AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಂದರ ಸಂಸಾರಕ್ಕೆ ಕೊಳ್ಳಿ ಇಟ್ಟ ಆ ಒಂದು ವಿಷಯ.. ನಿರ್ಜನ ಪ್ರದೇಶದಲ್ಲಿ ಗಂಡನ ಆತ್ಮಹತ್ಯೆ, ಪತ್ನಿ ಆಸ್ಪತ್ರೆಗೆ ದಾಖಲು

ಸುಂದರ ಕುಟುಂಬ.. ಅಪ್ಪ, ಅಮ್ಮನ ಜೊತೆ ಆರತಿಗೊಬ್ಬ ಮಗಳು, ಕೀರ್ತಿಗೊಬ್ಬ ಮಗನಿದ್ದ. ಎಲ್ರು ಖುಷಿಯಾಗೇ ಬದುಕು ದೂಡ್ತಿದ್ರು. ಮಕ್ಕಳ ಮೇಲೆ ಪೋಷಕರು ರಾಶಿ ರಾಶಿ ಕನಸುಕಂಡಿದ್ರು. ಆದ್ರೆ, ಸಂಸಾರದಲ್ಲಿ ಬೀಸಿದ ಬಿರುಗಾಳಿಯಿಂದ ಮನೆಯ ಒಡೆಯ ಮಸಣ ಸೇರಿದ್ರೆ, ಮನೆಯೊಡತಿ ಸಾವು ಬದುಕಿನ ನಡುವೆ ಹೋರಾಡ್ತಿದ್ದಾಳೆ.

ಸುಂದರ ಸಂಸಾರಕ್ಕೆ ಕೊಳ್ಳಿ ಇಟ್ಟ ಆ ಒಂದು ವಿಷಯ.. ನಿರ್ಜನ ಪ್ರದೇಶದಲ್ಲಿ ಗಂಡನ ಆತ್ಮಹತ್ಯೆ, ಪತ್ನಿ ಆಸ್ಪತ್ರೆಗೆ ದಾಖಲು
ನಿರ್ಜನ ಪ್ರದೇಶ (ಘಟನೆ ನಡೆದ ಸ್ಥಳ)
TV9 Web
| Edited By: |

Updated on: Jun 08, 2021 | 8:05 AM

Share

ಮೈಸೂರು: ನಾಗೇಶ್ ಹಾಗೂ ಸೌಮ್ಯಾ ಇಬ್ಬರು ಗಂಡ, ಹೆಂಡ್ತಿ. ಮೂಲತಃ ಚಾಮರಾಜನಗರ ಜಿಲ್ಲೆ ಗಾಳಿಪುರ ಗ್ರಾಮದವರು. ಸದ್ಯ ಮೈಸೂರಿನ ಹೊಸಬಂಡಿಕೇರಿಯಲ್ಲಿ ವಾಸವಾಗಿದ್ರು. ಈ ನಾಗೇಶ್ ವೆಲ್ಡಿಂಗ್ ಕೆಲ್ಸ್ ಮಾಡ್ತಿದ್ರು. 15 ವರ್ಷದ ಮಗ ಹಾಗೂ 13ವರ್ಷದ ಮಗಳ ಜೊತೆ ಖುಷಿಯಾಗಿ ಕಾಲ ಕಳೀತಿದ್ರು. ಆದ್ರೆ, ಸಡನ್ ಆಗಿ ಅದೇನ್ ಆಯ್ತೋ ಗೊತ್ತಿಲ್ಲ. ಇವರ ಜೀವನದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಮೈಸೂರು ಹೊರವಲಯದ ಶ್ರೀನಗರದ ಸಮೀಪ, ನಾಗೇಶ್ ಶವ ಪತ್ತೆಯಾಗಿದೆ. ಇಷ್ಟೇ ಅಲ್ಲ, ನಾಗೇಶ್ ಪತ್ನಿ ಸೌಮ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರಿಗೂ ಏನಾಗಿದೆ ಅನ್ನೋದು ಗೊತ್ತಾಗಿಲ್ಲ ಯಾಕಂದ್ರೆ ಏನಾಯ್ತು ಅಂತ ಹೇಳಬೇಕಾದ ಸೌಮ್ಯ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ, ಸ್ಥಳೀಯರ ಪ್ರಕಾರ ಗಂಡ ಹೆಂಡತಿ ಇಬ್ಬರೂ ಮೊನ್ನೆ ಸಂಜೆ ವರುಣಾ ನಾಲೆ ಬಳಿ ಬಂದಿದ್ದಾರೆ ಈ ವೇಳೆ ಪತಿ, ಪತ್ನಿಯ ಕುತ್ತಿಗೆ ಕೊಯ್ದು ಕೆಳಗೆ ತಳ್ಳಿದ್ದಾನೆ. ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆವರೆಗೂ ಸೌಮ್ಯಾ ರಕ್ತದ ಮಡುವಿನಲ್ಲಿ ಬಿದ್ದಿದ್ದು, ನಿನ್ನೆ ಬೆಳಗ್ಗೆ ಸ್ಥಳೀಯರೊಬ್ಬರು ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರಂತೆ.

ಸದ್ಯ, ಮೈಸೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಂಬಂಧಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಇಷ್ಟೇ ಅಲ್ಲ, ನಿಗೂಢವಾದ ಈ ಕೇಸ್ನ ಅಸಲಿ ಸತ್ಯ ಗೊತ್ತಾಗಬೇಕಿದ್ರೆ ಐಸಿಯುನಲ್ಲಿ ಚಿಕಿತ್ಸೆ ಪಡೀತಿರೋ ಸೌಮ್ಯಾ ಗುಣಮುಖ ಆಗಬೇಕಿದೆ.

ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ: ಹಿರಿಯ ಪುತ್ರಿಗೆ ಸರ್ಕಾರಿ ಉದ್ಯೋಗ, ಮನೆ ದುರಸ್ಥಿಯ ಭರವಸೆ ನೀಡಿದ ಸಚಿವ ಸುರೇಶ್​ ಕುಮಾರ್

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!