AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ನಾಯಿಗೆ ಲೈಂಗಿಕ ಕಿರುಕುಳ ನೀಡಿ ಹೇಯ ಕೃತ್ಯ; ವಿಕೃತ ಮನಸಿನ ಆರೋಪಿ ಬಂಧನ

ನಾಯಿ ಮೇಲೆ ಎರಗಿರುವ‌ ಪಾಪಿ ಸೋಮಶೇಖರ್ ನಾಯಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ವಿಕೃತ ಮನಸಿನ ಸೋಮಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನಲ್ಲಿ ನಾಯಿಗೆ ಲೈಂಗಿಕ ಕಿರುಕುಳ ನೀಡಿ ಹೇಯ ಕೃತ್ಯ; ವಿಕೃತ ಮನಸಿನ ಆರೋಪಿ ಬಂಧನ
ಆರೋಪಿ ಸೋಮಶೇಖರ್
preethi shettigar
| Updated By: ಸಾಧು ಶ್ರೀನಾಥ್​|

Updated on: Feb 17, 2021 | 1:43 PM

Share

ಮೈಸೂರು: ಕಾಲ ಕೆಟ್ಟು ಹೋಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು ಮಕ್ಕಳು ಮಾತ್ರವಲ್ಲ ಪ್ರಾಣಿಗಳು ಕೂಡ ಸುರಕ್ಷಿತವಲ್ಲ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಮೈಸೂರಿನಲ್ಲಿ ನಡೆದಿರುವ ಅನಾಗರಿಕ ಹಾಗೂ ಹೇಯ ಕೃತ್ಯ. ಹೌದು ಮೈಸೂರಿನ ನಿವಾಸಿ ಸೋಮಶೇಖರ್ ಒಬ್ಬ ವಿಕೃತ ಮನಸಿನವನಾಗಿದ್ದು, ಈತ ಮಾಡಿರುವ ಕೃತ್ಯ ಹೇಳಲಾಗದಷ್ಟು ಅಸಹ್ಯವಾಗಿದೆ. ನಾಗರಿಕ ಸಮಾಜದಲ್ಲಿ ಇಂತಹ ಮನಸ್ಥಿತಿಯವರು ಕೂಡ ಇರುತ್ತಾರೆ ಎನ್ನುವ ಬಗ್ಗೆ ಇನ್ನಾದರು ಜನರು ಎಚ್ಚೆತ್ತು ಕೊಳ್ಳುವುದು ಅಗತ್ಯವಾಗಿದೆ.

ನಾಯಿಯೊಂದಕ್ಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸೋಮಶೇಖರ್ ಜೈಲು ಸೇರಿದ್ದಾ‌ನೆ. ಅಚ್ಚರಿ ಆದರೂ ಇದು ಸತ್ಯ. ಮೈಸೂರಿನ ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ಬಳಿ ಇದೇ ತಿಂಗಳ 11ರಂದು ಈ ಹೇಯ ಕೃತ್ಯ ನಡೆದಿದ್ದು, ಈತನ ಈ ಅನಾಗರಿಕ‌ ಕೃತ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಹೌದು ಅಲ್ಲೇ ಇದ್ದ ನಾಯಿ ಮೇಲೆ ಎರಗಿರುವ‌ ಪಾಪಿ ಸೋಮಶೇಖರ್ ನಾಯಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ವಿಕೃತ ಮನಸಿನ ಸೋಮಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸೋಮಶೇಖರ್ ವಿರುದ್ಧ ಐಪಿಸಿ ಸೆಕ್ಷನ್​ 1860 ಯು /ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 ಯು/ಇಎಸ್​-11(1)(ಎ) ಅಡಿ ಪ್ರಕರಣ ದಾಖಲಿಸಲಾಗಿದೆ‌. ಏನೇ ಆಗಲಿ ಸೋಮಶೇಖರ್​ನ ಈ ಕೃತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದು ಮಾತ್ರ ನಿಜ.

ಇದನ್ನೂ ಓದಿ:Bengaluru Crime ಲೆಕ್ಚರರ್ ಮಗನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಯುವಕ ಅರೆಸ್ಟ್​

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​