Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಹಫ್ತಾ ವಸೂಲಿ; ತಪ್ಪೊಪ್ಪಿಕೊಂಡ ಸಿಕ್ಕಿಬಿದ್ದ ವ್ಯಕ್ತಿ

ವ್ಯಕ್ತಿ ಬೆಂಗಳೂರಿನ ಟೌನ್​ಹಾಲ್​ ಬಳಿ ಹಫ್ತಾ ವಸೂಲಿ ಮಾಡುತ್ತಿದ್ದ. ಸುಮಾರು 100 ವ್ಯಾಪಾರಿಗಳಿಂದ ತಲಾ 50 ರೂ. ವಸೂಲಿ ಮಾಡುತ್ತಿದ್ದ. ವ್ಯಾಪಾರಿಗಳಿಂದ ಹಫ್ತಾ ವಸೂಲಿ ಮಾಡುವ ವೇಳೆ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಆತ ಹಫ್ತಾ ವಸೂಲಿ ಮಾಡುತ್ತಿದ್ದ ದೃಶ್ಯ ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಹಫ್ತಾ ವಸೂಲಿ; ತಪ್ಪೊಪ್ಪಿಕೊಂಡ ಸಿಕ್ಕಿಬಿದ್ದ ವ್ಯಕ್ತಿ
ಹಫ್ತಾ ವಸೂಲಿ ಮಾಡುತ್ತಿರುವ ವ್ಯಕ್ತಿ
Follow us
sandhya thejappa
|

Updated on: May 30, 2021 | 8:46 AM

ಬೆಂಗಳೂರು: ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್​ಡೌನ್​ ವಿಧಿಸಿದೆ. ಇಡೀ ರಾಜ್ಯ ಸಂಪೂರ್ಣ ಬಂದ್ ಆಗಿರುವ ಕಾರಣ ವ್ಯಾಪಾರಸ್ಥರಿಗೆ ವ್ಯಾಪಾರವಾಗದೆ ಬದುಕು ನಡೆಸುವುದು ತೀರಾ ಕಷ್ಟವಾಗಿದೆ. ಚಿಕ್ಕ ಚಿಕ್ಕ ವ್ಯಾಪಾರಿಗಳಿಗಂತೂ ಲಾಕ್​ಡೌನ್​ನಿಂದಾದ ತೊಂದರೆ ಅಷ್ಟಿಷ್ಟಲ್ಲ. ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯ ವರೆಗೆ ಅವಕಾಶ ಇರುವುದರಿಂದ ಬಂದಷ್ಟು ಹಣ ಬರಲಿ ಅಂತ ಬೀದಿ ಬದಿ ವ್ಯಾಪಾರಿಗಳು ಪರದಾಡುತ್ತಿದ್ದಾರೆ. ಈ ನಡುವೆ ಮಾನವೀಯತೆ ಇಲ್ಲದೆ ವ್ಯಕ್ತಿಯೊಬ್ಬ ಬೀದಿ ಬದಿ ವ್ಯಾಪಾರಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾನೆ. ಈ ದೃಶ್ಯ ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿದೆ.

ವ್ಯಕ್ತಿ ಬೆಂಗಳೂರಿನ ಟೌನ್​ಹಾಲ್​ ಬಳಿ ಹಫ್ತಾ ವಸೂಲಿ ಮಾಡುತ್ತಿದ್ದ. ಸುಮಾರು 100 ವ್ಯಾಪಾರಿಗಳಿಂದ ತಲಾ 50 ರೂ. ವಸೂಲಿ ಮಾಡುತ್ತಿದ್ದ. ವ್ಯಾಪಾರಿಗಳಿಂದ ಹಫ್ತಾ ವಸೂಲಿ ಮಾಡುವ ವೇಳೆ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಆತ ಹಫ್ತಾ ವಸೂಲಿ ಮಾಡುತ್ತಿದ್ದ ದೃಶ್ಯ ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿದೆ. ವ್ಯಕ್ತಿ, ಸತೀಶ್ ಮತ್ತು ಮಂಜು ಎಂಬುವವರ ಸೂಚನೆ ಮೇರೆಗೆ ವಸೂಲಿ ಮಾಡುತ್ತಿದ್ದ. ಕೊನೆಗೆ ಹಫ್ತಾ ವಸೂಲಿ ಮಾಡುತ್ತಿರುವುದು ನಿಜ ಎಂದು ವ್ಯಕ್ತಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ವ್ಯಾಪಾರಿಗಳು ಒಂದೊತ್ತಿನ ಊಟಕ್ಕೆ ಬೆಳಂಬೆಳಗ್ಗೆ ಹಣ್ಣು, ತರಕಾರಿ ಮಾರಲು ಬರುತ್ತಿದ್ದಾರೆ. ನಾಲ್ಕು ಗಂಟೆಯೊಳಗೆ ತಂದಿರುವ ಹಣ್ಣು, ತರಕಾರಿ ಮಾರಾಟ ಮಾಡಲು ಹರಸಾಹಸ ಪಡುತ್ತಿದ್ದಾರೆ. ಇನ್ನೂರು, ಮುನ್ನೂರು ರೂಪಾಯಿ ಲಾಭ ಬರುವುದೂ ಕಷ್ಟ. ಇಂತಹದರಲ್ಲಿ ಒಂದು ತಳ್ಳುವ ಗಾಡಿ ವ್ಯಾಪಾರಿಯಿಂದ 50 ರೂಪಾಯಿ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಟೌನ್​ಹಾಲ್​ ಎದುರು 100 ಕ್ಕೂ ಅಧಿಕ ತಳ್ಳುವ ಗಾಡಿ ವ್ಯಾಪಾರಸ್ಥರಿದ್ದು, ನಿತ್ಯ 50 ರೂ. ಯಂತೆ ಹಫ್ತಾ ವಸೂಲಿ ಮಾಡುತ್ತಾರೆ. ಹಫ್ತಾ ನೀಡದಿದ್ದರೆ ಅಂಗಡಿ ಹಾಕುವುದಕ್ಕೆ ಬಿಡುವುದಿಲ್ಲ ಎಂದು ಹೆದರಿಸುತ್ತಾರೆ ಎಂದು ಬೀದಿ ಬದಿಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ

ಕೊರೊನಾ ಗೆದ್ದ ಬಳ್ಳಾರಿಯ ಶತಾಯುಷಿ ದಂಪತಿ; ಹದಿನೈದು ದಿನಗಳಲ್ಲಿ ಕೊವಿಡ್​ನಿಂದ ಗುಣಮುಖ

ಇನ್ನಿಲ್ಲ ಜನಸಂಖ್ಯಾ ಸ್ಫೋಟ; ಶುರುವಾಗಲಿದೆ ಜನಸಂಖ್ಯಾ ಕುಸಿತ? ಜಾಗತಿಕ ಮಟ್ಟದಲ್ಲಿ ಏನೇನು ಬದಲಾವಣೆ? ಇಲ್ಲಿದೆ ಸಂಪೂರ್ಣ ವಿವರ

(man was making hafta from the street vendors at Bengaluru)

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?