೀಗಿಸುವ ಕೆಲಸಗಳನ್ನು ಮಾಡುತ್ತಿವೆ.

man search food in garbage

ಕೂಲಿ ಕಾರ್ಮಿಕನಿಗೆ ಸ್ಥಳೀಯ ನಿವಾಸಿಗಳು ಊಟ ನೀಡಿ ನೆರವಾದ್ರು.

man search food in garbage

ಕಾರ್ಮಿಕನಿಗೆ ಕೊರೊನಾ ಟೆಸ್ಟ್ ಮಾಡಿದ ಸಿಬ್ಬಂದಿ

ಇದನ್ನೂ ಓದಿ: ಕೊರವ ಕುಟುಂಬಗಳಿಗೆ ಕೊರೊನಾ ಕಂಟಕ, ಪರದಾಡುತ್ತಿವೆ ಪುಟಾಣಿ ಮಕ್ಕಳು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು