AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯಕ್ಕೆ ಹೋಗಿಬಂದಿದ್ದ ನಾಗರಬಾವಿಯ ಅಪಾರ್ಟ್‌ಮೆಂಟ್‌ನಲ್ಲಿದ್ದ ವೃದ್ಧನಿಗೆ ಕೊರೊನಾ ಪಾಸಿಟಿವ್

ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರನ್ನು ಟೆಸ್ಟ್​ಗೆ ಒಳಪಡಿಸಿದ್ದು ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ವೃದ್ಧನ ಸಂಪರ್ಕದಲ್ಲಿದ್ದವರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅಪಾರ್ಟ್‌ಮೆಂಟ್‌ನ ಮೊದಲನೇ ಮಹಡಿಯಲ್ಲಿದ್ದ 40 ಜನರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ.

ಮಂತ್ರಾಲಯಕ್ಕೆ ಹೋಗಿಬಂದಿದ್ದ ನಾಗರಬಾವಿಯ ಅಪಾರ್ಟ್‌ಮೆಂಟ್‌ನಲ್ಲಿದ್ದ ವೃದ್ಧನಿಗೆ ಕೊರೊನಾ ಪಾಸಿಟಿವ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Mar 23, 2021 | 3:21 PM

Share

ಬೆಂಗಳೂರು: ಮಂತ್ರಾಲಯಕ್ಕೆ ಹೋಗಿಬಂದಿದ್ದ ವೃದ್ಧನಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರಿನ ನಾಗರಬಾವಿಯ ಅಪಾರ್ಟ್‌ಮೆಂಟ್‌ನಲ್ಲಿದ್ದ ವೃದ್ಧ ಇತ್ತೀಚೆಗೆ ಮಂತ್ರಾಲಯಕ್ಕೆ ಹೋಗಿದ್ದರು. ಈಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಸೋಂಕಿತ ವೃದ್ಧ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರನ್ನು ಟೆಸ್ಟ್​ಗೆ ಒಳಪಡಿಸಿದ್ದು ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ವೃದ್ಧನ ಸಂಪರ್ಕದಲ್ಲಿದ್ದವರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅಪಾರ್ಟ್‌ಮೆಂಟ್‌ನ ಮೊದಲನೇ ಮಹಡಿಯಲ್ಲಿದ್ದ 40 ಜನರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಹಾಗೂ ಅಪಾರ್ಟ್‌ಮೆಂಟ್ ಬಳಿಯ ಸರ್ಕಾರಿ ಶಾಲೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ.

ಒಂದೇ ಮನೆಯಲ್ಲಿ 6 ಜನರಿಗೆ ಕೊರೊನಾ ಇದೇ ರೀತಿ ಸಿಲಿಕಾನ್ ಸಿಟಿಯ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲೂ ಕೊರೊನಾ ಸ್ಫೋಟಗೊಂಡಿದೆ. ಬಿಟಿಎಂ ಲೇಔಟ್‌ನ ಒಂದೇ ಮನೆಯಲ್ಲಿ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಮತ್ತೊಂದು ಕಡೆ ಎಲ್ಐಸಿ ಕೋಟ್ರಸ್​ನಲ್ಲಿ ಓರ್ವ ವ್ಯಕ್ತಿ ಗೆ ಕೊರೊನಾ ಸೋಂಕು ತಗುಲಿದೆ. ಕೊವಿಡ್ ಪಾಸಿಟಿವ್​ನಿಂದಾಗಿ ಕೋಟ್ರಸ್​ ಹಾಗೂ ಮನೆಗೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಕೋಟ್ರಸ್ ಮತ್ತು ಮನೆಯ ಸುತ್ತ ಮುತ್ತಲಿರುವ ಜನರಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ಕೋಟ್ರಸ್​ನಲ್ಲಿ ಬಹುತೇಕ ಜನರು ಬ್ಯಾಂಕ್​ನಲ್ಲಿ ಕೆಲಸ ಮಾಡುವವರು ಹೀಗಾಗಿ ಬ್ಯಾಂಕ್​ಗೆ ಬರುವ ಜನರ ಜೊತೆಗೆ ಸಂಪರ್ಕ ಜಾಸ್ತಿ ಇರುತ್ತದೆ. ಇದೇ ಕಾರಣಕ್ಕಾಗಿ ಆರೋಗ್ಯ ಅಧಿಕಾರಿಗಳಿಗೆ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಇಂದು 1,179 ಕೊರೊನಾ ಕೇಸ್ ಪತ್ತೆ

Published On - 1:56 pm, Tue, 23 March 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?