AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ

ಈ ಕೂಲಿ ಕಾರ್ಮಿಕ ಶುಂಠಿ ಕೃಷಿಗಾಗಿ ಅರಸೀಕೆರೆ ತಾಲ್ಲೂಕಿನಿಂದ ಆಲೂರಿಗೆ ಬಂದಿದ್ದನಂತೆ. ಲಾಕ್ಡೌನ್ ಕಾರಣದಿಂದಾಗಿ ಕೆಲಸ ಇಲ್ಲದೆ ಊಟಕ್ಕೆ ಪರದಾಡಿದ್ದಾನೆ. ಹಸಿವು ತಾಳಲಾರದೆ ಕಸದ ರಾಶಿ ತಡಕಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಆತನಿಗೆ ಊಟ ನೀಡಿ ಆಸರೆಯಾಗಿದ್ದಾರೆ.

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ
ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಡಿದ ಕಾರ್ಮಿಕ
Follow us
ಆಯೇಷಾ ಬಾನು
|

Updated on: May 02, 2021 | 8:45 AM

ಹಾಸನ: ಮಹಾಮಾರಿ ಕೊರೊನಾ 2ನೇ ಅಲೆ ಇಡೀ ದೇಶವನ್ನು ಆತಂಕಕ್ಕೆ ತಳ್ಳಿದೆ. ಕೊರೊನಾ ಕರ್ಫ್ಯೂನಿಂದಾಗಿ ಕರ್ನಾಟಕ ಲಾಕ್ ಆಗಿದ್ದು ತುತ್ತು ಅನ್ನಕ್ಕೂ ಜನ ಪರಿತಪಿಸುವಂತಾಗಿದೆ. ಕೆಲಸವಿಲ್ಲದೆ, ಹಣವಿಲ್ಲದೆ ಜನ ಪರದಾಡಿತ್ತಿದ್ದಾರೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೋನಪೇಟೆ ಗ್ರಾಮದಲ್ಲಿ ಊಟಕ್ಕಾಗಿ ಕಾರ್ಮಿಕ ರಾಜು ಪರದಾಡಿದ ಘಟನೆ ನಡೆದಿದೆ. ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕಾಗಿ ಕಾರ್ಮಿಕ ತಡಕಾಡಿದ್ದಾನೆ. ಹಸಿವಿಗಾಗಿ ಕಣ್ಣೀರು ಹಾಕಿದಂತಹ ಮನಕಲಕುವ ಘಟನೆ ನಡೆದಿದೆ. ಸದ್ಯ ಕೂಲಿ ಕಾರ್ಮಿಕನಿಗೆ ಸ್ಥಳೀಯ ನಿವಾಸಿಗಳು ನೆರವಾಗಿದ್ದು ಆತನ ಹಸಿವು ನೀಗಿಸಿದ್ದಾರೆ.

ಈ ಕೂಲಿ ಕಾರ್ಮಿಕ ಶುಂಠಿ ಕೃಷಿಗಾಗಿ ಅರಸೀಕೆರೆ ತಾಲ್ಲೂಕಿನಿಂದ ಆಲೂರಿಗೆ ಬಂದಿದ್ದನಂತೆ. ಲಾಕ್ಡೌನ್ ಕಾರಣದಿಂದಾಗಿ ಕೆಲಸ ಇಲ್ಲದೆ ಊಟಕ್ಕೆ ಪರದಾಡಿದ್ದಾನೆ. ಹಸಿವು ತಾಳಲಾರದೆ ಕಸದ ರಾಶಿ ತಡಕಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಆತನಿಗೆ ಊಟ ನೀಡಿ ಆಸರೆಯಾಗಿದ್ದಾರೆ. ಬಳಿಕ ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಕೊರೊನಾ ಕರ್ಫ್ಯೂನಿಂದಾಗಿ ಜನ ಹಣವಿಲ್ಲದೆ ಊಟಕ್ಕಾಗಿ ಪರಿತಪಿಸುವ ಸ್ಥಿತಿ ನಿರ್ಮಾಣವಾಗುತ್ತಿದೆ. ಕೊರೊನಾದ ಮೊದಲ ಅಲೆಯಲ್ಲಿ ಅನುಭವಿಸಿದ ಕಷ್ಟಗಳು ಮತ್ತೆ ಬರುತ್ತಿವೆ. ಎಷ್ಟೋ ಮಂದಿ ಊಟವಿಲ್ಲದೆ ಬೀದಿ ಬೀದಿಗಳಲ್ಲಿ ನರಳುತ್ತಿದ್ದಾರೆ. ಅವರ ಈ ಕಷ್ಟಕ್ಕೆ ಅನೇಕ ಸ್ವಯಂ ಸೇವಾ ಸಂಘಗಳು ಮುಂದೆ ಬಂದು ಹಸಿವು ನೀಗಿಸುವ ಕೆಲಸಗಳನ್ನು ಮಾಡುತ್ತಿವೆ.

man search food in garbage

ಕೂಲಿ ಕಾರ್ಮಿಕನಿಗೆ ಸ್ಥಳೀಯ ನಿವಾಸಿಗಳು ಊಟ ನೀಡಿ ನೆರವಾದ್ರು.

man search food in garbage

ಕಾರ್ಮಿಕನಿಗೆ ಕೊರೊನಾ ಟೆಸ್ಟ್ ಮಾಡಿದ ಸಿಬ್ಬಂದಿ

ಇದನ್ನೂ ಓದಿ: ಕೊರವ ಕುಟುಂಬಗಳಿಗೆ ಕೊರೊನಾ ಕಂಟಕ, ಪರದಾಡುತ್ತಿವೆ ಪುಟಾಣಿ ಮಕ್ಕಳು

ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್