AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದರು.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2022 | 3:35 PM

Share

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರದಲ್ಲಿ ಗುರುತುಸಿಗಬಾರದೆಂದು ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿಯ ಅಂಗಡಿ ದೋಚಲು ಯತ್ನಿಸಿದ್ದವರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಾಗರಾಜ್, ಕುಮಾರ್ ಮತ್ತು ಬಹದ್ದೂರ್ ಸಿಂಗ್ ಬಂಧಿತರು.

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದ ಈ ಗ್ಯಾಂಗ್, ಈ ಹಿಂದೆ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನಿಸಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

2 ಬೈಕ್​ಗಳ ನಡುವೆ ಡಿಕ್ಕಿ: ದಂಪತಿ ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಾವು

ರಾಯಚೂರು: 2 ಬೈಕ್​ಗಳ ನಡುವೆ ಡಿಕ್ಕಿಯಾಗಿ, ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಜಕ್ಕಳದಿನ್ನಿ ಬಳಿ ಈ ದುರಂತ ನಡೆದಿದೆ. ವಿರೂಪಾಕ್ಷಪ್ಪಗೌಡ(45), ಪತ್ನಿ ಮಲ್ಲಮ್ಮ(38) ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಮೃತಪಟ್ಟವರು. ಮೃತ ದಂಪತಿ ಮಾನ್ವಿ ತಾಲೂಕಿನ ಮಲದಗುಡ್ಡದ ನಿವಾಸಿಗಳು. ಮತ್ತೊಂದು ಬೈಕ್​ನಲ್ಲಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕ ಓವರ್​ಟೇಕ್ ಮಾಡಲು ಹೋಗಿ 2 ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:30 pm, Thu, 2 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್