AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಂದಲೇ ಅತ್ಯಾಚಾರ ಆರೋಪ.. ಪತ್ನಿ, ಮಗಳ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ಅಪ್ಪ

ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್​ನಲ್ಲಿ ನಿಲ್ಲಲಿಲ್ಲ. ವಾದ-ವಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.

ಮಗಳಿಂದಲೇ ಅತ್ಯಾಚಾರ ಆರೋಪ.. ಪತ್ನಿ, ಮಗಳ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ಅಪ್ಪ
ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪುದಿಯೊಕ್ಕಡ ಭರತ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Apr 02, 2021 | 11:26 AM

Share

ಮಡಿಕೇರಿ: ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ. ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್‌ನೋಟ್​ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್​ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್‌ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್​ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.

ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು

ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್‌ನೋಟ್‌ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್‌ನೋಟ್‌ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Madikeri Man Suicide

ಪುದಿಯೊಕ್ಕಡ ಭರತ್

ಇದನ್ನೂ ಓದಿ: ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ ನಂತರ ಎಚ್ಚೆತ್ತ ರಾಜ್ಯ ಸರ್ಕಾರ; ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

(Father writes Death Note and commits suicide in Madikeri)

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ