AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದರು.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Jun 02, 2022 | 3:35 PM

Share

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರದಲ್ಲಿ ಗುರುತುಸಿಗಬಾರದೆಂದು ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿಯ ಅಂಗಡಿ ದೋಚಲು ಯತ್ನಿಸಿದ್ದವರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಾಗರಾಜ್, ಕುಮಾರ್ ಮತ್ತು ಬಹದ್ದೂರ್ ಸಿಂಗ್ ಬಂಧಿತರು.

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದ ಈ ಗ್ಯಾಂಗ್, ಈ ಹಿಂದೆ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನಿಸಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

2 ಬೈಕ್​ಗಳ ನಡುವೆ ಡಿಕ್ಕಿ: ದಂಪತಿ ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಾವು

ರಾಯಚೂರು: 2 ಬೈಕ್​ಗಳ ನಡುವೆ ಡಿಕ್ಕಿಯಾಗಿ, ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಜಕ್ಕಳದಿನ್ನಿ ಬಳಿ ಈ ದುರಂತ ನಡೆದಿದೆ. ವಿರೂಪಾಕ್ಷಪ್ಪಗೌಡ(45), ಪತ್ನಿ ಮಲ್ಲಮ್ಮ(38) ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಮೃತಪಟ್ಟವರು. ಮೃತ ದಂಪತಿ ಮಾನ್ವಿ ತಾಲೂಕಿನ ಮಲದಗುಡ್ಡದ ನಿವಾಸಿಗಳು. ಮತ್ತೊಂದು ಬೈಕ್​ನಲ್ಲಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕ ಓವರ್​ಟೇಕ್ ಮಾಡಲು ಹೋಗಿ 2 ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:30 pm, Thu, 2 June 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು