AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯಕ್ಕೆ ಹೋಗಿಬಂದಿದ್ದ ನಾಗರಬಾವಿಯ ಅಪಾರ್ಟ್‌ಮೆಂಟ್‌ನಲ್ಲಿದ್ದ ವೃದ್ಧನಿಗೆ ಕೊರೊನಾ ಪಾಸಿಟಿವ್

ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರನ್ನು ಟೆಸ್ಟ್​ಗೆ ಒಳಪಡಿಸಿದ್ದು ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ವೃದ್ಧನ ಸಂಪರ್ಕದಲ್ಲಿದ್ದವರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅಪಾರ್ಟ್‌ಮೆಂಟ್‌ನ ಮೊದಲನೇ ಮಹಡಿಯಲ್ಲಿದ್ದ 40 ಜನರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ.

ಮಂತ್ರಾಲಯಕ್ಕೆ ಹೋಗಿಬಂದಿದ್ದ ನಾಗರಬಾವಿಯ ಅಪಾರ್ಟ್‌ಮೆಂಟ್‌ನಲ್ಲಿದ್ದ ವೃದ್ಧನಿಗೆ ಕೊರೊನಾ ಪಾಸಿಟಿವ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Mar 23, 2021 | 3:21 PM

Share

ಬೆಂಗಳೂರು: ಮಂತ್ರಾಲಯಕ್ಕೆ ಹೋಗಿಬಂದಿದ್ದ ವೃದ್ಧನಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರಿನ ನಾಗರಬಾವಿಯ ಅಪಾರ್ಟ್‌ಮೆಂಟ್‌ನಲ್ಲಿದ್ದ ವೃದ್ಧ ಇತ್ತೀಚೆಗೆ ಮಂತ್ರಾಲಯಕ್ಕೆ ಹೋಗಿದ್ದರು. ಈಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಸೋಂಕಿತ ವೃದ್ಧ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರನ್ನು ಟೆಸ್ಟ್​ಗೆ ಒಳಪಡಿಸಿದ್ದು ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ವೃದ್ಧನ ಸಂಪರ್ಕದಲ್ಲಿದ್ದವರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅಪಾರ್ಟ್‌ಮೆಂಟ್‌ನ ಮೊದಲನೇ ಮಹಡಿಯಲ್ಲಿದ್ದ 40 ಜನರಿಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಹಾಗೂ ಅಪಾರ್ಟ್‌ಮೆಂಟ್ ಬಳಿಯ ಸರ್ಕಾರಿ ಶಾಲೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ.

ಒಂದೇ ಮನೆಯಲ್ಲಿ 6 ಜನರಿಗೆ ಕೊರೊನಾ ಇದೇ ರೀತಿ ಸಿಲಿಕಾನ್ ಸಿಟಿಯ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲೂ ಕೊರೊನಾ ಸ್ಫೋಟಗೊಂಡಿದೆ. ಬಿಟಿಎಂ ಲೇಔಟ್‌ನ ಒಂದೇ ಮನೆಯಲ್ಲಿ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಮತ್ತೊಂದು ಕಡೆ ಎಲ್ಐಸಿ ಕೋಟ್ರಸ್​ನಲ್ಲಿ ಓರ್ವ ವ್ಯಕ್ತಿ ಗೆ ಕೊರೊನಾ ಸೋಂಕು ತಗುಲಿದೆ. ಕೊವಿಡ್ ಪಾಸಿಟಿವ್​ನಿಂದಾಗಿ ಕೋಟ್ರಸ್​ ಹಾಗೂ ಮನೆಗೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಕೋಟ್ರಸ್ ಮತ್ತು ಮನೆಯ ಸುತ್ತ ಮುತ್ತಲಿರುವ ಜನರಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ಕೋಟ್ರಸ್​ನಲ್ಲಿ ಬಹುತೇಕ ಜನರು ಬ್ಯಾಂಕ್​ನಲ್ಲಿ ಕೆಲಸ ಮಾಡುವವರು ಹೀಗಾಗಿ ಬ್ಯಾಂಕ್​ಗೆ ಬರುವ ಜನರ ಜೊತೆಗೆ ಸಂಪರ್ಕ ಜಾಸ್ತಿ ಇರುತ್ತದೆ. ಇದೇ ಕಾರಣಕ್ಕಾಗಿ ಆರೋಗ್ಯ ಅಧಿಕಾರಿಗಳಿಗೆ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಇಂದು 1,179 ಕೊರೊನಾ ಕೇಸ್ ಪತ್ತೆ

Published On - 1:56 pm, Tue, 23 March 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ