AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದರು.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2022 | 3:35 PM

Share

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರದಲ್ಲಿ ಗುರುತುಸಿಗಬಾರದೆಂದು ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿಯ ಅಂಗಡಿ ದೋಚಲು ಯತ್ನಿಸಿದ್ದವರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಾಗರಾಜ್, ಕುಮಾರ್ ಮತ್ತು ಬಹದ್ದೂರ್ ಸಿಂಗ್ ಬಂಧಿತರು.

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದ ಈ ಗ್ಯಾಂಗ್, ಈ ಹಿಂದೆ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನಿಸಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

2 ಬೈಕ್​ಗಳ ನಡುವೆ ಡಿಕ್ಕಿ: ದಂಪತಿ ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಾವು

ರಾಯಚೂರು: 2 ಬೈಕ್​ಗಳ ನಡುವೆ ಡಿಕ್ಕಿಯಾಗಿ, ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಜಕ್ಕಳದಿನ್ನಿ ಬಳಿ ಈ ದುರಂತ ನಡೆದಿದೆ. ವಿರೂಪಾಕ್ಷಪ್ಪಗೌಡ(45), ಪತ್ನಿ ಮಲ್ಲಮ್ಮ(38) ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಮೃತಪಟ್ಟವರು. ಮೃತ ದಂಪತಿ ಮಾನ್ವಿ ತಾಲೂಕಿನ ಮಲದಗುಡ್ಡದ ನಿವಾಸಿಗಳು. ಮತ್ತೊಂದು ಬೈಕ್​ನಲ್ಲಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕ ಓವರ್​ಟೇಕ್ ಮಾಡಲು ಹೋಗಿ 2 ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:30 pm, Thu, 2 June 22

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್