AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ದನ ಮೇಯಿಸಲು ಹೋಗಿದ್ದ ವ್ಯಕ್ತಿ ನಾಪತ್ತೆ, ಚಿರತೆ ಹೊತ್ತೊಯ್ದಿರುವ ಶಂಕೆ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕುಲುಮೆಪಾಳ್ಯದಲ್ಲಿ ದನ ಮೇಯಿಸಲು ಹೋಗಿದ್ದ ವ್ಯಕ್ತಿಯೊರ್ವ ನಾಪತ್ತೆಯಾಗಿದ್ದಾರೆ. ಕಳೆದ ಬುಧವಾರ ಮಧ್ಯಾಹ್ನ ಬನ್ನೇರುಘಟ್ಟ ಅರಣ್ಯದಂಚಿನಲ್ಲಿ ದನ ಮೇಯಿಸಲು ಹೋದವರು ಮನೆಗೆ ವಾಪಸ್‌ ಆಗಿಲ್ಲ. ಈ ಹಿನ್ನೆಲೆಯಲ್ಲಿ ಚಿರತೆ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ.

ಆನೇಕಲ್: ದನ ಮೇಯಿಸಲು ಹೋಗಿದ್ದ ವ್ಯಕ್ತಿ ನಾಪತ್ತೆ, ಚಿರತೆ ಹೊತ್ತೊಯ್ದಿರುವ ಶಂಕೆ
ರಾಮು, ಆನೇಕಲ್​
| Updated By: ರಮೇಶ್ ಬಿ. ಜವಳಗೇರಾ|

Updated on: Dec 15, 2023 | 7:54 PM

Share

ಬೆಂಗಳೂರು, (ಡಿಸೆಂಬರ್ 15): ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕುಲುಮೆಪಾಳ್ಯದಲ್ಲಿ ದನ ಮೇಯಿಸಲು ಹೋಗಿದ್ದ ವ್ಯಕ್ತಿಯೊರ್ವ (Leopard attack) ನಾಪತ್ತೆಯಾಗಿದ್ದಾರೆ. ಕುಲುಮೆಪಾಳ್ಯ ವಾಸಿ ಪುಟ್ಟಸ್ವಾಮಿ (54) ಎನ್ನುವರು ಕಳೆದ ಬುಧವಾರ ಮಧ್ಯಾಹ್ನ ಬನ್ನೇರುಘಟ್ಟ ಅರಣ್ಯದಂಚಿನಲ್ಲಿ ದನ ಮೇಯಿಸಲು ಹೋದವರು ಮನೆಗೆ ವಾಪಸ್‌ ಆಗಿಲ್ಲ. ಕುಟುಂಬಸ್ಥರು ಎಲ್ಲ ಕಡೆ ಹುಡುಕಿದರೂ ಪುಟ್ಟಸ್ವಾಮಿ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಚಿರತೆ ಹೊತ್ತೊಯ್ದಿರುವ ಶಂಕೆ ಇದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರಿಂದ ಕಳೆದ ಎರಡು ದಿನಗಳಿಂದ ಶೋಧ ಕಾರ್ಯ ಮುಂದುವರಿದಿದೆ.

ಇತ್ತ ಕಾಣೆಯಾದ ಪುಟ್ಟಸ್ವಾಮಿ ಬಗ್ಗೆ ಸಣ್ಣ ಸುಳಿವು ಸಿಗುತ್ತಿಲ್ಲ. ಪುಟ್ಟಸ್ವಾಮಿ ನಾಪತ್ತೆ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕುಟುಂಬಸ್ಥರು ಆತಂಕದಲ್ಲೇ ದಿನದೂಡುವಂತಾಗಿದೆ.

ಯುವಕ ನೇಣಿಗೆ ಶರಣು

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನೇಕಲ್ ಪಟ್ಟಣದ ಭೋವಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಯೋಗೇಶ್(29) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದೊಂದು ವರ್ಷದ ಹಿಂದೆ ಮದುವೆಯಾಗಿದ್ದ ಯೋಗೇಶ್, ಪತ್ನಿ ಎಂಟು ತಿಂಗಳ ಗರ್ಭಿಣಿ.

ಕಳೆದ ಮೂರು ವರ್ಷದ ಹಿಂದೆ ಯೋಗೇಶ್ ಸಹೋದರ ಶಿವಕುಮಾರ್ ಸಹ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಇಡೀ ಕುಟುಂಬದ ಜವಾಬ್ದಾರಿ ಯೋಗೇಶ್ ಮೇಲಿತ್ತು. ಆದ್ರೆ ಯೋಗೇಶ್ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದ. ಇದರಿಂದ ಹಣಕಾಸಿನ ಸಮಸ್ಯೆಯಿಂದಾಗಿ ಇತ್ತೀಚಿಗೆ ಮನನೊಂದಿದ್ದ ಯೋಗೇಶ್, ಇಂದು ಬೆಳಗ್ಗೆ ಮನೆಯ ರೂಮಿನಲ್ಲೇ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು